ಅನ್ನದಾತರ ಅಂಗಳ

ಬಂಗಾರ ಬಾಳೆ ಬೆಳೆದ ಹುಳಿಮಾವಿನ ಮಹದೇವಸ್ವಾಮಿ

ಸುತ್ತೂರು ನಂಜುಂಡ ನಾಯಕ

ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ.

ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಬಂಗಾರದಂತಹ ಬಾಳೆ ಬೆಳೆ ಬೆಳೆದಿದ್ದು, ಫಸಲು ಕಟಾವಿಗೆ ಬಂದಿದ್ದು, ನಿರೀಕ್ಷೆಯಂತೆ ಲಾಭ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಗಿರುವ ಒಂದು ಎಕರೆ ಭೂಮಿ ಯಲ್ಲಿಯೇ ಕೃಷಿ ಮಾಡಿ ಆದಾಯಗಳಿಸಬೇಕು ಎಂದು ಶ್ರಮಿಸುತ್ತಿದ್ದ ರೈತ
ಮಹದೇವಸ್ವಾಮಿಯವರಿಗೆ ನಿರೀಕ್ಷೆಯಂತೆ ಬಾರಿ ಬಂಗಾರ ಬಾಳೆ ಬೆಳೆದ ಒಂದು ಕಡೆ ಭಡೆಯಲ್ಲಸಾ ಹುಳಿಮಾವಿನ ಮಹದೇವಸ್ವಾಮಿ ಅಧಿಕ ನಂಜನಗೂಡು ರಸಬಾಳೆ ಗಿಡಗಳನ್ನು ನಾಟಿ ಮಾಡಿದ್ದು, ಅವು ಈಗ ಕಟಾವಿಗೆ ಬಂದಿವೆ. ‘ಬಾಳೆ ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನ ಪಡೆದಿದ್ದು, ಸುಮಾರು ಎರಡು ಲಕ್ಷ ರೂ. ಖರ್ಚು ಮಾಡಿ ಬಾಳೆ ಬೆಳೆದಿದ್ದೇನೆ, ಮುಂದಿನ ವಾರ ಕಟಾವು ಮಾಡಬೇಕು. ಪ್ರತಿ ಕೆ.ಜಿ.ಗೆ 100 ರೂ.ಗಳಿಂದ 150 ರೂ. ಸಿಗುವ ನಿರೀಕ್ಷೆ ಇದೆ. ಅಷ್ಟು ಬೆಲೆ ಸಿಕ್ಕರೆ ಒಂದು ಎಕರೆಯಲ್ಲಿ 6ರಿಂದ 7 ಲಕ್ಷ ರೂ.ಗಳ ವರೆಗೆ ಆದಾಯ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ. ಅಷ್ಟು ಆದಾಯ ಬಂದೇ ಬರುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ರೈತ ಮಹದೇವಸ್ವಾಮಿ.

ಇತರ ಬೆಳೆಗಳಿಗೆ ಹೋಲಿಸಿದರೆ ಈ ಭಾಗದಲ್ಲಿ ಬಾಳೆ ಬೆಳೆಯು ರೈತರಿಗೆ ಹೆಚ್ಚು ಆದಾಯವನ್ನು ತಂದು ಕೊಡುವ ಬೆಳೆಯಾಗಿದೆ. ಖರ್ಚು ಕಡಿಮೆ, ಆದಾಯ ಹೆಚ್ಚಿರುವುದರಿಂದ ರೈತರು ಹೆಚ್ಚಾಗಿ ಬಾಳೆ ಬೆಳೆಯುತ್ತಾರೆ. ಅದರಲ್ಲಿಯೂ ನಂಜನ ಗೂಡು ರಸಬಾಳೆಯನ್ನು ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ
ಬೆಳೆಯುತ್ತಿದ್ದು, ಈ ಬಾಳೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿಯೇ ಅನೇಕ ರೈತರು ನಂಜನಗೂಡು ರಸಬಾಳೆಯನ್ನು ಬೆಳೆದು ಈಗಾಗಲೇ ಮಾರಾಟ ಮಾಡಲು ಆರಂಭಿಸಿದ್ದಾರೆ ಎಂಬುದು ಸ್ಥಳೀಯ ರೈತರ
ಮಾತು.

ಸದ್ಯ ಕಡಿಮೆ ಕೃಷಿ ಭೂಮಿಯಲ್ಲಿ ಉತ್ತಮವಾಗಿ ರಸಬಾಳೆಯನ್ನು ಬೆಳೆದಿರುವ ಮಹದೇವಸ್ವಾಮಿಯವರ ತೋಟಕ್ಕೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹೇಮಾ ಭೇಟಿ ನೀಡಿ ವೀಕ್ಷಿಸಿದರು. ನಂಜನಗೂಡು ರಸಬಾಳೆ ನಮ್ಮ ಜಿಲ್ಲೆ ಮಾತ್ರವಲ್ಲದೆ ಇತರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಲ್ಲಿಯೂ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಎಲ್ಲೆಡೆ ಈ ಬಾಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ಈ ಬಾಳೆಯನ್ನು ಮೈಸೂರು ಜಿಲ್ಲೆಯ ನಂಜನಗೂಡು ಭಾಗದಲ್ಲಿ ಹೆಚ್ಚಾಗಿ ಬೆಳೆಯುವುದು ಹೆಮ್ಮೆಯ ವಿಚಾರ. ಇದು ಹೆಚ್ಚು ಆದಾಯ ತಂದುಕೊಡುವುದರಿಂದ ರೈತರು ಹೆಚ್ಚಾಗಿ ನಂಜನಗೂಡು ರಸಬಾಳೆಯನ್ನು ಬೆಳೆದು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು. ಇನ್ನು ಮಹದೇವಸ್ವಾಮಿಯವರ ಕೃಷಿ ಭೂಮಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಗಳಾದ ಮಂಜುನಾಥ್ ಅಂಗಡಿ, ನಂಜನಗೂಡು ತಾಲ್ಲೂಕು ಅಧಿಕಾರಿ ಚಂದ್ರು, ಹುಳಿಮಾವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ರೈತರು ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ನಂಜನಗೂಡು ರಸಬಾಳೆ ಬೆಳೆಯಬಹುದು. ನಂಜನಗೂಡು ರಸಬಾಳೆಗೆ ಎಲ್ಲೆಡೆ ಉತ್ತಮ ಬೆಲೆ ಇದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡಲಿದೆ. ನಾನು ಮಹದೇವಸ್ವಾಮಿಯವರ ತೋಟಕ್ಕೆ ಭೇಟಿ ನೀಡಿದ್ದೆ. ಅವರು ತಮ್ಮ ಒಂದು ಎಕರೆ ಭೂಮಿಯಲ್ಲಿ ಉತ್ತಮವಾಗಿ ಬೆಳೆ ಬೆಳೆದಿದ್ದಾರೆ. ಶ್ರಮವಹಿಸಿದರೆ ಕೃಷಿಯಲ್ಲಿಯೂ ಉತ್ತಮ ಲಾಭ ಕಾಣಬಹುದು ಎಂಬುದಕ್ಕೆ ಮಹದೇವಸ್ವಾಮಿಯವರೇ ಸಾಕ್ಷಿ. -ಹೇಮಾ, ಜಂಟಿ ನಿರ್ದೇಶಕರು, ಜಿಲ್ಲಾ ತೋಟಗಾರಿಕಾ ಇಲಾಖೆ,

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

8 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago