ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಡ್ಯದ ಧರ್ಮೇಶ್

ಬಿ.ಟಿ.ಮೋಹನ್ ಕುಮಾರ್

ನಾಲ್ಕು ಪದವಿಗಳು ಮೂರು ಚಿನ್ನದ ಪದಕಗಳನ್ನು ಪಡೆದು ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಮನೆ ಮನೆಗೆ ಹಾಲು ಹಾಕುವ ಕಾಯಕವನ್ನು ಮರೆಯದೆ ಮೊದಲು ತಾವೊಬ್ಬ ಕೃಷಿಕ ಎಂಬುದನ್ನು ಸಾಬೀತು ಮಾಡಿದ್ದಾರೆ ಎಚ್.ಪಿ. ಧರ್ಮೇಶ್.

ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ಎಇಟಿ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯನಿರ್ವಹಿಸುತ್ತಿರುವ ಮಂಡ್ಯದ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿ ಮತ್ತು ಜಯಲಕ್ಷ್ಮಿ ದಂಪತಿಯ ಪುತ್ರ ಎಚ್.ಪಿ.ಧರ್ಮೇಶ್ ಇಂದಿನ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಆದರ್ಶವಾಗಿದ್ದಾರೆ.

ಮೂಲತಃ ಕೃಷಿ ಕುಟುಂಬದವರಾಗಿದ್ದರೂ ಕೃಷಿ ಜತೆ ಜತೆಗೆ ಶ್ರದ್ಧೆಯಿಂದ ವ್ಯಾಸಂಗ ಮಾಡಿ ಬಿ.ಎ., ಬಿ.ಎಡ್., ಎಂ.ಎಡ್., ಕನ್ನಡ ಎಂ.ಎ., ಪದವಿಗಳನ್ನು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮುಗಿಸಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಷಯದಲ್ಲಿ ಎಂಎ ಪದವಿಯನ್ನು ಪಡೆದಿದ್ದಾರೆ.

ನಿತ್ಯ ಸಚಿವ ಕೆ.ವಿ.ಶಂಕರಗೌಡರು ಸ್ಥಾಪಿಸಿರುವ ಪಿಇಟಿ ಶಿಕ್ಷಣ ಸಂಸ್ಥೆಯಲ್ಲಿ ಎಂ. ಎಡ್. ಪದವಿಯಲ್ಲಿ ಪ್ರಥಮ ರಾಂಕ್ ಗಳಿಸಿ ಮೂರು ಚಿನದ ಪದಕ ಹಾಗೂ ಎರಡು ನಗದು ಬಹುಮಾನಗಳನ್ನು ಪಡೆದಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. ಇತಿಹಾಸದಲ್ಲಿ ರಾಜ್ಯಕ್ಕೇ 10ನೇ ಬ್ಯಾಂಕ್ ಹಾಗೂ ಕೆ-ಸೆಟ್ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಇವರ ಶೈಕ್ಷಣಿಕ ಜೀವನದ ಹೆಗ್ಗಳಿಕೆಯಾಗಿದೆ.

ಮಂಡ್ಯದ ಎಇಟಿ ಶಿಕ್ಷಣ ಮಹಾವಿದ್ಯಾಲಯ ದಲ್ಲಿ 2019ರಿಂದ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುವ ವೇಳೆ ಆರ್ಥಿಕ ಸಬಲತೆಗಾಗಿ ಹೈನುಗಾರಿಕೆ ಪ್ರಾರಂಭ ಮಾಡಿ ದರು. ಅಂದಿನಿಂದ ಇಂದಿನವರೆಗೂ ಪ್ರತಿನಿತ್ಯ ಬೆಳಿಗ್ಗೆ 5 ಗಂಟೆಯಿಂದ 8, ಸಂಜೆ 4.30ರಿಂದ 7 ಗಂಟೆಯವರೆಗೆ ಮನೆ ಮನೆಗಳಿಗೆ ಹಾಲು ಹಾಕುವ ಕಾಯಕ ಮುಂದುವರಿಸಿಕೊಂಡು ಬಂದಿದ್ದಾರೆ. ಆ ಮೂಲಕ ಯುವಜನಾಂಗಕ್ಕೆ ಮಾದರಿಯಾಗಿದ್ದಾರೆ.

ಹೈನುಗಾರಿಕೆ ಜತೆಗೆ ಭತ್ತ, ಕಬ್ಬು, ರಾಗಿ ಬೆಳೆ ಗಳನ್ನು ಬೆಳೆಯುವ ಮೂಲಕ ಕೃಷಿಕನಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಧರ್ಮೇಶ್, ನಾನೊಬ್ಬ ಉನ್ನತ ವ್ಯಾಸಂಗ ಮಾಡಿರುವವನು, ಇಂಥ ಕೆಲಸಗಳನ್ನು ನಾನು ಮಾಡಲಾರೆ ಎನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. 4 ಪದವಿ, ಚಿನ್ನದ ಪದಕಗಳು ಹಾಗೂ ಹಲವಾರು ಬಹುಮಾನ ಗಳನ್ನು ಪಡೆದಿದ್ದರೂ ಯಾವುದೇ ಮುಜುಗರ ವಿಲ್ಲದೆ ತಾವೇ ಮನೆ ಮನೆಗೆ ಹಾಲು ಹಾಕುವ ಮೂಲಕ ವಿಶಿಷ್ಟ ವ್ಯಕ್ತಿ ಅನಿಸಿದ್ದಾರೆ.

ಧರ್ಮೇಶ್ ಅವರು ಒಬ್ಬ ಆದರ್ಶ ಶಿಕ್ಷಕರಾಗಿದ್ದು, ಉತ್ತಮ ಜ್ಞಾನ ಭಂಡಾರ, ಗುಣ, ತಾಳ್ಮೆ, ಸಹಾನುಭೂತಿ, ಉತ್ಸಾಹ, ಸಮರ್ಪಣಾ ಮನೋಭಾವದಿಂದ ವಿದ್ಯಾರ್ಥಿಗಳ ಕಲಿಕೆಯ ಹಾದಿಯನ್ನು ಬೆಳಗುವ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಲ್ಲಿನ ಪ್ರಾಮಾಣಿಕತೆ, ಜೀವನ ಕೌಶಲ, ನೈತಿಕತೆ, ಸೃಜನ ಶೀಲತೆ, ನಾವೀನ್ಯತೆ, ಸಮಗ್ರತೆ ಹಾಗೂ ಪರಿಶ್ರಮದಂತಹ ಮೌಲ್ಯಗಳು ದುಡಿ ಯುವ ಗುಣಗಳನ್ನು ವಿದ್ಯಾರ್ಥಿಗಳಿಗೂ ತುಂಬುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ.
ಶಾರದಾ ರಮೇಶ್‌ ರಾಜು, ಅಧ್ಯಕ್ಷರು, ಎಇಟಿ ಶಿಕ್ಷಣ ಮಹಾವಿದ್ಯಾಲಯ.

ಕೃಷಿ ಕುಟುಂಬದಿಂದ ಬಂದ ನಾನು ಉನ್ನತ ವ್ಯಾಸಂಗ ಮಾಡಿ ಉಪನ್ಯಾಸಕನಾಗಿದ್ದರೂ ಚಿಕ್ಕ ವಯಸ್ಸಿನಿಂದ ರೂಢಿಸಿಕೊಂಡು ಬಂದ ಹೈನುಗಾರಿಕೆಯನ್ನು ಬಿಡಲು ಮನಸ್ಸು ಒಪ್ಪುತ್ತಿಲ್ಲ. ವೃತ್ತಿಯ ಜತೆಗೆ ಹೈನುಗಾರಿಕೆಯನ್ನೂ ಮಾಡುತ್ತಿರು ವುದು ನನ್ನ ಆರ್ಥಿಕ ಸಬಲತೆಗೆ ಸಹಕಾರಿಯಾಗಿದೆ.
ಎಚ್.ಪಿ.ಧರ್ಮೇಶ್

ಸಂಪದ್ಭರಿತವಾಗಿ ಪಾಠ ಬೋಧನೆ ಯನ್ನು ಮಾಡುತ್ತಾ ಜ್ಞಾನಕೋಶಗಳಿಂದ ವಿಷಯಗಳನ್ನು ಹೆಕ್ಕಿ, ಜೀವನ ಅನುಭವ ಗಳನ್ನು ಹಾಗೂ ದೈನಿಕ ವಿನೋದಗಳನ್ನು ಸೇರಿಸಿ ಪಾಠ ಬೋಧನೆ ಮಾಡುತ್ತಾರೆ. ಭಾಷಾಜ್ಞಾನದ ಪರಿಣತಿ, ವಿಜ್ಞಾನ, ತಂತ್ರಜ್ಞಾನ, ತತ್ವಶಾಸ್ತ್ರಗಳ ವಿಷಯಗಳ ಕುರಿತು ಮೌಲ್ಯಯುತ ಬೋಧನೆ ಮಾಡುತ್ತ ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಉತ್ಸಾಹವನ್ನು ತುಂಬಿ ಮಾರ್ಗದರ್ಶನ ನೀಡುತ್ತಾರೆ.
– ಎನ್.ಆದಿತ್ಯ ಭಾರದ್ವಾಜ್, ವಿದ್ಯಾರ್ಥಿ

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago