ಆಂದೋಲನ ಪುರವಣಿ

ಮುಪ್ಪಿಗೆ ಲವಲವಿಕೆಯೇ ಚೈತನ್ಯ

‘ವಯಸ್ಸಾಯಿತು’ ಎನ್ನುವ ಮಾತು ಸಹಜವಾಗಿ ಹೋಗಿದೆ. ವಯಸ್ಸಾದಂತೆ ಕ್ರಿಯೆಗೆ ಪ್ರತಿಕ್ರಿಯಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತಾ ಹೋಗುತ್ತದೆ.
ಕೆಲವರು ಮುಪ್ಪಿನ ಲಕ್ಷಣಗಳಲ್ಲಿ ಇದೂ ಒಂದು ಎನ್ನುತ್ತಾರೆ. ಇದಕ್ಕೆ ವಯೋ ಸಹಜವಾದ ಸಮಸ್ಯೆಗಳೇ ಕಾರಣ. ಜೀವನದಲ್ಲಿ ಉತ್ಸಾಹವೇ ಇರದಿದ್ದರೆ, ಬದುಕು ನೀರಸವೆನಿಸುತ್ತದೆ. ಹಾಗಾದರೆ ಜೀವ ಚೈತನ್ಯ, ಲವಲವಿಕೆಯನ್ನು ಕಾಪಾಡಿಕೊಳ್ಳುವ ಬಗೆ ಹೇಗೆ? ಸಾಧ್ಯವಾದಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದ ದೇಹ ನಿರೋಧಕ ವ್ಯವಸ್ಥೆ ಇನ್ನಷ್ಟು ಚೈತನ್ಯಶಾಲಿಯಾಗುತ್ತದೆ. ನಿಯಮಿತವಾಗಿ ವ್ಯಾಯಾಮವನ್ನು ಮಾಡುವುದು ಒಳ್ಳೆಯದು ಎಂದು ಅನೇಕ ಸಮೀಕ್ಷೆಗಳು ವರದಿ ನೀಡಿವೆ.

ಬೆಳಗಿನ ವೇಳೆ ನಡಿಗೆ, ಕುಳಿತುಕೊಂಡು ಮಾಡುವ ಸುಲಭ ಆಸನಗಳು ಇನ್ನೂ ಹಲವು ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಷ್ಟೂ ದೇಹ ಕ್ರಿಯಾಶೀಲವಾಗಿರುತ್ತದೆ. ಹವ್ಯಾಸಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುವುದು ಸಹಕಾರಿ. ಅಂತೆಯೇ, ಇತರರೊಂದಿಗೆ ಬೆರೆತು, ಸಂತೋಷದ
ಕ್ಷಣಗಳನ್ನು ಕಾಪಾಡಿಕೊಳ್ಳುವುದು ಎಂದಿಗೂ ಮುಖ್ಯವಾದದ್ದು. ನೀವು ಗಮನಿಸಿರಬಹುದು, 80ರ ಆಸುಪಾಸಿನ ಅಜ್ಜನೋ ಅಜ್ಜಿಯೋ ಹೊಲದಲ್ಲಿ
ಕೆಲಸ ಮಾಡುತ್ತಿರುವುದು, ಸೊಪ್ಪು ಮಾರುತ್ತಿರುವುದು, ಉಣ್ಣೆಯ ಬಟ್ಟೆಗಳನ್ನು ನೇಯುತ್ತಿರುವುದು, ಹೂ ಕಟ್ಟುತ್ತಿರುವುದು ಹೀಗೆ ಹುಡುಕುತ್ತಾ ಹೋದರೆ ಸಾವಿರಾರು ದೃಶ್ಯಗಳು ನಮ್ಮ ಸುತ್ತಲೇ ಇವೆ.

 

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

21 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

55 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

4 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 hours ago