ಅನ್ನದಾತರ ಅಂಗಳ

ಶಿವಕುಮಾರ್‌ ಕಂಡ ಸಮಗ್ರ ಕೃಷಿಯ ಖುಷಿ

ಸುತ್ತೂರು ನಂಜುಂಡ ನಾಯಕ

ನಂಜನಗೂಡು ತಾಲ್ಲೂಕು ಕಲ್ಮಳ್ಳಿ ಗ್ರಾಮದ ಪ್ರಗತಿಪರ ರೈತ ಶಿವಕುಮಾರ್ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಸಮಗ್ರ ಬೇಸಾಯ ಪದ್ಧತಿ ಅನುಸರಿಸುತ್ತಾ ಕೈತುಂಬಾ ಆದಾಯಗಳಿಸುತ್ತಿದ್ದಾರೆ.

೧೦೦ ತೆಂಗಿನ ಮರ, ೧೦೦ ಔಷಧಿ ಗಿಡಗಳು, ೫೦ ನಿಂಬೆ ಗಿಡಗಳು, ೫೦ ಜೇನು ಸಾಕಣೆ ಪೆಟ್ಟಿಗೆ ಜೊತೆಗೆ ತೋಟಗಾರಿಕೆ ಇಲಾಖೆಯಿಂದ ಬಗೆ ಬಗೆಯ ಹಣ್ಣಿನ ಗಿಡಗಳನ್ನು ತಂದು ನೆಟ್ಟು ಸಮಗ್ರ ಬೇಸಾಯ ಮಾಡುತ್ತಾ ಕೃಷಿಯಲ್ಲಿ ಖುಷಿ ಕಾಣುತ್ತಿದ್ದಾರೆ. ನಮ್ಮ ತೋಟದಲ್ಲಿ ಜೇನು ಸಾಕಣೆಯಿಂದಾಗಿ ಪರಾಗಸ್ಪರ್ಶ ಹೆಚ್ಚಿ ಎಲ್ಲ ಬೆಳೆಗಳೂ ಹೆಚ್ಚು ಫಲವತ್ತಾಗಿ ಬೆಳೆಯಲು ಅನುಕೂಲವಾಯಿತು. ಅಲ್ಲದೇ ಜೇನುತುಪ್ಪವನ್ನು ಸಂಗ್ರಹಿಸಿಕೊಂಡು ನಮ್ಮ ಮನೆಯ ಬಳಕೆಯ ಜೊತೆಗೆ ಮಾರಾಟವನ್ನೂ ಮಾಡುತ್ತಿದ್ದೇನೆ. ಅದರಿಂದಲೂ ಹಣ ಗಳಿಸುತ್ತಿದ್ದೇನೆ ಎನ್ನುತ್ತಾರೆ ರೈತ ಶಿವಕುಮಾರ್.

ಇದರ ಜೊತೆಯಲ್ಲಿ ತೆಂಗಿನ ಮರಗಳನ್ನು ಬೆಳೆಸಿದ್ದು, ತೆಂಗಿನಕಾಯಿ ಹೆಚ್ಚು ಲಾಭವನ್ನು ಪಡೆಯಲು ಸಾಧ್ಯವಾಗಿದೆ. ಈ ರೀತಿ ಎಲ್ಲಾ ಬೆಳೆಗಳನ್ನು ಬೆಳೆಯುವುದರಿಂದ ನಮ್ಮ ಭೂಮಿ ಫಲವತ್ತಾಗಿದೆ. ಸಮಗ್ರ ಬೇಸಾಯದಿಂದ ಯಾವ ಗಿಡಗಳಿಗೂ ರೋಗ ಬಾಧೆ ಕಾಡುತ್ತಿಲ್ಲ. ಹೀಗಾಗಿ ಉತ್ತಮವಾದ ಬೆಳೆ ಬೆಳೆದು, ಉತ್ತಮ ಬೆಲೆಯನ್ನು ಪಡೆದಿದ್ದೇನೆ. ಒಂದೇ ಬೆಳೆಯನ್ನು ಬೆಳೆದರೆ ರೈತರಿಗೆ ಹೆಚ್ಚು ಲಾಭ ಬರುವುದಿಲ್ಲ. ಈ ಸಮಗ್ರ ಬೇಸಾಯ ಪದ್ಧತಿಯಿಂದ ಭೂಮಿಯೂ ಆರೋಗ್ಯಕರ ವಾಗಿರುತ್ತದೆ. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದಲ್ಲದೇ ಕೈತುಂಬಾ ಹಣವೂ ಸಿಗುತ್ತದೆ ಎನ್ನುತ್ತಾರೆ.

ಸ್ಥಳೀಯ ಬಿಳಿಗೆರೆ ರೈತ ಸಂಪರ್ಕ ಕೇಂದ್ರದ ಕೃಷಿ ಅಽಕಾರಿ ಶ್ರುತಿ ಹಾಗೂ ಇತರೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತೋಟಗಾರಿಕೆ ಹಾಗೂ ಸಾವಯುವ ಗೊಬ್ಬರ ತಯಾರು ಮಾಡಿ ಕೊಂಡು ಸಮಗ್ರ ಬೇಸಾಯದಲ್ಲಿ ತೊಡಗಲು, ಹೆಚ್ಚು ಲಾಭ ಪಡೆಯಲು ಸಾಧ್ಯವಾಯಿತು. ಕೃಷಿ ಇಲಾಖೆ ಅಽಕಾರಿಗಳು ಈ ಪದ್ಧತಿ ಅನುಸರಿಸಲು ಹಾಗೂ ಹೆಚ್ಚು ಲಾಭ ಪಡೆಯಲು ನನಗೆ ಮಾರ್ಗದರ್ಶನ ನೀಡಿ ಅನುಕೂಲ ಮಾಡಿಕೊಟ್ಟರು ಎಂದು ರೈತ ಶಿವಕುಮಾರ್ ಕೃಷಿ ಇಲಾಖೆ ಅಽಕಾರಿಗಳಿಗೆ ಧನ್ಯವಾದ ಹೇಳುತ್ತಾರೆ.

ಸುಭಾಷ್ ಪಾಳೇಕಾರರ ಶೂನ್ಯ ಬಂಡವಾಳದಲ್ಲಿ ನೈಸರ್ಗಿಕ ಕೃಷಿ ಮಾಡುವ ಪದ್ಧತಿಯನ್ನು ಅನುಸರಿಸು ತ್ತಿರುವ ರೈತ ಕಲ್ಮಳ್ಳಿ ಶಿವಕುಮಾರ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರೈತ ಮುಖಂಡ ಬೊಕ್ಕಳ್ಳಿ ನಂಜುಂಡಸ್ವಾಮಿ ಅವರು, ಕೃಷಿ ಲಾಭದಾಯಕವಲ್ಲ ಎಂದು ರೈತರು ಕೈಚೆಲ್ಲುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಈ ಪದ್ಧತಿಯನ್ನು ಅನುಸರಿಸಲು ಹೆಚ್ಚು ನೆರವು ನೀಡಬೇಕು. ಈ ಪದ್ಧತಿಯಿಂದ ರೈತನ ಆರ್ಥಿಕ ಮಟ್ಟ ಹಾಗೂ ದೇಶದ ಆರ್ಥಿಕ ಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

10 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

12 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

13 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

14 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

16 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

16 hours ago