ಅನ್ನದಾತರ ಅಂಗಳ

ಬಂಗಾರ ಬಾಳೆ ಬೆಳೆದ ಹುಳಿಮಾವಿನ ಮಹದೇವಸ್ವಾಮಿ

ಸುತ್ತೂರು ನಂಜುಂಡ ನಾಯಕ

ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ.

ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಬಂಗಾರದಂತಹ ಬಾಳೆ ಬೆಳೆ ಬೆಳೆದಿದ್ದು, ಫಸಲು ಕಟಾವಿಗೆ ಬಂದಿದ್ದು, ನಿರೀಕ್ಷೆಯಂತೆ ಲಾಭ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಗಿರುವ ಒಂದು ಎಕರೆ ಭೂಮಿ ಯಲ್ಲಿಯೇ ಕೃಷಿ ಮಾಡಿ ಆದಾಯಗಳಿಸಬೇಕು ಎಂದು ಶ್ರಮಿಸುತ್ತಿದ್ದ ರೈತ
ಮಹದೇವಸ್ವಾಮಿಯವರಿಗೆ ನಿರೀಕ್ಷೆಯಂತೆ ಬಾರಿ ಬಂಗಾರ ಬಾಳೆ ಬೆಳೆದ ಒಂದು ಕಡೆ ಭಡೆಯಲ್ಲಸಾ ಹುಳಿಮಾವಿನ ಮಹದೇವಸ್ವಾಮಿ ಅಧಿಕ ನಂಜನಗೂಡು ರಸಬಾಳೆ ಗಿಡಗಳನ್ನು ನಾಟಿ ಮಾಡಿದ್ದು, ಅವು ಈಗ ಕಟಾವಿಗೆ ಬಂದಿವೆ. ‘ಬಾಳೆ ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನ ಪಡೆದಿದ್ದು, ಸುಮಾರು ಎರಡು ಲಕ್ಷ ರೂ. ಖರ್ಚು ಮಾಡಿ ಬಾಳೆ ಬೆಳೆದಿದ್ದೇನೆ, ಮುಂದಿನ ವಾರ ಕಟಾವು ಮಾಡಬೇಕು. ಪ್ರತಿ ಕೆ.ಜಿ.ಗೆ 100 ರೂ.ಗಳಿಂದ 150 ರೂ. ಸಿಗುವ ನಿರೀಕ್ಷೆ ಇದೆ. ಅಷ್ಟು ಬೆಲೆ ಸಿಕ್ಕರೆ ಒಂದು ಎಕರೆಯಲ್ಲಿ 6ರಿಂದ 7 ಲಕ್ಷ ರೂ.ಗಳ ವರೆಗೆ ಆದಾಯ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ. ಅಷ್ಟು ಆದಾಯ ಬಂದೇ ಬರುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ರೈತ ಮಹದೇವಸ್ವಾಮಿ.

ಇತರ ಬೆಳೆಗಳಿಗೆ ಹೋಲಿಸಿದರೆ ಈ ಭಾಗದಲ್ಲಿ ಬಾಳೆ ಬೆಳೆಯು ರೈತರಿಗೆ ಹೆಚ್ಚು ಆದಾಯವನ್ನು ತಂದು ಕೊಡುವ ಬೆಳೆಯಾಗಿದೆ. ಖರ್ಚು ಕಡಿಮೆ, ಆದಾಯ ಹೆಚ್ಚಿರುವುದರಿಂದ ರೈತರು ಹೆಚ್ಚಾಗಿ ಬಾಳೆ ಬೆಳೆಯುತ್ತಾರೆ. ಅದರಲ್ಲಿಯೂ ನಂಜನ ಗೂಡು ರಸಬಾಳೆಯನ್ನು ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ
ಬೆಳೆಯುತ್ತಿದ್ದು, ಈ ಬಾಳೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿಯೇ ಅನೇಕ ರೈತರು ನಂಜನಗೂಡು ರಸಬಾಳೆಯನ್ನು ಬೆಳೆದು ಈಗಾಗಲೇ ಮಾರಾಟ ಮಾಡಲು ಆರಂಭಿಸಿದ್ದಾರೆ ಎಂಬುದು ಸ್ಥಳೀಯ ರೈತರ
ಮಾತು.

ಸದ್ಯ ಕಡಿಮೆ ಕೃಷಿ ಭೂಮಿಯಲ್ಲಿ ಉತ್ತಮವಾಗಿ ರಸಬಾಳೆಯನ್ನು ಬೆಳೆದಿರುವ ಮಹದೇವಸ್ವಾಮಿಯವರ ತೋಟಕ್ಕೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹೇಮಾ ಭೇಟಿ ನೀಡಿ ವೀಕ್ಷಿಸಿದರು. ನಂಜನಗೂಡು ರಸಬಾಳೆ ನಮ್ಮ ಜಿಲ್ಲೆ ಮಾತ್ರವಲ್ಲದೆ ಇತರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಲ್ಲಿಯೂ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಎಲ್ಲೆಡೆ ಈ ಬಾಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ಈ ಬಾಳೆಯನ್ನು ಮೈಸೂರು ಜಿಲ್ಲೆಯ ನಂಜನಗೂಡು ಭಾಗದಲ್ಲಿ ಹೆಚ್ಚಾಗಿ ಬೆಳೆಯುವುದು ಹೆಮ್ಮೆಯ ವಿಚಾರ. ಇದು ಹೆಚ್ಚು ಆದಾಯ ತಂದುಕೊಡುವುದರಿಂದ ರೈತರು ಹೆಚ್ಚಾಗಿ ನಂಜನಗೂಡು ರಸಬಾಳೆಯನ್ನು ಬೆಳೆದು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು. ಇನ್ನು ಮಹದೇವಸ್ವಾಮಿಯವರ ಕೃಷಿ ಭೂಮಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಗಳಾದ ಮಂಜುನಾಥ್ ಅಂಗಡಿ, ನಂಜನಗೂಡು ತಾಲ್ಲೂಕು ಅಧಿಕಾರಿ ಚಂದ್ರು, ಹುಳಿಮಾವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ರೈತರು ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಲು ನಂಜನಗೂಡು ರಸಬಾಳೆ ಬೆಳೆಯಬಹುದು. ನಂಜನಗೂಡು ರಸಬಾಳೆಗೆ ಎಲ್ಲೆಡೆ ಉತ್ತಮ ಬೆಲೆ ಇದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡಲಿದೆ. ನಾನು ಮಹದೇವಸ್ವಾಮಿಯವರ ತೋಟಕ್ಕೆ ಭೇಟಿ ನೀಡಿದ್ದೆ. ಅವರು ತಮ್ಮ ಒಂದು ಎಕರೆ ಭೂಮಿಯಲ್ಲಿ ಉತ್ತಮವಾಗಿ ಬೆಳೆ ಬೆಳೆದಿದ್ದಾರೆ. ಶ್ರಮವಹಿಸಿದರೆ ಕೃಷಿಯಲ್ಲಿಯೂ ಉತ್ತಮ ಲಾಭ ಕಾಣಬಹುದು ಎಂಬುದಕ್ಕೆ ಮಹದೇವಸ್ವಾಮಿಯವರೇ ಸಾಕ್ಷಿ. -ಹೇಮಾ, ಜಂಟಿ ನಿರ್ದೇಶಕರು, ಜಿಲ್ಲಾ ತೋಟಗಾರಿಕಾ ಇಲಾಖೆ,

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

22 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago