ಆಂದೋಲನ ಪುರವಣಿ

ಗೆಳೆತನವೇ ಗುರಿ, ಸೇವೆಯೇ ದಾರಿ

 ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಂಸ್ಥೆ ಇನ್ನರ್ ವೀಲ್. ಲಕ್ಷಾಂತರ ಮಹಿಳೆಯರನ್ನು ಸದಸ್ಯರನ್ನಾಗಿಸಿಕೊಂಡು ಪರಸ್ಪರ ಸ್ನೇಹ, ಪ್ರೀತಿಯಿಂದ ಬೆಸೆದು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಈ ಸಂಸ್ಥೆ ಇದೀಗ ಶತಮಾನದ ಸನಿಹದಲ್ಲಿದೆ.

ಸೌಮ್ಯ ಹೆಗ್ಗಡಹಳ್ಳಿ

ನೂರು ವರ್ಷಗಳ ಹೊಸ್ತಿಲಲ್ಲಿ ನಿಂತಿರುವ ‘ಇನ್ನರ್ ವೀಲ್’ ಮಹಿಳೆಯರ ಪಾಲಿನ ಭರವಸೆ. ೧೯೨೪ರಲ್ಲಿ ಇಂಗ್ಲೆಂಡ್‌ನ ಮಾಂಚೆಸ್ಟರ್‌ನಲ್ಲಿ ಮಾರ್ಗರೇಟ್ ಗೊಲ್ಡಿಂಗ್ ಎಂಬ ನರ್ಸ್‌ರಿಂದ ಪ್ರಾರಂಭವಾದ ಸಂಸ್ಥೆ ಇಂದು ಭಾರತ ಸೇರಿ ೧೦೦ಕ್ಕೂ ಹೆಚ್ಚು ದೇಶಗಳಲ್ಲಿ ೧೦ ಲಕ್ಷಕ್ಕೂ ಅಧಿಕ ಮಂದಿ ಸದಸ್ಯರನ್ನು ಒಳಗೊಂಡು ಮುಂದೆ ಸಾಗುತ್ತಿದೆ.

ಗೆಳೆತನ ಮೊದಲು, ನಂತರ ಸೇವೆ ಎನ್ನುವ ಧ್ಯೇಯವನ್ನು ಇಟ್ಟುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರ ಹೆಗ್ಗುರುತಾಗಿ ಕೆಲಸ ಮಾಡುತ್ತಿರುವ ಇನ್ನರ್ ವೀಲ್ ಪ್ರಾರಂಭವಾಗಿದ್ದೇ ರೋಚಕ. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ತಮ್ಮ ಅಸ್ಥಿತ್ವನ್ನು ಕಂಡುಕೊಳ್ಳಲು, ತಾವೂ ಸಮಾಜದ ಸೇವೆಗೆ ಸಿದ್ಧರಿದ್ದೇವೆ ಎಂದು ತೋರಿಸಿಕೊಡುವ ಮಹಾತ್ವಾಕಾಂಕ್ಷೆ ಸಂಸ್ಥೆಯದ್ದು. ಇದರ ಜೊತೆಗೆ ಮಹಿಳೆಯ ಒಬ್ಬಂಟಿಯಲ್ಲ. ಅವಳ ಕಷ್ಟ-ಸುಖ ಕೇಳಲು ಕಿವಿಗಳಿವೆ, ಜೊತೆಗೆ ಕೈ ಜೋಡಿಸಲು ಸಮಾನ ಮನಸ್ಸುಗಳಿವೆ ಎಂಬುದನ್ನು ಪ್ರಾರಂಭದಿಂದಲೂ ಇನ್ನರ್ ವೀಲ್ ಸಾಭೀತು ಮಾಡುತ್ತಾ ಬಂದಿದೆ.

ಸಂಸ್ಥೆಯ ಪ್ರಾರಂಭದ ಹಿಂದಿನ ಉದ್ದೇಶ

  1. ಅಂದಿನ ಕಾಲಕ್ಕೆ ರೋಟರಿ ಕ್ಲಬ್‌ನಲ್ಲಿ ಪುರುಷರಿಗೆ ಮಾತ್ರ ಸದಸ್ಯತ್ವ ಇತ್ತು. ಇದರ ಸೇವೆಯ ಹಿಂದೆ ಮಹಿಳೆಯ ಪಾತ್ರ ಇದ್ದರೂ ಅವರನ್ನು ಗುರುತಿಸುವ, ಪ್ರೋತ್ಸಾಹಿಸುವ ಕೆಲಸ ಆಗುತ್ತಿರಲಿಲ್ಲ.
  2. ಮಹಿಳೆಯರೇ ಸೇರಿ, ಮಹಿಳೆಯರಿಗಾಗಿಯೇ ಒಂದು ಸಂಸ್ಥೆ ಸ್ಥಾಪನೆ ಮಾಡಬೇಕು ಎನ್ನುವ ಆಲೋಚನೆ ಮಾರ್ಗರೇಟ್ ಗೊಲ್ಡಿಂಗ್ ಅವರಿಗೆ ಬಂದು, ಇನ್ನರ್ ವೀಲ್ ಸ್ಥಾಪಿಸಿದರು.
  3. ಮಹಿಳೆಯರಿಗೆ ಅವರದ್ದೇ ಆದ ಅಸ್ತಿತ್ವ ಇರಲಿಲ್ಲ. ಸಮಾನ ಮನಸ್ಕರೊಡನೆ ಸ್ನೇಹ ಸಂಪಾದಿಸಲು ಹೆಚ್ಚು ಅವಕಾಶಗಳು ಇರಲಿಲ್ಲ. ಇದಕ್ಕೆ ಇನ್ನರ್ ವೀಲ್ ವೇದಿಕೆಯಾಯಿತು.
  4. ಸಂಸ್ಥೆ ಕೇವಲ ಗೆಳೆತನ ಬೆಳೆಸುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ಗೆಳೆತನದಿಂದ ಪರಸ್ಪರರ ಸಾಮಾರ್ಥ್ಯದ ಅರಿವಾಗಬೇಕು ಮತ್ತು ಅದನ್ನು ಉಪಯೋಗಿಸಿಕೊಳ್ಳಲು ಪರಸ್ಪರರು ನೆರವಾಗುವುದು.
  5. ಸಾಮರ್ಥ್ಯಕ್ಕೆ ಅನುಗುಣವಾಗಿ, ಎಲ್ಲರ ಸಹಕಾರ ಪಡೆದು ಸಮಾಜಮುಖಿ ಕಾರ್ಯಗಳನ್ನು ಸದಸ್ಯರು ಮಾಡುವಂತೆ ಪ್ರೇರೇಪಿಸುವುದು.

ನಾನು ಮೈಸೂರಿಗೆ ಮದುವೆಯಾಗಿ ಹೊಸದಾಗಿ ಬಂದಾಗ ಯಾರೂ ಅಷ್ಟಾಗಿ ಪರಿಚಯವಿರಲಿಲ್ಲ. ಹೊರಗಡೆ ಹೊಗಲು, ಹೆಚ್ಚು ಜನರ ಜೊತೆ ಒಡನಾಟ ಬೆಳೆಸಲು ಅವಕಾಶಗಳೇ ಇರಲಿಲ್ಲ. ಹೀಗಾಗಿ ಹೊಸತನವಿಲ್ಲದೆ ಒತ್ತಡದಲ್ಲಿ ಸಿಲುಕಿದ್ದೇನೆ ಎನ್ನುವ ಭಾವನೆ ಕಾಡುತ್ತಿತ್ತು. ಆಗ ಕಂಡ ಬೆಳಕೇ ಇನ್ನರ್ ವೀಲ್. ಇಲ್ಲಿಗೆ ಸೇರಿದಾಗ ನನಗೆ ಸಾಕಷ್ಟು ಜನರ ಪರಿಚಯವಾಯಿತು. ಸಮಾಜದ ಬೇರೆ ಬೇರೆ ಸ್ಥಳಗಳಲ್ಲಿ, ಬೇರೆ ಬೇರೆ ವ್ಯಕ್ತಿತ್ವಗಳ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಹಲವಾರು ಮಹಿಳೆಯರ ಜೊತೆ ಒಡನಾಟ ಬೆಳೆಯಿತು. ಇಲ್ಲಿ ಸ್ನೇಹವನ್ನು ಮೀರಿ ನಾನು ಹಲವಾರು ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಗಳಿಸಿದೆ. ಅದರ ಮೂಲಕ ಸಮಾಜ ಸೇವೆಗೆ ತೆರೆದುಕೊಂಡೆ. ಆ ಮೂಲಕ ಬದುಕಿನ ಸಾರ್ಥಕತೆ ಕಂಡುಕೊಂಡಿದ್ದೇನೆ.-ನಂದಿನಿ ಎನ್., ಅಧ್ಯಕ್ಷರು, ಇನ್ನರ್ ವೀಲ್, ಮೈಸೂರು

ಇನ್ನರ್ ವೀಲ್‌ನಿಂದ ನಾನು ಗಳಿಸಿದ್ದು ಏನು ಎಂದರೆ ಉತ್ತಮ ಗೆಳತಿಯರು ಹಾಗೂ ನನ್ನ ಬಗ್ಗೆ ನನಗೆ ಆತ್ಮವಿಶ್ವಾಸ. ಸಮಾಜದಲ್ಲಿನ ಒಬ್ಬರಿಗೆ ನಾವು ಸಹಾಯ ಮಾಡಿದಾಗ ಅವರು ನಮಗೆ ಪ್ರೀತಿಯಿಂದ ಹರಸುವ ಪರಿೆುೀಂ ಸೋಜಿಗ. ಅದೊಂದು ಬೆಲೆ ಕಟ್ಟಲಾಗದ ಸಂಗತಿ. ನನ್ನ ಪಾಲಿಗೆ ಅದೊಂದು ದೊಡ್ಡ ಆಸ್ತಿ. ಅದನ್ನು ನಾವಿಲ್ಲಿ ನಿತ್ಯವೂ ಗಳಿಸುತ್ತಿದ್ದೇವೆ. ನಾನು ಪ್ರಾರಂಭದಲ್ಲಿ ಚಿಕ್ಕಮಗಳೂರಿಗೆ ಬಂದಾಗ ನನಗೆ ಇಲ್ಲಿ ಯಾರೂ ಪರಿಚಿತರಿರಲಿಲ್ಲ. ಆಗ ನಮ್ಮ ಅತ್ತೆಯೇ ನನ್ನನ್ನು ಇನ್ನರ್ ವೀಲ್‌ಗೆ ಸೇರಿಸಿದರು. ನನ್ನ ಅತ್ತೆಯ ಸಲಹೆಯಿಂದ ಇಂದು ಇಡೀ ಜಗತ್ತಿನಲ್ಲಿ ನನಗೆ ಗೆಳತಿಯರಿದ್ದಾರೆ ಎಂದು ಹೇಳಲು ಹೆಮ್ಮೆಪಡುತ್ತೇನೆ. -ಕವಿತಾ ನಿಯತ್, ಚೇರ್ಮನ್ ಇನ್ನರ್ ವೀಲ್, ಡಿಸ್ಟಿಕ್ 318

 

ಮನುಷ್ಯ ಸಂಘ ಜೀವಿ. ಆತ ಉಳಿಯಲು, ಬೆಳೆಯಲು, ಸಾಧನೆ ಮಾಡಲು ಒಂದು ಕಾರಣ ಬೇಕೆ ಬೇಕು. ನನ್ನ ಪ್ರಕಾರ ಆ ಕಾರಣವೇ ಗೆಳೆತನ ಮತ್ತು ಸೇವೆ. ಗೆಳೆತನ ಮತ್ತು ಸೇವೆಯಿಂದ ಉತ್ತಮವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಹೀಗಾಗಿ ನಾನು ಇನ್ನರ್ ವೀಲ್ ಗೆ ಸೇರಿದೆ. ಇಲ್ಲಿ ನಾನು ಗಳಿಸಿದ್ದು ಅಪಾರ. ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ವ್ಯಕ್ತಿಗಳಿಂದ ಪ್ರೇರೇಪಿತಳಾಗಿದ್ದೇನೆ. ನನ್ನ ಕೈಲಾದಷ್ಟು ಸೇವೆಯನ್ನು ನಾನು ಮಾಡುತ್ತಿದ್ದೇನೆ. ಸಮಾಜ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಸಮಾಜಕ್ಕೆ ನಾವು ಏನನ್ನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ಒಟ್ಟಾರೆ ನಾನು ಸಮಾನ ಮನಸ್ಕ ಸ್ನೇಹಿತರನ್ನು ಪಡೆದೆ. ಆ ಮೂಲಕ ಸಂತೋಷವನ್ನೂ ಕಂಡುಕೊಂಡೆ. – ಸೌಮ್ಯ ದಿನೇಶ್, ಕಾರ್ಯದರ್ಶಿ ಇನ್ನರ್ ವೀಲ್

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

2 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

21 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

33 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

36 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

41 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

1 hour ago