ಅನ್ನದಾತರ ಅಂಗಳ

ಪಾರ್ವತಿ ಗಣಪತಿಯವರ ಹೊಸ ಬಗೆಯ ಕೃಷಿ ಪ್ರವಾಸೋದ್ಯಮ

ಡಿ.ಎನ್.ಹರ್ಷ

ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಗ್ರಾಮದ ಪಾರ್ವತಿ ಫ್ಯಾನ್ಸಿ ಗಣಪತಿ.

ಪಾರ್ವತಿಯವರು ಬಾಲ್ಯದಿಂದಲೂ ಕೊಡಗಿನ ಹಸಿರು ವಾತಾವರಣದಲ್ಲಿ ಬೆಳೆದವರು. ವೃತ್ತಿಯಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕೃಷಿಯ ಮೇಲಿನ ವ್ಯಾಮೋಹದಿಂದಾಗಿ ಉಪನ್ಯಾಸಕ ವೃತ್ತಿಯನ್ನು ತೊರೆದು ಸಂಪೂರ್ಣವಾಗಿ ತಮ್ಮನ್ನು ತಾವು ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಇತರೆ ರೈತ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಪಾರ್ವತಿರವರ ಕೃಷಿ ಬದುಕಿಗೆ ಪತಿ ಗಣಪತಿ ಮತ್ತು ಮಗ ಅಮೃತ್ ತಿಮ್ಮಯ್ಯ ಬೆಂಬಲವಾಗಿ ನಿಂತಿದ್ದು, ಇವರ ಕೃಷಿ ಭೂಮಿಯಲ್ಲಿ ಅನೇಕ ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವ ಮೂಲಕ ಅವರ ಬದುಕಿಗೂ ಆಸರೆಯಾಗಿದ್ದಾರೆ.

ಪಾರ್ವತಿಯವರು ಶಾಲಾ ಹಂತದಲ್ಲಿರುವಾಗ ತಮ್ಮ ನೆಚ್ಚಿನ ಶಿಕ್ಷಕಿಯಾಗಿದ್ದ ಫ್ಯಾನ್ಸಿ ಎಂಬವರ ಹೆಸರನ್ನು ತಮ್ಮ ಹೆಸರಿನೊಂದಿಗೆ ಸೇರಿಸಿಕೊಂಡಿದ್ದಾರೆ. ಇವರು ಕೃಷಿ ಭೂಮಿಯಲ್ಲಿ ಆರ್ಕಿಡ್ ಹೂವಿನ ಗಿಡಗಳು, ಕಾಫಿ, ಸ್ಟ್ರಾಬೆರಿ ಹಣ್ಣು, ಕೋಕೋ ಬೆಳೆ ಯುತ್ತಿದ್ದು, ಕೃಷಿಯಲ್ಲಿ ಸಾಧನೆಯ ಹಾದಿ ಹಿಡಿದಿ ದ್ದಾರೆ. ಈಗ ಕೃಷಿ ಪ್ರವಾಸೋದ್ಯಮ ಕ್ಷೇತ್ರದಲ್ಲಿಯೂ ಹೊಸತನದೊಂದಿಗೆ ಸಾಧನೆ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಅಮೃತ್‌ರವರಿಗೆ ವಿದ್ಯಾಭ್ಯಾಸ ಮುಗಿದ ಬಳಿಕ ಕೈತುಂಬಾ ಸಂಬಳ ಸಿಗುವ ಕೆಲಸಗಳ ಅವಕಾಶವಿ ದ್ದರೂ ಅವರು ಆಯ್ಕೆ ಮಾಡಿಕೊಂಡಿದ್ದು, ತಮ್ಮ ಮುತ್ತಜ್ಜ ಕೆಟೋಲಿರಾ ದಿವಾನ್ ಬಹದ್ದೂರ್ ಚೆಂಗಪ್ಪ ನವರು 1934ರಲ್ಲಿ ಕಟ್ಟಿಸಿದ್ದ ಬಂಗಲೆಯನ್ನು ಮೊದ ಲಿನ ಮಾದರಿಯಲ್ಲಿ ಉಳಿಸಿಕೊಂಡು, ಆಧುನಿಕ ಸ್ಪರ್ಶ ನೀಡುವ ಕಾಯಕದಲ್ಲಿ, ಕೊಡಗಿನ ಮೊದಲ ಮುಖ್ಯ ಆಯುಕ್ತರು ಮತ್ತು ಸ್ವತಂತ್ರ ಭಾರತದ ಮೊದಲ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ದಿವಾನ್ ಬಹದ್ದೂರ್ ಚೆಂಗಪ್ಪ ನವರು 90 ವರ್ಷಗಳ ಹಿಂದೆ ಬ್ರಿಟಿಷ್ ವಾಸ್ತುಶಿಲ್ಪ ಶೈಲಿಯಲ್ಲಿ ಕಟ್ಟಿಸಿದ ‘ದಿ ಬಂಗ್ಲೋ 1934 (WWW. thebungalow1934) ಇಂದು ದೇಶ ವಿದೇಶಗಳಿಂದ ಕೊಡಗಿಗೆ ಬರುವ ಪ್ರವಾಸಿಗರಿಗೆ ಕೊಡಗಿನ ವೀರರ ಇತಿಹಾಸವನ್ನು ತಿಳಿಸಿಕೊಡುವ
ತಾಣವಾಗಿದೆ.

ಪಾರ್ವತಿಯವರು ಪತಿ ಗಣಪತಿಯವರೊಂದಿಗೆ ಕಾಫಿ, ಹೂ ಮತ್ತು ವಿವಿಧ ರೀತಿಯ ಹಣ್ಣುಗಳ ಬೇಸಾಯ ಮಾಡು ತಿದ್ದು, ತಾವು ಬೆಳೆದ ಕೃಷಿ ಉತ್ಪನ್ನ ಗಳನ್ನು ಮೌಲ್ಯವರ್ಧನೆ ಮಾಡುವ ಕಾಯಕದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು, ಯಶಸ್ವಿಯಾಗಿದ್ದಾರೆ. ಹಾಗೆಯೇ ಸುತ್ತಮುತ್ತಲಿನ ಮೂವತ್ತಕ್ಕೂ ಹೆಚ್ಚು
ಮಹಿಳಾ ಸಸಹಾಯ ಸಂಘಗಳಿಗೆ ತರಬೇತಿ ನೀಡಿ, ಇಂದು ನಬಾರ್ಡ್ ಬ್ಯಾಂಕ್‌ ಸಹಾಯದಿಂದ ವಿರಾಜಪೇಟೆಯಲ್ಲಿ ತಮ್ಮದೇ ಆದ ಮಾರು ಕಟ್ಟೆ ಸೃಷ್ಟಿಸಿಕೊಂಡಿರುವುದು ಮಾದರಿಯ ಸಂಗತಿ.

ಇವರ ತೋಟದಲ್ಲಿ ಹೋಂ ಮೇಡ್ ವೈನ್, ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ, ವಿವಿಧ ರೀತಿಯ ಮನೆ ಅಡುಗೆ ತಿಂಡಿಗಳು, ಮಸಾಲೆ ಪದಾರ್ಥಗಳು, ಕೊಬ್ಬರಿ ಎಣ್ಣೆ, ರೋಸ್ ಮೇರಿ ಆಯಿಲ್ ಮುಂತಾದ ಕೃಷಿ ಉತ್ಪನ್ನಗಳ ಜೊತೆಗೆ ವಿವಿಧ ಬಗೆಯ ಚಾಕಲೇಟ್ ಗಳು ಸಿಗಲಿವೆ. ಇವು ದೇಶದ ವಿವಿಧ ಭಾಗಗಳಲ್ಲದೆ, ಅಂತಾರಾಷ್ಟ್ರೀಯ ಮಟ್ಟವನ್ನು ತಲುಪಿರುವುದು ಹೆಮ್ಮೆಯ ವಿಚಾರ. ವಿಶೇಷವೆಂದರೆ ಖಾಸಗಿ ವಾಹಿನಿಯ ಅಡುಗೆ ಕಾರ್ಯಕ್ರಮದ ನಿರೂಪಕ ಹಾಗೂ ವಿಶ್ವ ವಿಖ್ಯಾತ ಅಡುಗೆ ತಜ್ಞ ಗೋರ್ಡನ್ ರಾಮ್ ಪಾರ್ವತಿಯವರ ಗ್ರೀನ್ ಎಕರ್‌ನಲ್ಲಿ ಮೂರು ದಿನಗಳ ಕಾಲ ಉಳಿದುಕೊಂಡು ಕೊಡಗಿನ ವಿಶಿಷ್ಟ ಖಾದ್ಯಗಳನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ತಮ್ಮ ಗ್ರೀನ್ ಎಕರ್ ಫಾರ್ಮ್‌ ಅನ್ನು ಮಾದರಿ ಕೃಷಿ ಪ್ರವಾಸೋದ್ಯಮ ಸ್ಥಳವನ್ನಾಗಿ ಬದಲಾಯಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಪಾರ್ವತಿಯ ವರಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಮೈಸೂರಿನ ವಿಶ್ವೇಶ್ವರಯ್ಯ ಡೆವಲಪ್ಟೆಂಟ್ ಆರ್ಗನೈ ಜೇಷನ್ ವತಿಯಿಂದ ಕೃಷಿ ಸಮ್ಮಾನ ಪುರಸ್ಕಾರ ಸೇರಿದಂತೆ, ಅನೇಕ ಸಂಘ ಸಂಸ್ಥೆಗಳ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಪಾರ್ವತಿಯವರ ದೂ.ಸಂ.: 97400-28225

harshayogi@gmail.com

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

5 seconds ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

3 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

8 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago