ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ ಇಡೀ ಜೀವ ಸಮೂಹಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.
ಜಗತ್ತಿನ ವಿನಾಶಕ್ಕೆ ಯುದ್ಧ, ಸೋಟಕಗಳೇ ಬೇಕೆಂದಿಲ್ಲ. ಭೂಮಿಯ ಮೇಲಿನ ಈ ಎರಡು ಸಣ್ಣ ಜೀವಿಗಳು ಸಂಪೂರ್ಣವಾಗಿ ನಾಶವಾದರೆ, ಇಡೀ ಜೀವ ಜಗತ್ತು ಅನ್ನ-ಆಹಾರವಿಲ್ಲದೆ ನಾಶವಾಗುತ್ತದೆ. ಆ ಎರಡು ಹುಳುಗಳೇ ಒಂದು ಜೇನುಹುಳು, ಮತ್ತೊಂದು ಗೆದ್ದಲು ಹುಳು. ಈ ಲೇಖನದಲ್ಲಿ ಜೇನುಹುಳುಗಳ ಬಗ್ಗೆ ತಿಳಿದುಕೊಳ್ಳೋಣ. ಜೇನುಹುಳುಗಳ ಕಾರ್ಯ ಸಿಹಿಯಾದ ಜೇನು ತುಪ್ಪ ನೀಡುವ ಜತೆಗೆ ಮತ್ತೊಂದು ಮಹತ್ವದ ಕಾರ್ಯವೆಂದರೆ ಪರಾಗಸ್ಪರ್ಶ ಕ್ರಿಯೆಯ ಮೂಲಕ ಎಲ್ಲ ಆಹಾರ ಪದಾರ್ಥಗಳ ಇಳುವರಿಗೆ ನೆರವಾಗುವುದು.
ಜೇನು ಹುಳುಗಳ ನಾಶದಿಂದಾಗುವ ದುಷ್ಪರಿಣಾಮಗಳು: ಜೇನು ಹುಳುಗಳು ನಾಶವಾಗಿ ಪರಾಗ ಸ್ಪರ್ಶ ಕ್ರಿಯೆ ನಿಂತರೆ ಮನುಷ್ಯರ ಹಾಗೂ ಇತರೆ ಜೀವಿಗಳ ಆವಾಸ ಸ್ಥಾನ ನಾಶವಾಗಿ ಜೀವ ಸಂಕುಲವೇ ನಾಶವಾಗುತ್ತದೆ. ಅಲ್ಲದೇ ಸಸ್ಯ ಸಂವಹನ ಮತ್ತು ಸಸ್ಯ ಪ್ರಭೇದಗಳ ನಾಶದಿಂದ ಹವಾಮಾನದಲ್ಲಿ ಬದಲಾವಣೆಯಾಗಿ, ಆಹಾರ ಅಭಾವ ಹೆಚ್ಚಾಗುತ್ತದೆ. ಜೊತೆಗೆ ಜಗತ್ತಿನ ವಿನಾಶವು ಪ್ರಾರಂಭವಾಗುತ್ತದೆ.
ಇಂತಹ ಜೇನು ಹುಳುಗಳ ಉಳಿಕೆ, ಅವುಗಳ ಪರಾಗಸ್ಪರ್ಶ ಕ್ರಿಯೆಯನ್ನು ಹೆಚ್ಚಿಸಲು ಕೆಲವೊಂದು ಸೂಕ್ತ ಮಾರ್ಗಗಳನ್ನು ಅನುಸರಿಸಬೇಕಾಗುತ್ತದೆ. ಜೇನುಹುಳುಗಳ ಪರಾಗ ಸ್ಪರ್ಶ ಸ್ನೇಹಿಯಾದ ಹೂಗಳು, ಹೂ ಬಿಡುವ ಮರಗಳು, ಹಣ್ಣು, ತರಕಾರಿ ಜಾತಿಯ ಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕು. ಅಲ್ಲದೆ ಕೃಷಿ ಭೂಮಿಗಳಿಗೆ ವಿಷಕಾರಿ ಕೀಟನಾಶಕಗಳನ್ನು ಸಿಂಪಡಿಸುವುದನ್ನು ಕೈಬಿಟ್ಟು ಸಾವಯವ ಕೀಟನಾಶಕ ಹಾಗೂ ಕಷಾಯಗಳನ್ನು ಸಿಂಪಡಿಸಬೇಕು. ಆ ಮೂಲಕ ಜೇನುನೊಣಗಳ ನೈಸರ್ಗಿಕ ಆವಾಸಸ್ಥಾನವನ್ನು ಸಂರಕ್ಷಿಸಬೇಕು. ಜೇನು ಗೂಡಿಗೆ ಬೆಂಕಿ ಇಡುವುದನ್ನು ಅಪರಾಧವೆಂದು ಪರಿಗಣಿಸಬೇಕು. ಜತೆಗೆ ಸುಸ್ಥಿರ, ಸಾವಯವ ಕೃಷಿಯನ್ನು ಅತ್ಯಂತ ಜರೂರು ಎಂದು ಪರಿಭಾವಿಸಿ ಆಚರಿಸಬೇಕು. ಪರಾಗಸ್ಪರ್ಶವಾಗಿರುವ ಕೀಟಗಳು ಜೇನುಹುಳು ಚಿಟ್ಟೆಯಂತಹ ಮಿತ್ರ ಕೀಟಗಳ ಸಂರಕ್ಷಣೆಯನ್ನು ಎಲ್ಲರೂ ಉತ್ತೇಜಿಸಬೇಕು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…