ಸುತ್ತೂರು ನಂಜುಂಡ ನಾಯಕ

ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ ರೈತ ನಂಜಪ್ಪ.

ವರುಣ ಕ್ಷೇತ್ರದ ಅಳಗಂಚಿಪುರ ಗ್ರಾಮದ ರೈತ ನಂಜಪ್ಪ ತಮ್ಮ ಎರಡು ಎಕರೆ ಕೃಷಿ ಭೂಮಿಯಲ್ಲಿ ಬಾಳೆ, ತೆಂಗು, ಕಬ್ಬು, ಸೌತೆಕಾಯಿ, ಕಲ್ಲಂಗಡಿ ಮುಂತಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ತಮ್ಮ ಜಮೀನಿಗೆ ಯಾವುದೇ ರಾಸಾಯನಿಕ ಗಳನ್ನು ಬಳಸದ ನಂಜಪ್ಪ, ಜಮೀನಿನಲ್ಲಿ ವ್ಯರ್ಥವಾಗಿ ಬೀಳುವ ತೆಂಗಿನ ಗರಿ, ಬಾಳೆಪಟ್ಟೆ ಸೇರಿದಂತೆ ಹಲವು ಕಳೆ ವಸ್ತುಗಳನ್ನೇ ಬಳಸಿಕೊಂಡು ಸಾವಯವ ಗೊಬ್ಬರ ತಯಾರಿಸಿ ಕೃಷಿ ಭೂಮಿಗೆ ಬಳಸಿಕೊಳ್ಳುವ ಮೂಲಕ ಕೃಷಿ ಭೂಮಿಯ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಎರೆಹುಳುಗಳನ್ನೂ ಸಂರಕ್ಷಣೆ ಮಾಡಿಕೊಂಡು ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಕಡಿಮೆ ಖರ್ಚಿನಲ್ಲಿ ಒಂದು ಡ್ರಮ್‌ನಲ್ಲಿ ಕಸ ಕಡ್ಡಿಗಳನ್ನು ತುಂಬಿ, ಅದನ್ನು ಕಾಂಪೋಸ್ಟ್ ಗೊಬ್ಬರ ವನ್ನಾಗಿ ಮಾಡಿಕೊಂಡು ಎಲ್ಲ ಬೆಳೆಗಳಿಗೂ ಗೊಬ್ಬರವಾಗಿ ಬಳಸುತ್ತಿದ್ದಾರೆ. ಆ ಮೂಲಕ ಉತ್ತಮ ಇಳುವರಿ ಪಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಮೈರಾಡ ಸಂಸ್ಥೆ ಹಾಗೂ ಕೃಷಿ ಇಲಾಖೆಯವರು ನನಗೆ ಕಾಂಪೋಸ್ಟ್ ಗೊಬ್ಬರ ತಯಾರು ಮಾಡುವ ವಿಧಾನದ ಬಗ್ಗೆ ತರಬೇತಿ ನೀಡಿದರು. ಅದರಿಂದ ನಾನು ‘ಕಸದಿಂದ ರಸ’ ಎಂಬ ಮಾತಿನಂತೆ ನಮ್ಮ ತೋಟದಲ್ಲಿ ತೆಂಗಿನ ಗರಿ, ತೆಂಗಿನ ಮಟ್ಟೆ, ಬಾಳೆ ನಾರು ಇತರೆ ತ್ಯಾಜ್ಯ ಪದಾರ್ಥಗಳನ್ನು ಬಳಸಿ ಕೊಂಡು ಜಮೀನಿನಲ್ಲಿಯೇ ಗೊಬ್ಬರ ತಯಾರು ಮಾಡಿಕೊಳ್ಳುತ್ತಿದ್ದೇನೆ. ಈ ಹಿಂದೆ ಅವುಗಳೆಲ್ಲವನ್ನೂ ವ್ಯರ್ಥ ತ್ಯಾಜ್ಯ ಎಂದು ಬೀಸಾಡುತ್ತಿದ್ದೆ. ಈಗ ಅವುಗಳಿಂದಲೇ ನಮ್ಮ ಕೃಷಿ ಭೂಮಿಗೆ ಹೆಚ್ಚಿನ ಉಪಯೋಗ ಎಂಬುದನ್ನು ತಿಳಿದು ಅವುಗಳನ್ನು ಬಳಸಿಕೊಂಡು ಗೊಬ್ಬರ ತಯಾರಿಸಿಕೊಳ್ಳುತ್ತಿದ್ದೇನೆ. ಇದರ ಬಳಕೆಯಿಂದ ನಮ್ಮ ಭೂಮಿ ಫಲವತ್ತಾಗುವ ಜತೆಗೆ ಭೂಮಿಯಲ್ಲಿರುವ ರೈತ ಮಿತ್ರ ಎರೆಹುಳು ವಿನ ಸಂರಕ್ಷಣೆಯಾಗಲಿದೆ. ಭೂಮಿಯಲ್ಲಿ ಎರೆಹುಳುಗಳು ಇದ್ದಷ್ಟೂ ನಮ್ಮ ಕೃಷಿ ಭೂಮಿ ಹೆಚ್ಚು ಫಲವತ್ತಾಗಿ ಇರುತ್ತದೆ ಎನ್ನುತ್ತಾರೆ ರೈತ ನಂಜಪ್ಪ.

ರೈತ ನಂಜಪ್ಪ ಈವರೆಗೂ ಅವರ ಕೃಷಿ ಭೂಮಿಗೆ ಯಾವ ರಾಸಾಯನಿಕ ರಸಗೊಬ್ಬರಗಳನ್ನೂ ಬಳಕೆ ಮಾಡಿಲ್ಲ. ಸಂಪೂರ್ಣವಾಗಿ ತಾವೇ ತಯಾರಿಸಿಕೊಂಡ ಸಾವಯವ ಗೊಬ್ಬರವನ್ನು ಬಳಸುತ್ತಿದ್ದು, ಇದರಿಂದಾಗಿ ಅವರು ಬೆಳೆಗಳಿಗೆ ಯಾವುದೇ ಕೀಟ ಬಾಧೆ ಇಲ್ಲ ಎನ್ನುತ್ತಾರೆ. ಜತೆಗೆ ಇಳುವರಿಯೂ ಉತ್ತಮವಾಗಿದ್ದು, ಉತ್ತಮ ಲಾಭ ಪಡೆದುಕೊಳ್ಳುತ್ತಿದ್ದಾರೆ.

ಕಸದಿಂದ ರಸ ಮಾಡಿಕೊಳ್ಳುವ ಈ ಪದ್ಧತಿಯಿಂದಾಗಿ ರೈತ ನಂಜಪ್ಪವರಿಗೆ ಉತ್ತಮ ಬೆಳೆ ಪಡೆಯಲು ಅನುಕೂಲವಾಗಿದೆ. ಕೃಷಿಗೆ ತಗುಲುವ ಖರ್ಚನ್ನೂ ಕಡಿಮೆ ಮಾಡಿದ್ದು, ಕಡಿಮೆ ಖರ್ಚಿನಲ್ಲಿ ಅಽಕ ಲಾಭ ಪಡೆಯಲು ಸಹಕಾರಿಯಾಗಿದೆ. ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ವರ್ಷದಿಂದ ವರ್ಷಕ್ಕೆ ಉತ್ತಮ ಇಳುವರಿ ಬರುತ್ತಿದೆ ಎಂಬುದು ರೈತ ನಂಜಪ್ಪನವರು ಅಭಿಪ್ರಾಯ. ನಂಜಪ್ಪನವರನ್ನು ಸಂಪರ್ಕಿಸಲು ೯೮೮೦೫-೧೦೫೫೨.

ಆಂದೋಲನ ಡೆಸ್ಕ್

Recent Posts

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಟಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

1 min ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

16 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

7 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

21 hours ago