‘ವಯಸ್ಸಾಯಿತು’ ಎನ್ನುವ ಮಾತು ಸಹಜವಾಗಿ ಹೋಗಿದೆ. ವಯಸ್ಸಾದಂತೆ ಕ್ರಿಯೆಗೆ ಪ್ರತಿಕ್ರಿಯಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತಾ ಹೋಗುತ್ತದೆ.
ಕೆಲವರು ಮುಪ್ಪಿನ ಲಕ್ಷಣಗಳಲ್ಲಿ ಇದೂ ಒಂದು ಎನ್ನುತ್ತಾರೆ. ಇದಕ್ಕೆ ವಯೋ ಸಹಜವಾದ ಸಮಸ್ಯೆಗಳೇ ಕಾರಣ. ಜೀವನದಲ್ಲಿ ಉತ್ಸಾಹವೇ ಇರದಿದ್ದರೆ, ಬದುಕು ನೀರಸವೆನಿಸುತ್ತದೆ. ಹಾಗಾದರೆ ಜೀವ ಚೈತನ್ಯ, ಲವಲವಿಕೆಯನ್ನು ಕಾಪಾಡಿಕೊಳ್ಳುವ ಬಗೆ ಹೇಗೆ? ಸಾಧ್ಯವಾದಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದ ದೇಹ ನಿರೋಧಕ ವ್ಯವಸ್ಥೆ ಇನ್ನಷ್ಟು ಚೈತನ್ಯಶಾಲಿಯಾಗುತ್ತದೆ. ನಿಯಮಿತವಾಗಿ ವ್ಯಾಯಾಮವನ್ನು ಮಾಡುವುದು ಒಳ್ಳೆಯದು ಎಂದು ಅನೇಕ ಸಮೀಕ್ಷೆಗಳು ವರದಿ ನೀಡಿವೆ.
ಬೆಳಗಿನ ವೇಳೆ ನಡಿಗೆ, ಕುಳಿತುಕೊಂಡು ಮಾಡುವ ಸುಲಭ ಆಸನಗಳು ಇನ್ನೂ ಹಲವು ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಷ್ಟೂ ದೇಹ ಕ್ರಿಯಾಶೀಲವಾಗಿರುತ್ತದೆ. ಹವ್ಯಾಸಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುವುದು ಸಹಕಾರಿ. ಅಂತೆಯೇ, ಇತರರೊಂದಿಗೆ ಬೆರೆತು, ಸಂತೋಷದ
ಕ್ಷಣಗಳನ್ನು ಕಾಪಾಡಿಕೊಳ್ಳುವುದು ಎಂದಿಗೂ ಮುಖ್ಯವಾದದ್ದು. ನೀವು ಗಮನಿಸಿರಬಹುದು, 80ರ ಆಸುಪಾಸಿನ ಅಜ್ಜನೋ ಅಜ್ಜಿಯೋ ಹೊಲದಲ್ಲಿ
ಕೆಲಸ ಮಾಡುತ್ತಿರುವುದು, ಸೊಪ್ಪು ಮಾರುತ್ತಿರುವುದು, ಉಣ್ಣೆಯ ಬಟ್ಟೆಗಳನ್ನು ನೇಯುತ್ತಿರುವುದು, ಹೂ ಕಟ್ಟುತ್ತಿರುವುದು ಹೀಗೆ ಹುಡುಕುತ್ತಾ ಹೋದರೆ ಸಾವಿರಾರು ದೃಶ್ಯಗಳು ನಮ್ಮ ಸುತ್ತಲೇ ಇವೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…