‘ಮುಂಗಾರು ಮಳೆ’ಯ ನಂತರ ಯೋಗರಾಜ ಭಟ್-ಗಣೇಶ್ ಜೋಡಿಯ ‘ಗಾಳಿಪಟ’ ಕೂಡ ಯಶಸ್ವೀ ಚಿತ್ರಗಳಲ್ಲಿ ಒಂದಾಯಿತು. ಈಗ ಆ ಜೋಡಿಯ ‘ಗಾಳಿಪಟ ೨’ ತೆರೆಗೆ ಸಿದ್ಧವಾಗಿದೆ. ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೊರೊನಾ ನಡುವೆ ವಿದೇಶಕ್ಕೆ ತೆರಳಿ ಚಿತ್ರೀಕರಿಸಿದ ಮೊದಲ ಚಿತ್ರತಂಡ ‘ಗಾಳಿಪಟ ೨’. ಭಾರತದ ಯಾವ ಭಾಷೆಯ ಚಿತ್ರತಂಡಗಳೂ ಹೊರದೇಶಗಳಿಗೆ ತೆರಳಿರಲಿಲ್ಲ. ಕಜಕಿಸ್ತಾನದಲ್ಲಂತೂ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದ ಚಿತ್ರೀಕರಣ. ಯೋಗರಾಜ ಭಟ್ ಹೇಳುತ್ತಾರೆ: ‘ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಯಾಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೇವೆ’.
ಈಗ ‘ದೇವ್ಲೇ ದೇವ್ಲೇ’ ಎಂದು ಆರಂಭವಾಗುವ ಹಾಡನ್ನು ಮೊದಲು ‘ದೇವ್ರೇ ದೇವ್ರೇ…’ ಎಂದು ಬರೆದಿದ್ದರಂತೆ ಭಟ್ಟರು. ಅದನ್ನು ನೋಡಿ ಅರ್ಜುನ್ ಜನ್ಯ, ‘ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ’ ಎಂದಾಗ, ‘ರ’ ಕಾರ ತೆಗೆದು ‘ಲ’ ಕಾರ ಹಾಕಲು ಹೇಳಿದ್ದು, ವಿಜಯ್ ಪ್ರಕಾಶ್ ಹಾಡಿದ್ದು, ಹಿಂದಿನ ಹಾಡುಗಳಂತೆ ಈ ಹಾಡು ಕೂಡ ಗೆಲ್ಲುತ್ತೆ ಎನ್ನುವ ಭರವಸೆ ಅವರದು. ನಿರ್ಮಾಪಕ ರಮೇಶ್ ರೆಡ್ಡಿ, ಕಲಾವಿದರಾದ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ಸುಧಾ ಬೆಳವಾಡಿ, ಸಂಗೀತ ಸಂಯೋಜಕ ಅರ್ಜುನ್ ಜನ್ಯ , ಗಾಯಕ ವಿಜಯ್ ಪ್ರಕಾಶ್, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ನೃತ್ಯ ಸಂಯೋಜಕಧನು, ಆನಂದ್ಆಡಿೋಂ ಶ್ಯಾಮ್ ‘ದೇವ್ಲೆ ದೇವ್ಲೆ’ ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…