ಅನ್ನದಾತರ ಅಂಗಳ

ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನಮ್ಮ ಸುತ್ತಮುತ್ತಲೇ ಇದೆ

• ಎನ್.ಕೇಶವಮೂರ್ತಿ

ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ, ಕಾಕಡ, ಕನಕಾಂಬರ, ಸುಗಂಧರಾಜ, ಮಲ್ಲಿಗೆ ಹೂಗಳನ್ನು ಬೆಳೆಯುತ್ತಾರೆ.

ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ ಹೊರತು ನಗರಗಳ ಮಾರುಕಟ್ಟೆಗಳಲ್ಲಿ ಅಲ್ಲ.

ಏಕೆ ಹೀಗೆ? ಎಂದು ಪ್ರಶ್ನಿಸಿದರೆ ರೈತರು ಹೇಳುವುದು, ‘ಸರ್ ಈ ಸಂತೆ ನಮಗೆ ಹತ್ತಿರ, ಸೈಕಲ್‌ನಲ್ಲಿ ಬರಬಹುದು, ಬಹಳ ಜನ ಗ್ರಾಹಕರು ಪರಿಚಯ ಆಗಿರುವುದರಿಂದ ಮಾರಾಟ ಬೇಗ ಆಗುತ್ತೆ, ತಕ್ಷಣ ಹಣ ಸಂದಾಯವೂ ಆಗಿ ನಾವು ತಂದೆ ಮಕ್ಕಳು ಸೇರಿ, ಬೆಳಗಿನ ನಾಲ್ಕಾರು ಗಂಟೇಲಿ ಕಟ್ಟಿದ ಹೂ ಮಾರಿಬಿಡ್ತೀವಿ. ಮಾರಿದ ಮೇಲೆ ಮನೆಗೆ ಹೋಗಿ ತಿಂಡಿ ತಿಂತೀವಿ. ಬೇರೆ ಖರ್ಚು ಇರೋಲ್ಲ. ಒಮ್ಮೊಮ್ಮೆ ಹೂವಿನ ಜತೆ ಬೆಳೆದ ತರಕಾರಿಯನ್ನೂ ಹೀಗೇ ಮಾರ್ತೀವಿ. ನಮಗೋಸ್ಕರ ಕಾಯುವ ಗ್ರಾಹಕರಿದ್ದಾರೆ. ಮುಂಗಡವಾಗಿ ಹಬ್ಬ ಹರಿದಿನಗಳಲ್ಲಿ ಹಣ ನೀಡುವವರಿದ್ದಾರೆ. ನಮ್ಮ ಹೂವಿನ ಗುಣಮಟ್ಟ ಉತ್ತಮವಾಗಿರುವುದರಿಂದ ನಮಗೆ ನಾವು ಬೆಳೆದಿರೋದನ್ನು ಮಾರಲು ಎಂದಿಗೂ ಸಮಸ್ಯೆಯಾಗಿಲ್ಲ. ಪೇಟೆಗಿಂತ ಬೆಲೆ ಕಡಿಮೆ ಇರಬಹುದು. ಆದರೆ ಉಳಿದ ಖರ್ಚು ಕಡಿಮೆಯಾಗಿರುವುದರಿಂದ ಲಾಭಕ್ಕೇನೂ ಮೋಸವಿಲ್ಲ ಅಂತಾರೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಎಲ್ಲೆಲ್ಲೂ ಹುಡುಕುವ ನಾವು ನಮ್ಮ ಹಳ್ಳಿ, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಿದ್ದೆಲ್ಲಿ? ದೀಪದ ಕೆಳಗೆ ಕತ್ತಲೆ ಅಂತಾ ಇದಕ್ಕೇ ಹೇಳ್ತಾರೇನೋ…!

ಸುಮ್ಮನೆ ಒಂದು ಹಳ್ಳಿನ ಉದಾಹರಣೆಗೆ ತೆಗೆದುಕೊಳ್ಳೋಣ. ಐದುನೂರು ಮನೆಗಳ ಗ್ರಾಮ ಅಂದುಕೊಳ್ಳಿ. ಒಂದೊಂದು ಮನೆಯವರೂ ಹಾಲು, ಮೊಸರು, ಬೆಣ್ಣೆ, ತುಪ್ಪ, ಹಣ್ಣು, ತರಕಾರಿ, ಸೊಪ್ಪು, ಅಕ್ಕಿ, ರಾಗಿ, ಬೇಳೆಕಾಳುಗಳು, ಎಣ್ಣೆ, ಸಾಂಬಾರ ಪದಾರ್ಥಗಳು ಹೀಗೆ ಮನೆಗೆ ಬೇಕಾದ ಇತರೇ ವಸ್ತುಗಳಿಗಾಗಿ ಕನಿಷ್ಠ ಮೂರು ಸಾವಿರ ರೂ.ಗಳಾದರೂ ಖರ್ಚಾಗಲಿದೆ. ಇವುಗಳಲ್ಲಿ ಒಂದಿಷ್ಟನ್ನು ರೈತರು ತಾವೇ ಬೆಳೆದುಕೊಳ್ಳುತ್ತಾರೆ. ಆದರೆ ಬಹುಪಾಲು ರೈತರೂ ತಮ್ಮ ಮನೆ ಅಗತ್ಯಗಳಿಗಾಗಿ ಮಾರುಕಟ್ಟೆ ಅವಲಂಬಿಸಿದ್ದಾರೆ. ಅಂದಾಜಿನ ಪ್ರಕಾರ ಐದುನೂರು ಮನೆಗಳ ಗ್ರಾಮವೊಂದು ಪ್ರತಿ ತಿಂಗಳು ಏನಿಲ್ಲ ಎಂದರೂ ಮಾರುಕಟ್ಟೆ ಮೌಲ್ಯ ಹದಿನೈದರಿಂದ ಇಪ್ಪತ್ತು ಲಕ್ಷ ರೂ. ಖರ್ಚು ಮಾಡುತ್ತಿದೆ. ಈ ಮಾರುಕಟ್ಟೆಯನ್ನು ಯಾವ ರೈತ ಬಳಸಿಕೊಳ್ಳುತ್ತಿದ್ದಾನೆ? ಇದರ ಬದಲು ಸಮೀಪದ ಪಟ್ಟಣಕ್ಕೆ ಹೋಗಿ ಇತರೇ ಗ್ರಾಹಕರಂತೆ ಖರೀದಿಸುತ್ತಿದ್ದಾನೆ.

ಪಟ್ಟಣಕ್ಕೆ ಹೋಗಿ ಬರುವ, ಅಲ್ಲಿ ಶೋಕಿ ಮಾಡುವ, ಸಿನಿಮಾ ಹೋಟೆಲ್ ಖರ್ಚು, ಅಲ್ಲದೆ ಪಾನಪ್ರಿಯರಾದರೆ ಅದರ ಖರ್ಚು ಎಲ್ಲ ಸೇರಿ ತಿಂಗಳಿಗೆ ಮೂರರಿಂದ ಐದು ಸಾವಿರ ರೂ. ಹೆಚ್ಚು ಖರ್ಚು. ಅದೂ ಮನೆಗೆ ಬೇಕಾಗಿದ್ದ ಸಾಮಾನು ತರಲು ಆಗುವ ಖರ್ಚಿಗೆ ಕೊಸರು. ರೈತರು ಪ್ರಾಪಂಚಿಕ ಸುಖಗಳಿಂದ ದೂರ ಇರಬೇಕು ಅಂತಾ ಹೇಳುವುದು ನನ್ನ ಉದ್ದೇಶವಲ್ಲ. ಬದಲಿಗೆ ಆದಾಯ ಹಾಗೂ ವೆಚ್ಚದ ಮೂಲ ಹುಡುಕುವುದೇ ಆಗಿದೆ.
ನಾನು ಹೇಳುವುದಿಷ್ಟು. ನಮ್ಮ ಮಾರುಕಟ್ಟೆ ಬೇರೆಲ್ಲೂ ಇಲ್ಲ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ಇದೆ. ನಮ್ಮ ಹಳ್ಳಿಯಲ್ಲಿಯೇ ಇದೆ. ನಮ್ಮ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿದೆ. ಮೊದಲು ಆ ಮಾರುಕಟ್ಟೆಯನ್ನು ಅರ್ಥ ಮಾಡಿಕೊಳ್ಳೋಣ, ಸದ್ಬಳಕೆ ಮಾಡಿಕೊಳ್ಳೋಣ. ನಂತರ ಬೇರೆ ಮಾರುಕಟ್ಟೆ ನಿಧಾನವಾಗಿ ನಮಗೆ ಅರ್ಥವಾಗುತ್ತೆ.
ಮೊದಲು ಮನೆ ಗೆದ್ದು ನಂತರ ಮಾರುಕಟ್ಟೆ ಗೆಲ್ಲಬೇಕಲ್ಲವೇ?
(keshavamurthy.n@gmail.com) (ಅಂಕಣಕಾರರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಹಕರು)

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago