ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ ಇಡೀ ಜೀವ ಸಮೂಹಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.
ಜಗತ್ತಿನ ವಿನಾಶಕ್ಕೆ ಯುದ್ಧ, ಸೋಟಕಗಳೇ ಬೇಕೆಂದಿಲ್ಲ. ಭೂಮಿಯ ಮೇಲಿನ ಈ ಎರಡು ಸಣ್ಣ ಜೀವಿಗಳು ಸಂಪೂರ್ಣವಾಗಿ ನಾಶವಾದರೆ, ಇಡೀ ಜೀವ ಜಗತ್ತು ಅನ್ನ-ಆಹಾರವಿಲ್ಲದೆ ನಾಶವಾಗುತ್ತದೆ. ಆ ಎರಡು ಹುಳುಗಳೇ ಒಂದು ಜೇನುಹುಳು, ಮತ್ತೊಂದು ಗೆದ್ದಲು ಹುಳು. ಈ ಲೇಖನದಲ್ಲಿ ಜೇನುಹುಳುಗಳ ಬಗ್ಗೆ ತಿಳಿದುಕೊಳ್ಳೋಣ. ಜೇನುಹುಳುಗಳ ಕಾರ್ಯ ಸಿಹಿಯಾದ ಜೇನು ತುಪ್ಪ ನೀಡುವ ಜತೆಗೆ ಮತ್ತೊಂದು ಮಹತ್ವದ ಕಾರ್ಯವೆಂದರೆ ಪರಾಗಸ್ಪರ್ಶ ಕ್ರಿಯೆಯ ಮೂಲಕ ಎಲ್ಲ ಆಹಾರ ಪದಾರ್ಥಗಳ ಇಳುವರಿಗೆ ನೆರವಾಗುವುದು.
ಜೇನು ಹುಳುಗಳ ನಾಶದಿಂದಾಗುವ ದುಷ್ಪರಿಣಾಮಗಳು: ಜೇನು ಹುಳುಗಳು ನಾಶವಾಗಿ ಪರಾಗ ಸ್ಪರ್ಶ ಕ್ರಿಯೆ ನಿಂತರೆ ಮನುಷ್ಯರ ಹಾಗೂ ಇತರೆ ಜೀವಿಗಳ ಆವಾಸ ಸ್ಥಾನ ನಾಶವಾಗಿ ಜೀವ ಸಂಕುಲವೇ ನಾಶವಾಗುತ್ತದೆ. ಅಲ್ಲದೇ ಸಸ್ಯ ಸಂವಹನ ಮತ್ತು ಸಸ್ಯ ಪ್ರಭೇದಗಳ ನಾಶದಿಂದ ಹವಾಮಾನದಲ್ಲಿ ಬದಲಾವಣೆಯಾಗಿ, ಆಹಾರ ಅಭಾವ ಹೆಚ್ಚಾಗುತ್ತದೆ. ಜೊತೆಗೆ ಜಗತ್ತಿನ ವಿನಾಶವು ಪ್ರಾರಂಭವಾಗುತ್ತದೆ.
ಇಂತಹ ಜೇನು ಹುಳುಗಳ ಉಳಿಕೆ, ಅವುಗಳ ಪರಾಗಸ್ಪರ್ಶ ಕ್ರಿಯೆಯನ್ನು ಹೆಚ್ಚಿಸಲು ಕೆಲವೊಂದು ಸೂಕ್ತ ಮಾರ್ಗಗಳನ್ನು ಅನುಸರಿಸಬೇಕಾಗುತ್ತದೆ. ಜೇನುಹುಳುಗಳ ಪರಾಗ ಸ್ಪರ್ಶ ಸ್ನೇಹಿಯಾದ ಹೂಗಳು, ಹೂ ಬಿಡುವ ಮರಗಳು, ಹಣ್ಣು, ತರಕಾರಿ ಜಾತಿಯ ಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕು. ಅಲ್ಲದೆ ಕೃಷಿ ಭೂಮಿಗಳಿಗೆ ವಿಷಕಾರಿ ಕೀಟನಾಶಕಗಳನ್ನು ಸಿಂಪಡಿಸುವುದನ್ನು ಕೈಬಿಟ್ಟು ಸಾವಯವ ಕೀಟನಾಶಕ ಹಾಗೂ ಕಷಾಯಗಳನ್ನು ಸಿಂಪಡಿಸಬೇಕು. ಆ ಮೂಲಕ ಜೇನುನೊಣಗಳ ನೈಸರ್ಗಿಕ ಆವಾಸಸ್ಥಾನವನ್ನು ಸಂರಕ್ಷಿಸಬೇಕು. ಜೇನು ಗೂಡಿಗೆ ಬೆಂಕಿ ಇಡುವುದನ್ನು ಅಪರಾಧವೆಂದು ಪರಿಗಣಿಸಬೇಕು. ಜತೆಗೆ ಸುಸ್ಥಿರ, ಸಾವಯವ ಕೃಷಿಯನ್ನು ಅತ್ಯಂತ ಜರೂರು ಎಂದು ಪರಿಭಾವಿಸಿ ಆಚರಿಸಬೇಕು. ಪರಾಗಸ್ಪರ್ಶವಾಗಿರುವ ಕೀಟಗಳು ಜೇನುಹುಳು ಚಿಟ್ಟೆಯಂತಹ ಮಿತ್ರ ಕೀಟಗಳ ಸಂರಕ್ಷಣೆಯನ್ನು ಎಲ್ಲರೂ ಉತ್ತೇಜಿಸಬೇಕು.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…