ಎನ್.ಕೇಶವಮೂರ್ತಿ

small is beautiful ಎಂಬ ಇಂಗ್ಲಿಷ್ ನಾಣ್ಣುಡಿಯಂತೆ ಸಣ್ಣದು ಎಂಬುದು ಸುಂದರ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ಏಕೆ ಈ ಮಾತು ನನಗೆ ನೆನಪಿಗೆ ಬಂತು ಎಂದರೆ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಅತ್ಯಂತ ಸಣ್ಣ ಹಿಡುವಳಿ ರೈತನನ್ನು ಭೇಟಿಯಾಗಿದ್ದೆ. ಅವರ ಬಳಿ ಇದ್ದದ್ದು ಕೇವಲ ನಲವತ್ತು ಸೆಂಟ್ಸ್ ಜಮೀನು. (ಎಕರೆಗೆ ನೂರು ಸೆಂಟ್ಸ್) ಅಂದರೆ, ಅರ್ಧ ಎಕರೆಗಿಂತ ಕಡಿಮೆ ಜಮೀನು. ಅದರಲ್ಲಿಯೇ ಅವರ ಪುಟ್ಟ ಮನೆಯೂ ಇತ್ತು. ಐದು ಜನರಿರುವ ಸುಂದರ ಕುಟುಂಬ. ಇದೆಲ್ಲವೂ ಆ ಪುಟ್ಟ ಜಮೀನಿನಲ್ಲಿಯೇ ನಡೆಯುತ್ತಿತ್ತು. ಆ ಕುಟುಂಬದವರು ಯಾರು? ಎಲ್ಲಿದ್ದಾರೆ? ಆ ವಿವರ ಈಗ ಬೇಡ. ಅವರು ಏನು ಮಾಡುತ್ತಿದ್ದಾರೆ ಎಂಬುದಷ್ಟೇ ಮುಖ್ಯ.

ಅವರ ಜಮೀನಿನಲ್ಲಿ ಹತ್ತು ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಅವು ಸುಮಾರು ೨೦ ವರ್ಷಗಳ ಮರಗಳು. ಎಲ್ಲವೂ ಆರೋಗ್ಯದಿಂದ ನಳನಳಿಸುತ್ತಿದ್ದವು. ಒಂದೊಂದು ಮರದ ಇಳುವರಿ ಮುನ್ನೂರು ತೆಂಗಿನಕಾಯಿ. ಇವರು ಎಳನೀರು ಮಾರುವುದಿಲ್ಲ, ಕೊಬ್ಬರಿಗೂ ಹಾಕುವುದಿಲ್ಲ. ನೇರವಾಗಿ ಗ್ರಾಹಕರಿಗೆ ತೆಂಗಿನಕಾಯಿ ಮಾರುತ್ತಾರೆ. ಪ್ರತಿ ಕಾಯಿಗೆ ಇಪ್ಪತ್ತು ರೂಪಾಯಿ. ಅಲ್ಲಿಗೆ ಹತ್ತು ತೆಂಗಿನಮರಗಳಿಂದ ಮೂರು ಸಾವಿರ ಕಾಯಿ, ಅದರ ಮಾರಾಟದಿಂದ ಏನಿಲ್ಲವೆಂದರೂ ೬೦ ಸಾವಿರ ರೂ. ಆದಾಯ ಬರುತ್ತಿದೆ.

ತೆಂಗಿನಮರಗಳಿಂದ ಪಡೆದದ್ದೆಲ್ಲ ಆದಾಯವೇ. ಏಕೆಂದರೆ ಅವರು ತೆಂಗಿನಮರಗಳಿಗೆ ಯಾವುದೇ ರಾಸಾಯನಿಕ ಗೊಬ್ಬರಗಳನ್ನು ನೀಡುವುದಿಲ್ಲ. ಯಾವುದೇ ಔಷಧಗಳನ್ನು ಸಿಂಪಡಣೆ ಮಾಡುವುದಿಲ್ಲ. ಸಂಪೂರ್ಣ ಸಾವಯವ ಗೊಬ್ಬರದಿಂದಲೇ ನಿರ್ವಹಣೆ ಮಾಡುತ್ತಿದ್ದಾರೆ. ಇವುಗಳೊಂದಿಗೆ ಅವರ ಜಮೀನಿನಲ್ಲಿ ಎರಡು ಕ್ರಾಸ್ ಬ್ರೀಡ್ ಹಸುಗಳಿವೆ. ಅವುಗಳಿಗೆ ಬೇಕಾದಷ್ಟು ಮೇವನ್ನು ಜಮೀನಿನಲ್ಲಿಯೇ ಬೆಳೆದಿದ್ದಾರೆ. ತಮ್ಮ ಮನೆಗೆ ಬೇಕಾದಷ್ಟು ಹಾಲನ್ನು ಉಳಿಸಿಕೊಂಡು ಮಿಕ್ಕ ೧೫ ಲೀ. ಹಾಲನ್ನು ಮಾರಾಟ ಮಾಡುತ್ತಾರೆ. ಅದೂ ಸಹ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಾರೆ. ಇದರಿಂದ ಉತ್ತಮ ಲಾಭ ಗಳಿಸುತ್ತಿದ್ದಾರೆ.

ಇದರೊಂದಿಗೆ ಇವರಪ್ರಮುಖ ಆರ್ಥಿಕ ಬೆಲೆ ಉಡುಪಿಯ ಶಂಕರಪುರ ಮಲ್ಲಿಗೆ. ಮನೆ ಮಂದಿಯೆಲ್ಲಾ ಸೇರಿ ಇದರ ಬೇಸಾಯ ಮಾಡುತ್ತಾರೆ. ಹೂ ಬಿಡಿಸಿ, ಕಟ್ಟಿ ಮಾರುವುದರಲ್ಲಿ ಇವರ ಕುಟುಂಬ ನಿಸ್ಸೀಮತೆ ಹೊಂದಿದೆ. ಇದಷ್ಟೇ ಅಲ್ಲದೇ ತಮ್ಮ ಬೇಕಾದ ತರಕಾರಿಗಳನ್ನು ತಮ್ಮ ಜಮೀನಿನಲ್ಲಿಯೇ ಬೆಳೆದುಕೊಳ್ಳುತ್ತಾರೆ. ಒಟ್ಟಾರೆ ಇವರದ್ದು ಸಂತೃಪ್ತಿಯ ಕೃಷಿ ಬದುಕು. ಇವರ ಬಗ್ಗೆ ಏಕಿಷ್ಟು ಹೇಳುತ್ತಿದ್ದೇನೆ ಎಂದುಕೊಳ್ಳುತ್ತಿದ್ದೀರಾ. ನನ್ನನ್ನು ತುಂಬ ಆಕರ್ಷಿಸಿದ ಕೃಷಿಕ ಇವರು. ಇವರ ಸರಳ ಜೀವನ ಹಾಗೂ ಹತ್ತು ತೆಂಗಿನಮರಗಳು ನನಗೆ ಇವರ ಮೇಲೆ ಕೂತೂಹಲ ಮೂಡಲು ಕಾರಣವಾಯಿತು. ನಮ್ಮ ಭಾಗಗಳಲ್ಲಿಯೂ ತೆಂಗಿನಮರಗಳನ್ನು ಬೆಳೆಯುತ್ತಾರೆ. ಎಷ್ಟೋ ರೈತರಿಗೆ ಎಕರೆಗೆ ೫ ಸಾವಿರ ತೆಂಗಿನಕಾಯಿಗಳನ್ನು ತೆಗೆಯುವುದೂ ಕಷ್ಟ.

ಹೀಗಿರುವಾಗ ಇವರು ಕೇವಲ ೧೦ ಗಿಡಗಳಿಂದ ಮೂರು ಸಾವಿರ ತೆಂಗಿನ ಕಾಯಿಗಳನ್ನು ಪಡೆಯುತ್ತಿದ್ದಾರೆ ಎಂದರೆ ನಂಬಲು ಅಸಾಧ್ಯವಾದರೂ ಇದು ಸತ್ಯ. ಹಿರಿಯರು ಹೇಳುವ ಹಾಗೆ ‘ಅಗಲವಾಗಿ ಬೇಸಾಯ ಮಾಡುವ ಬದಲು ಆಳವಾಗಿ ಬೇಸಾಯ ಮಾಡಬೇಕು’. ಇರುವ ಅಲ್ಪ ಜಮೀನಿನಲ್ಲಿಯೇ ಸ್ವಲ್ಪವೇ ಬೆಳೆ ಬೆಳೆದು ಅದಕ್ಕೆ ನಮ್ಮ ಎಲ್ಲ ಒಳಸುಳಿ ಬಳಸಿ, ಖರ್ಚನ್ನು ಮಿತಗೊಳಿಸಿ, ಕನಿಷ್ಠ ಅಗತ್ಯತೆಗಳೊಂದಿಗೆ ಬದುಕಿದರೆ ಬದುಕು ಸುಂದರವಾಗಲಿದೆ. ಆದರೆ ಹಾಗೆ ಬದುಕಲು ಬೇಸಾಯ ಮಾಡುವ ದೃಢ ಸಂಕಲ್ಪಬೇಕು. ಎಲ್ಲರಿಗೂ ಇದು ಸಾಧ್ಯವಾಗದಿರಬಹುದು. ಸಾಧ್ಯವಾಗಿಸಿದರೆಸಣ್ಣ ಕೃಷಿ ಬದುಕು ಸಹನೀಯವಾಗುತ್ತದೆ. ಸುಂದರವೂ ಆಗುತ್ತದೆ.

(ಲೇಖಕರು ಮೈಸೂರಿನ ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ)

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

8 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

9 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago