ಸುತ್ತೂರು ನಂಜುಂಡ ನಾಯಕ

ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ ರೈತ ನಂಜಪ್ಪ.

ವರುಣ ಕ್ಷೇತ್ರದ ಅಳಗಂಚಿಪುರ ಗ್ರಾಮದ ರೈತ ನಂಜಪ್ಪ ತಮ್ಮ ಎರಡು ಎಕರೆ ಕೃಷಿ ಭೂಮಿಯಲ್ಲಿ ಬಾಳೆ, ತೆಂಗು, ಕಬ್ಬು, ಸೌತೆಕಾಯಿ, ಕಲ್ಲಂಗಡಿ ಮುಂತಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ತಮ್ಮ ಜಮೀನಿಗೆ ಯಾವುದೇ ರಾಸಾಯನಿಕ ಗಳನ್ನು ಬಳಸದ ನಂಜಪ್ಪ, ಜಮೀನಿನಲ್ಲಿ ವ್ಯರ್ಥವಾಗಿ ಬೀಳುವ ತೆಂಗಿನ ಗರಿ, ಬಾಳೆಪಟ್ಟೆ ಸೇರಿದಂತೆ ಹಲವು ಕಳೆ ವಸ್ತುಗಳನ್ನೇ ಬಳಸಿಕೊಂಡು ಸಾವಯವ ಗೊಬ್ಬರ ತಯಾರಿಸಿ ಕೃಷಿ ಭೂಮಿಗೆ ಬಳಸಿಕೊಳ್ಳುವ ಮೂಲಕ ಕೃಷಿ ಭೂಮಿಯ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಎರೆಹುಳುಗಳನ್ನೂ ಸಂರಕ್ಷಣೆ ಮಾಡಿಕೊಂಡು ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಕಡಿಮೆ ಖರ್ಚಿನಲ್ಲಿ ಒಂದು ಡ್ರಮ್‌ನಲ್ಲಿ ಕಸ ಕಡ್ಡಿಗಳನ್ನು ತುಂಬಿ, ಅದನ್ನು ಕಾಂಪೋಸ್ಟ್ ಗೊಬ್ಬರ ವನ್ನಾಗಿ ಮಾಡಿಕೊಂಡು ಎಲ್ಲ ಬೆಳೆಗಳಿಗೂ ಗೊಬ್ಬರವಾಗಿ ಬಳಸುತ್ತಿದ್ದಾರೆ. ಆ ಮೂಲಕ ಉತ್ತಮ ಇಳುವರಿ ಪಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಮೈರಾಡ ಸಂಸ್ಥೆ ಹಾಗೂ ಕೃಷಿ ಇಲಾಖೆಯವರು ನನಗೆ ಕಾಂಪೋಸ್ಟ್ ಗೊಬ್ಬರ ತಯಾರು ಮಾಡುವ ವಿಧಾನದ ಬಗ್ಗೆ ತರಬೇತಿ ನೀಡಿದರು. ಅದರಿಂದ ನಾನು ‘ಕಸದಿಂದ ರಸ’ ಎಂಬ ಮಾತಿನಂತೆ ನಮ್ಮ ತೋಟದಲ್ಲಿ ತೆಂಗಿನ ಗರಿ, ತೆಂಗಿನ ಮಟ್ಟೆ, ಬಾಳೆ ನಾರು ಇತರೆ ತ್ಯಾಜ್ಯ ಪದಾರ್ಥಗಳನ್ನು ಬಳಸಿ ಕೊಂಡು ಜಮೀನಿನಲ್ಲಿಯೇ ಗೊಬ್ಬರ ತಯಾರು ಮಾಡಿಕೊಳ್ಳುತ್ತಿದ್ದೇನೆ. ಈ ಹಿಂದೆ ಅವುಗಳೆಲ್ಲವನ್ನೂ ವ್ಯರ್ಥ ತ್ಯಾಜ್ಯ ಎಂದು ಬೀಸಾಡುತ್ತಿದ್ದೆ. ಈಗ ಅವುಗಳಿಂದಲೇ ನಮ್ಮ ಕೃಷಿ ಭೂಮಿಗೆ ಹೆಚ್ಚಿನ ಉಪಯೋಗ ಎಂಬುದನ್ನು ತಿಳಿದು ಅವುಗಳನ್ನು ಬಳಸಿಕೊಂಡು ಗೊಬ್ಬರ ತಯಾರಿಸಿಕೊಳ್ಳುತ್ತಿದ್ದೇನೆ. ಇದರ ಬಳಕೆಯಿಂದ ನಮ್ಮ ಭೂಮಿ ಫಲವತ್ತಾಗುವ ಜತೆಗೆ ಭೂಮಿಯಲ್ಲಿರುವ ರೈತ ಮಿತ್ರ ಎರೆಹುಳು ವಿನ ಸಂರಕ್ಷಣೆಯಾಗಲಿದೆ. ಭೂಮಿಯಲ್ಲಿ ಎರೆಹುಳುಗಳು ಇದ್ದಷ್ಟೂ ನಮ್ಮ ಕೃಷಿ ಭೂಮಿ ಹೆಚ್ಚು ಫಲವತ್ತಾಗಿ ಇರುತ್ತದೆ ಎನ್ನುತ್ತಾರೆ ರೈತ ನಂಜಪ್ಪ.

ರೈತ ನಂಜಪ್ಪ ಈವರೆಗೂ ಅವರ ಕೃಷಿ ಭೂಮಿಗೆ ಯಾವ ರಾಸಾಯನಿಕ ರಸಗೊಬ್ಬರಗಳನ್ನೂ ಬಳಕೆ ಮಾಡಿಲ್ಲ. ಸಂಪೂರ್ಣವಾಗಿ ತಾವೇ ತಯಾರಿಸಿಕೊಂಡ ಸಾವಯವ ಗೊಬ್ಬರವನ್ನು ಬಳಸುತ್ತಿದ್ದು, ಇದರಿಂದಾಗಿ ಅವರು ಬೆಳೆಗಳಿಗೆ ಯಾವುದೇ ಕೀಟ ಬಾಧೆ ಇಲ್ಲ ಎನ್ನುತ್ತಾರೆ. ಜತೆಗೆ ಇಳುವರಿಯೂ ಉತ್ತಮವಾಗಿದ್ದು, ಉತ್ತಮ ಲಾಭ ಪಡೆದುಕೊಳ್ಳುತ್ತಿದ್ದಾರೆ.

ಕಸದಿಂದ ರಸ ಮಾಡಿಕೊಳ್ಳುವ ಈ ಪದ್ಧತಿಯಿಂದಾಗಿ ರೈತ ನಂಜಪ್ಪವರಿಗೆ ಉತ್ತಮ ಬೆಳೆ ಪಡೆಯಲು ಅನುಕೂಲವಾಗಿದೆ. ಕೃಷಿಗೆ ತಗುಲುವ ಖರ್ಚನ್ನೂ ಕಡಿಮೆ ಮಾಡಿದ್ದು, ಕಡಿಮೆ ಖರ್ಚಿನಲ್ಲಿ ಅಽಕ ಲಾಭ ಪಡೆಯಲು ಸಹಕಾರಿಯಾಗಿದೆ. ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ವರ್ಷದಿಂದ ವರ್ಷಕ್ಕೆ ಉತ್ತಮ ಇಳುವರಿ ಬರುತ್ತಿದೆ ಎಂಬುದು ರೈತ ನಂಜಪ್ಪನವರು ಅಭಿಪ್ರಾಯ. ನಂಜಪ್ಪನವರನ್ನು ಸಂಪರ್ಕಿಸಲು ೯೮೮೦೫-೧೦೫೫೨.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

4 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago