ಅನ್ನದಾತರ ಅಂಗಳ

ಬಂಗಾರ ಬಾಳೆ ಬೆಳೆದ ಹುಳಿಮಾವಿನ ಮಹದೇವಸ್ವಾಮಿ

ಸುತ್ತೂರು ನಂಜುಂಡ ನಾಯಕ

ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ.

ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಬಂಗಾರದಂತಹ ಬಾಳೆ ಬೆಳೆ ಬೆಳೆದಿದ್ದು, ಫಸಲು ಕಟಾವಿಗೆ ಬಂದಿದ್ದು, ನಿರೀಕ್ಷೆಯಂತೆ ಲಾಭ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಗಿರುವ ಒಂದು ಎಕರೆ ಭೂಮಿ ಯಲ್ಲಿಯೇ ಕೃಷಿ ಮಾಡಿ ಆದಾಯಗಳಿಸಬೇಕು ಎಂದು ಶ್ರಮಿಸುತ್ತಿದ್ದ ರೈತ
ಮಹದೇವಸ್ವಾಮಿಯವರಿಗೆ ನಿರೀಕ್ಷೆಯಂತೆ ಬಾರಿ ಬಂಗಾರ ಬಾಳೆ ಬೆಳೆದ ಒಂದು ಕಡೆ ಭಡೆಯಲ್ಲಸಾ ಹುಳಿಮಾವಿನ ಮಹದೇವಸ್ವಾಮಿ ಅಧಿಕ ನಂಜನಗೂಡು ರಸಬಾಳೆ ಗಿಡಗಳನ್ನು ನಾಟಿ ಮಾಡಿದ್ದು, ಅವು ಈಗ ಕಟಾವಿಗೆ ಬಂದಿವೆ. ‘ಬಾಳೆ ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನ ಪಡೆದಿದ್ದು, ಸುಮಾರು ಎರಡು ಲಕ್ಷ ರೂ. ಖರ್ಚು ಮಾಡಿ ಬಾಳೆ ಬೆಳೆದಿದ್ದೇನೆ, ಮುಂದಿನ ವಾರ ಕಟಾವು ಮಾಡಬೇಕು. ಪ್ರತಿ ಕೆ.ಜಿ.ಗೆ 100 ರೂ.ಗಳಿಂದ 150 ರೂ. ಸಿಗುವ ನಿರೀಕ್ಷೆ ಇದೆ. ಅಷ್ಟು ಬೆಲೆ ಸಿಕ್ಕರೆ ಒಂದು ಎಕರೆಯಲ್ಲಿ 6ರಿಂದ 7 ಲಕ್ಷ ರೂ.ಗಳ ವರೆಗೆ ಆದಾಯ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ. ಅಷ್ಟು ಆದಾಯ ಬಂದೇ ಬರುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ರೈತ ಮಹದೇವಸ್ವಾಮಿ.

ಇತರ ಬೆಳೆಗಳಿಗೆ ಹೋಲಿಸಿದರೆ ಈ ಭಾಗದಲ್ಲಿ ಬಾಳೆ ಬೆಳೆಯು ರೈತರಿಗೆ ಹೆಚ್ಚು ಆದಾಯವನ್ನು ತಂದು ಕೊಡುವ ಬೆಳೆಯಾಗಿದೆ. ಖರ್ಚು ಕಡಿಮೆ, ಆದಾಯ ಹೆಚ್ಚಿರುವುದರಿಂದ ರೈತರು ಹೆಚ್ಚಾಗಿ ಬಾಳೆ ಬೆಳೆಯುತ್ತಾರೆ. ಅದರಲ್ಲಿಯೂ ನಂಜನ ಗೂಡು ರಸಬಾಳೆಯನ್ನು ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ
ಬೆಳೆಯುತ್ತಿದ್ದು, ಈ ಬಾಳೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿಯೇ ಅನೇಕ ರೈತರು ನಂಜನಗೂಡು ರಸಬಾಳೆಯನ್ನು ಬೆಳೆದು ಈಗಾಗಲೇ ಮಾರಾಟ ಮಾಡಲು ಆರಂಭಿಸಿದ್ದಾರೆ ಎಂಬುದು ಸ್ಥಳೀಯ ರೈತರ
ಮಾತು.

ಸದ್ಯ ಕಡಿಮೆ ಕೃಷಿ ಭೂಮಿಯಲ್ಲಿ ಉತ್ತಮವಾಗಿ ರಸಬಾಳೆಯನ್ನು ಬೆಳೆದಿರುವ ಮಹದೇವಸ್ವಾಮಿಯವರ ತೋಟಕ್ಕೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹೇಮಾ ಭೇಟಿ ನೀಡಿ ವೀಕ್ಷಿಸಿದರು. ನಂಜನಗೂಡು ರಸಬಾಳೆ ನಮ್ಮ ಜಿಲ್ಲೆ ಮಾತ್ರವಲ್ಲದೆ ಇತರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಲ್ಲಿಯೂ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಎಲ್ಲೆಡೆ ಈ ಬಾಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ಈ ಬಾಳೆಯನ್ನು ಮೈಸೂರು ಜಿಲ್ಲೆಯ ನಂಜನಗೂಡು ಭಾಗದಲ್ಲಿ ಹೆಚ್ಚಾಗಿ ಬೆಳೆಯುವುದು ಹೆಮ್ಮೆಯ ವಿಚಾರ. ಇದು ಹೆಚ್ಚು ಆದಾಯ ತಂದುಕೊಡುವುದರಿಂದ ರೈತರು ಹೆಚ್ಚಾಗಿ ನಂಜನಗೂಡು ರಸಬಾಳೆಯನ್ನು ಬೆಳೆದು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು. ಇನ್ನು ಮಹದೇವಸ್ವಾಮಿಯವರ ಕೃಷಿ ಭೂಮಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಗಳಾದ ಮಂಜುನಾಥ್ ಅಂಗಡಿ, ನಂಜನಗೂಡು ತಾಲ್ಲೂಕು ಅಧಿಕಾರಿ ಚಂದ್ರು, ಹುಳಿಮಾವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ರೈತರು ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ನಂಜನಗೂಡು ರಸಬಾಳೆ ಬೆಳೆಯಬಹುದು. ನಂಜನಗೂಡು ರಸಬಾಳೆಗೆ ಎಲ್ಲೆಡೆ ಉತ್ತಮ ಬೆಲೆ ಇದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡಲಿದೆ. ನಾನು ಮಹದೇವಸ್ವಾಮಿಯವರ ತೋಟಕ್ಕೆ ಭೇಟಿ ನೀಡಿದ್ದೆ. ಅವರು ತಮ್ಮ ಒಂದು ಎಕರೆ ಭೂಮಿಯಲ್ಲಿ ಉತ್ತಮವಾಗಿ ಬೆಳೆ ಬೆಳೆದಿದ್ದಾರೆ. ಶ್ರಮವಹಿಸಿದರೆ ಕೃಷಿಯಲ್ಲಿಯೂ ಉತ್ತಮ ಲಾಭ ಕಾಣಬಹುದು ಎಂಬುದಕ್ಕೆ ಮಹದೇವಸ್ವಾಮಿಯವರೇ ಸಾಕ್ಷಿ. -ಹೇಮಾ, ಜಂಟಿ ನಿರ್ದೇಶಕರು, ಜಿಲ್ಲಾ ತೋಟಗಾರಿಕಾ ಇಲಾಖೆ,

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

14 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

18 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

23 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

35 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

40 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

46 mins ago