‘ಮುಂಗಾರು ಮಳೆ’ಯ ನಂತರ ಯೋಗರಾಜ ಭಟ್-ಗಣೇಶ್ ಜೋಡಿಯ ‘ಗಾಳಿಪಟ’ ಕೂಡ ಯಶಸ್ವೀ ಚಿತ್ರಗಳಲ್ಲಿ ಒಂದಾಯಿತು. ಈಗ ಆ ಜೋಡಿಯ ‘ಗಾಳಿಪಟ ೨’ ತೆರೆಗೆ ಸಿದ್ಧವಾಗಿದೆ. ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೊರೊನಾ ನಡುವೆ ವಿದೇಶಕ್ಕೆ ತೆರಳಿ ಚಿತ್ರೀಕರಿಸಿದ ಮೊದಲ ಚಿತ್ರತಂಡ ‘ಗಾಳಿಪಟ ೨’. ಭಾರತದ ಯಾವ ಭಾಷೆಯ ಚಿತ್ರತಂಡಗಳೂ ಹೊರದೇಶಗಳಿಗೆ ತೆರಳಿರಲಿಲ್ಲ. ಕಜಕಿಸ್ತಾನದಲ್ಲಂತೂ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದ ಚಿತ್ರೀಕರಣ. ಯೋಗರಾಜ ಭಟ್ ಹೇಳುತ್ತಾರೆ: ‘ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಯಾಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೇವೆ’.
ಈಗ ‘ದೇವ್ಲೇ ದೇವ್ಲೇ’ ಎಂದು ಆರಂಭವಾಗುವ ಹಾಡನ್ನು ಮೊದಲು ‘ದೇವ್ರೇ ದೇವ್ರೇ…’ ಎಂದು ಬರೆದಿದ್ದರಂತೆ ಭಟ್ಟರು. ಅದನ್ನು ನೋಡಿ ಅರ್ಜುನ್ ಜನ್ಯ, ‘ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ’ ಎಂದಾಗ, ‘ರ’ ಕಾರ ತೆಗೆದು ‘ಲ’ ಕಾರ ಹಾಕಲು ಹೇಳಿದ್ದು, ವಿಜಯ್ ಪ್ರಕಾಶ್ ಹಾಡಿದ್ದು, ಹಿಂದಿನ ಹಾಡುಗಳಂತೆ ಈ ಹಾಡು ಕೂಡ ಗೆಲ್ಲುತ್ತೆ ಎನ್ನುವ ಭರವಸೆ ಅವರದು. ನಿರ್ಮಾಪಕ ರಮೇಶ್ ರೆಡ್ಡಿ, ಕಲಾವಿದರಾದ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ಸುಧಾ ಬೆಳವಾಡಿ, ಸಂಗೀತ ಸಂಯೋಜಕ ಅರ್ಜುನ್ ಜನ್ಯ , ಗಾಯಕ ವಿಜಯ್ ಪ್ರಕಾಶ್, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ನೃತ್ಯ ಸಂಯೋಜಕಧನು, ಆನಂದ್ಆಡಿೋಂ ಶ್ಯಾಮ್ ‘ದೇವ್ಲೆ ದೇವ್ಲೆ’ ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…