ಅನ್ನದಾತರ ಅಂಗಳ

ಸಕಾಲಕ್ಕೆ ಸುರಿದ ಹಿಂಗಾರು ಮಳೆ, ರೈತರ ಮುಖದಲ್ಲಿ ಜೀವ ಕಳೆ

ಕಳೆದ ಬಾರಿ ಸಕಾಲಕ್ಕೆ ಮಳೆಯಾಗದೇ ಈ ಬಾರಿಯೂ ಕೈ ಕೊಡುವ ಮುನ್ಸೂಚನೆಯಲ್ಲಿದ್ದ ಮಳೆರಾಯ ಈ ವರ್ಷ ರೈತರಿಗೆ ತಡವಾಗಿಯಾದರೂ ಕೊಂಚ ನೆಮ್ಮದಿ ನೀಡಿದ್ದಾನೆ. ಈಗಂತೂ ರಾಜ್ಯದ ನಾನಾ ಭಾಗಗಳಲ್ಲಿ ಸಕಾಲಿಕವಾಗಿ ಹಿಂಗಾರು ಮಳೆ ಬೀಳುತ್ತಿರುವುದು ಮಳೆ ಆಶ್ರಿತ ಕೃಷಿ ಮಾಡುವ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕಳೆದ ಬಾರಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ರಾಜ್ಯದ 200ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ಬರದ ಛಾಯೆ ಆವರಿಸಿತ್ತು. ಜನರಿಗೆ ಕೃಷಿ ಭೂಮಿಗಿರಲಿ ಕುಡಿಯುವ ನೀರಿಗೂ ಹಾಹಾಕಾರ ಶುರು ವಾಗಿತ್ತು. ಇದರಿಂದ ಹಾಕಿದ ಬೆಳೆ ಕೈ ಸೇರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಬಾರಿಯೂ ತಡವಾಗಿ ಆರಂಭಗೊಂಡ ಮುಂಗಾರು ಮಳೆ ರೈತರಲ್ಲಿ ಅಷ್ಟೇನೂ ಭರವಸೆ ಮೂಡಿಸಿರಲಿಲ್ಲ. ಅಂತೇಯೇ ಜಲಾಶಯಗಳೂ ತಡವಾಗಿ ಭರ್ತಿಯಾದ್ದರಿಂದ ಕೃಷಿ ಭೂಮಿಗಳಿಗೆ ನೀರು ಪೂರೈಕೆಯಾಗಿದ್ದೂ ತಡವಾಗಿತ್ತು. ಇಂತಹ ಸ್ಥಿತಿಯಲ್ಲಿದ್ದ ರೈತರಿಗೆ ಈಗ ಹಿಂಗಾರು ಮಳೆ ಸಕಾಲಕ್ಕೆ ಬೀಳುವ ಮೂಲಕ ಸಂತಸ ತಂದಿದೆ.

ಮುಂಗಾರಿನಂತೆಯೇ ಹಿಂಗಾರು ಮಳೆಯೂ ರೈತರಿಗೆ ಅತಿಮುಖ್ಯ. ಮಳೆಯ ಆಗಮನವನ್ನು ಗಮನದಲ್ಲಿಟ್ಟುಕೊಂಡು ರೈತರು ಕೃಷಿ ಮಾಡ ಬೇಕು. ಸದ್ಯಕ್ಕಂತೂ ಮೈಸೂರು ಜಿಲ್ಲೆಯ ತಿ.ನರಸೀ ಪುರ, ಕೆ.ಆರ್.ನಗರ, ಪಿರಿಯಾಪಟ್ಟಣ, ಎಚ್‌.ಡಿ. ಕೋಟೆಯ ಕೆಲ ಭಾಗ ಹಾಗೂ ನಂಜನಗೂಡಿನ ಭಾಗದಲ್ಲಿ ತಡವಾಗಿಯೇ ಭತ್ತದ ನಾಟಿ ಮಾಡಿದ್ದು, ಈ ಮಳೆಯಿಂದ ರೈತರಿಗೆ ಅನುಕೂಲ ವಾಗಿದೆ. ಇನ್ನು ಕರ್ನಾಟಕದ ಕೆಲ ಭಾಗಗಳಲ್ಲಿ ಮಾತ್ರ ಭತ್ತ ನಾಟಿ ಕಾರ್ಯವನ್ನು ಜೂನ್, ಜುಲೈ ತಿಂಗಳಲ್ಲಿನಲ್ಲಿಯೇ ಮಾಡಿ ಮುಗಿಸುವವರಿಗೆ ಈ ಹಿಂಗಾರು ಮಳೆ ಕೊಂಚ ಆತಂಕ ಸೃಷ್ಟಿಸಬಹುದು. ಅದರ ಹೊರತಾಗಿ ಈ ಮಳೆಯು ಕೃಷಿಗೆ ಪೂರಕವಾಗಿಯೇ ಬೀಳುತ್ತಿದೆ. ಅಲ್ಲದೆ ದಿನ ಬಿಟ್ಟು ದಿನ ಮಳೆ ಬೀಳುತ್ತಿರುವುದರಿಂದ ಜಮೀನಿನಲ್ಲಿ ನೀರು ನಿಂತು ಬೆಳೆಗಳಿಗೆ ಅಷ್ಟೇನೂ ಹಾನಿಯಾಗಿಲ್ಲ ಎಂಬುದು ಬಹುತೇಕ ರೈತರ ಮಾತಾಗಿದೆ.

ಜೂನ್, ಜುಲೈ ತಿಂಗಳಿನಲ್ಲಿ ನಾಟಿ ಮಾಡಿದ್ದರೆ ಇದು ಭತ್ತ ಕಾಳುಕಟ್ಟುವ ಸಮಯ. ಈ ವೇಳೆ ಭತ್ತದ ತೆಂಡೆಗೆ ನೀರು ತುಂಬಿಕೊಂಡು ಕಾಳು ಜೊಳ್ಳಾಗುವ ಸಾಧ್ಯತೆಗಳಿರುತ್ತವೆ. ಸಾಮಾನ್ಯ ಭತ್ತದ ನಾಟಿ ಕೆಲಸಗಳು ಜೂನ್, ಜುಲೈನಲ್ಲಿಯೇ ಮುಗಿಯಬೇಕಿತ್ತು. ಆದರೆ, ಸಕಾಲಕ್ಕೆ ಮಳೆಯಾಗದೆ ಹಾಗೂ ಕೆಆರ್‌ಎಸ್ ಮತ್ತು ಕಪಿಲಾ, ನುಗು ಜಲಾಶಯಗಳು ತಡವಾಗಿ
ತುಂಬಿದ್ದರಿಂದ ನಾಲೆಗಳಿಗೆ ನೀರು ಹರಿಯುವುದು ತಡವಾಗಿ ನಾಟಿ ಕೆಲಸವೂ ತಡವಾಗಿದೆ.

ಇನ್ನು ಇದರೊಂದಿಗೆ ಹೆಚ್ಚಾಗಿ ಈ ಭಾಗದಲ್ಲಿ ಬೆಳೆಯುವ ಜೋಳ, ಚಿಯಾ, ಹುರುಳಿ, ರಾಗಿ ಸೇರಿದಂತೆ ಕಾಳು, ಸೊಪ್ಪು, ತರಕಾರಿ ಬೆಳೆಗಳಿಗೂ ಈ ಮಳೆ ಪೂರಕವಾಗಿದೆ ಎನ್ನುತ್ತಾರೆ ರೈತರು.

ಹತ್ತಿ, ಟೊಮೊಟೋ ಬೆಳೆಗಾರರ ಆತಂಕ:

ಸಾಮಾನ್ಯವಾಗಿ ಎಲ್ಲ ಕಡೆ ಈಗ ಹತ್ತಿ ಬಿಡಿಸುವ ಕಾರ್ಯ ಆರಂಭಗೊಂಡಿದ್ದು, ಮಳೆಯಿಂದಾಗಿ ಹತ್ತಿ ಬೆಲೆ ಇಳಿಕೆಯಾಗುವ ಆತಂಕ ರೈತರನ್ನು ಕಾಡುತ್ತಿದೆ. ಮಳೆ ಹೆಚ್ಚಾದಷ್ಟೂ ಹತ್ತಿ ಬೆಳೆಯ ಗುಣಮಟ್ಟ ಕುಸಿಯುವುದರಿಂದ ರೈತರಿಗೆ ಆತಂಕ ಎದುರಾಗಿದೆ. ಇನ್ನು ಈ ಮಳೆಯೂ ಕೊಯ್ಲಿಗೆ ಬಂದಿರುವ ಟೊಮೆಟೋ ಬೆಳೆಗೆ ಸಮಸ್ಯೆ ತಂದೊಡ್ಡುವ ಆತಂಕ ಇದೆ.

ಇದರೊಂದಿಗೆ ಈಗ ಬಿಸಿಲಿಗಿಂತ ಮೋಡ ಕವಿದ ವಾತಾವರಣ ಹೆಚ್ಚಾಗಿದ್ದು, ಈ ವಾತಾವರಣದಲ್ಲಿ ಬೆಳೆಗಳಿಗೆ ಫಂಗಸ್, ಕೀಟಬಾಧೆ ಜತೆಗೆ ಅನವಶ್ಯಕ ಕಳೆ ಬೆಳೆಯುವ ಸಾಧ್ಯತೆ ಹೆಚ್ಚಾಗಿದ್ದು, ರೈತರು ಈ ಬಗ್ಗೆ ಜಾಗೃತರಾಗಿರುವುದು ಅಗತ್ಯ.

ಕಳೆದ ಬಾರಿಯ ಬರಗಾಲದ ಜತೆಗೆ ಈ ಬಾರಿಯೂ ಮಾನ್ಸೂನ್ ಮಳೆಯು ತಡವಾಗಿ ಆರಂಭವಾದ್ದರಿಂದ ರೈತರಲ್ಲಿ ಮಂದಹಾಸವೇ ಮರೆಯಾಗಿತ್ತು. ಹಿಂಗಾರು ಮಳೆಯೂ
ಕೈಕೊಡಬಹುದೇನೋ ಎಂಬ ಆತಂಕ ಇತ್ತು. ಆದರೆ ಈ ಬಾರಿ ಸಕಾಲಕ್ಕೆ ಸರಿಯಾದ ಪ್ರಮಾಣದಲ್ಲಿ ಹಿಂಗಾರು ಮಳೆ ಬೀಳುತ್ತಿರುವುದು ರೈತರಲ್ಲಿ ಮಂದಹಾಸ ಮೂಡಿಸಿದೆ.
ರಾಜೇಶ್, ಎಚ್‌.ಡಿ.ಕೋಟೆ.

ಆಂದೋಲನ ಡೆಸ್ಕ್

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

52 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago