ಅನ್ನದಾತರ ಅಂಗಳ

ಸ್ಕೂಟರ್‌ ಟ್ರಾಲಿ ಕೃಷಿ ಕೆಲಸ ಸಲೀಸು

ಜಿ.ಕೃಷ್ಣಪ್ರಸಾದ್

ಮೊನ್ನೆ ಪಾಂಡವಪುರ ಸಮೀಪದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದ ರೈತರ ಸಭೆಯೊಂದಕ್ಕೆ ಹೋಗಿದ್ದೆ. ಇದು ರೈತ ನಾಯಕ ಪುಟ್ಟಣ್ಣಯ್ಯನವರ ಹುಟ್ಟೂರು. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದ ಪರ್ಯಾಯ ಕೃಷಿ ಮಾಡುತ್ತಿರುವ ಜೈವಿಕ ರೈತ ಕುಟುಂಬಗಳನ್ನು ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಆಯೋಜನೆಗೊಂಡಿದ್ದ ಸಭೆ ಅದು.

ಸಭೆ ನಡೆದ ತೋಟದ ರಸ್ತೆಯಲ್ಲಿ ನಿಲ್ಲಿಸಿದ್ದ ಮೋಟಾರ್ ಬೈಕ್ ನನ್ನ ಗಮನ ಸೆಳೆಯಿತು. ಆ ಬೈಕ್‌ಗೆ ಟ್ರಾಲಿ ಯೊಂದನ್ನು ಜೋಡಿಸಿದ್ದರು; ಟ್ರಾಕ್ಟರ್‌ಗೆ ಟ್ರಾಲಿ ಜೋಡಿಸಿದಂತೆ. ಸೀಮೆ ಹುಲ್ಲುನ್ನು ಕೊಯ್ದು ತಂದು ಟ್ರಾಲಿಯಲ್ಲಿ ತುಂಬುತ್ತಿದ್ದರು.

ಅದು ಕ್ಯಾತನಹಳ್ಳಿ ರಾಮಚಂದ್ರರ ‘ಸ್ಕೂಟರ್ ಟ್ರಾಲಿ’. ಸಣ್ಣಪುಟ್ಟ ಸರಂಜಾಮು, ತೋಟದ ತೆಂಗಿನಕಾಯಿ, ದನಕರುಗಳಿಗೆ ಬೇಕಾದ ಹುಲ್ಲು, ಗೊಬ್ಬರದ ಚೀಲ ಮೊದಲಾದ ಅಗತ್ಯ ಕೃಷಿ ಸರಕುಗಳನ್ನು ಈ ಟ್ರಾಲಿಗೆ ತುಂಬಿ ಬೈಕ್ ಓಡಿಸಿದರೆ, ನಾಯಿಯ ಬಾಲದಂತೆ ಈ ಟ್ರಾಲಿ ಜೊತೆಗೆ ಬರುತ್ತದೆ.

ಕೂಲಿ ಕಾರ್ಮಿಕರು ಸಿಗಲ್ಲ: ಈಗಿನ ಮಕ್ಕಳು ಹೊರೆ ಹೊರಲ್ಲ. ಟ್ರಾಲಿಗೆ ಲಗೇಜ್ ಹಾಕಿದರೆ ಖುಷಿಯಾಗಿ ಬೈಕ್ ಓಡಿಸುತ್ತಾರೆ. ಎಷ್ಟೋ ಸಲ ತರಕಾರಿ, ಎಳನೀರು ತುಂಬಿ ಇದೇ ಟ್ರಾಲಿಯಲ್ಲಿ ಶ್ರೀರಂಗಪಟ್ಟಣಕ್ಕೆ ತಗೊಂಡು ಹೋಗಿದ್ದೇನೆ. ಭತ್ತ ಮಿಲ್ ಮಾಡಿಸೋಕೋ ಇದರಲ್ಲಿ ಹೋಗ್ತೇನೆ ಎಂದು ರಾಮಚಂದ್ರ ಖುಷಿ ಯಿಂದಲೇ ಹೇಳಿದರು. ಸ್ಕೂಟರ್ ಟ್ರಾಲಿ ಅವರ ಕೃಷಿ ಸಂಬಂಧ ಸರಕು ಸಾಗಾಣಿಕೆಯನ್ನು ಸುಲಭಗೊಳಿಸಿದೆ.

ಟ್ರಾಲಿಗೆ ಆಟೋ ಮಾದರಿಯಲ್ಲಿ ಮೂರು ಚಕ್ರಗಳಿರುವುದರಿಂದ ಪಲ್ಟಿ ಹೊಡೆಯುವ ಸಂಭವ ಇಲ್ಲವೇ ಇಲ್ಲ. ತಿರುವುಗಳಲ್ಲಿ ಸುಲಭವಾಗಿ ತಿರುಗುತ್ತದೆ. ಬೈಕ್ ಓಡಾಡುವ ರಸ್ತೆಯಲ್ಲಿ ಈ ಟ್ರಾಲಿ ಸುಲಭವಾಗಿ ಬರುತ್ತದೆ. ೫೦೦ ಕೆಜಿಯವರೆಗೆ ಸರಕು ತುಂಬಬಹುದು. ಟ್ರಾಲಿಯನ್ನು ಬೈಕ್‌ಗೆ ಜೋಡಿಸಲು ಲೋಹದ ಸರಳು ಇರುತ್ತದೆ.

ಬೇಡ ಎನಿಸಿದಾಗ ಇದನ್ನು ಬಿಚ್ಚಿಡಬಹುದು. ಎರಡು- ಮೂರು ಮನೆಯವರು ಒಂದೇ ಟ್ರಾಲಿ ಬಳಸುತ್ತಾರೆ. ಕ್ಯಾತನಹಳ್ಳಿ ಅಷ್ಟೇ ಅಲ್ಲ ಸುತ್ತಮುತ್ತಲ ಊರುಗಳಲ್ಲೂ ಸ್ಕೂಟರ್ ಟ್ರಾಲಿ ಜನಪ್ರಿಯ. ಇದನ್ನು ಯಾರು ಅಭಿವೃದ್ಧಿಪಡಿಸಿದರು ಎಂಬುದು ಗೊತ್ತಿಲ್ಲವಾದರೂ, ಕಳೆದ ಐದಾರು ವರ್ಷಗಳಿಂದ ಇದರ ಬಳಕೆ ಇದೆ. ಸ್ಥಳೀಯವಾಗಿ ಸಿದ್ಧವಾಗುವ ಸ್ಕೂಟರ್ ಟ್ರಾಲಿ ಮಾಡಿಸಲು ೧೫ ಸಾವಿರ ರೂ. ಖರ್ಚಾಗುತ್ತದೆ.

ಯಾವುದೇ ನಿರ್ವಹಣಾ ವೆಚ್ಚ ಕೇಳದು. ‘ಮೊದಲೆಲ್ಲಾ ಹೊಲಕ್ಕೆ ಬಂಡಿ ಕಟ್ಟಿಕೊಂಡು ಹೋಗ್ತಿದ್ದರು. ಈಗ ದನಗಳೇ ಇಲ್ಲ. ಈಗಿನ ಪೀಳಿಗೆ ಹುಡುಗರಿಗೆ ಈ ಟ್ರಾಲಿ ಇಷ್ಟವಾಗಿದೆ’ ಎನ್ನುತ್ತಾರೆ ರೈತ ಬಸವರಾಜು. ಬದಲಾದ ಕಾಲಕ್ಕೆ ಅನುಗುಣವಾಗಿ ಎತ್ತಿನ ಗಾಡಿ ಬದಲು ಸ್ಕೂಟರ್ ಟ್ರಾಲಿ ಬಂದಿದೆ. ಆಸಕ್ತರು ಹೆಚ್ಚಿನ ವಿವರಗಳಿಗೆ ರಾಮಚಂದ್ರ-ಮೊ.ಸಂ. ೭೩೫೩೨ ೮೫೯೪೩ ಸಂಪರ್ಕಿಸಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago