ಆಂದೋಲನ ಪುರವಣಿ

ಸಿನಿಮಾಲ್‌ : ಕೊರೊನಾ ನಡುವೆ ಕಜಕಿಸ್ತಾನದಲ್ಲಿ ಚಿತ್ರಿಸಿದ ‘ಗಾಳಿಪಟ 2’

‘ಮುಂಗಾರು ಮಳೆ’ಯ ನಂತರ ಯೋಗರಾಜ ಭಟ್-ಗಣೇಶ್ ಜೋಡಿಯ ‘ಗಾಳಿಪಟ’ ಕೂಡ ಯಶಸ್ವೀ ಚಿತ್ರಗಳಲ್ಲಿ ಒಂದಾಯಿತು. ಈಗ ಆ ಜೋಡಿಯ ‘ಗಾಳಿಪಟ ೨’ ತೆರೆಗೆ ಸಿದ್ಧವಾಗಿದೆ. ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೊರೊನಾ ನಡುವೆ ವಿದೇಶಕ್ಕೆ ತೆರಳಿ ಚಿತ್ರೀಕರಿಸಿದ ಮೊದಲ ಚಿತ್ರತಂಡ ‘ಗಾಳಿಪಟ ೨’. ಭಾರತದ ಯಾವ ಭಾಷೆಯ ಚಿತ್ರತಂಡಗಳೂ ಹೊರದೇಶಗಳಿಗೆ ತೆರಳಿರಲಿಲ್ಲ. ಕಜಕಿಸ್ತಾನದಲ್ಲಂತೂ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದ ಚಿತ್ರೀಕರಣ. ಯೋಗರಾಜ ಭಟ್ ಹೇಳುತ್ತಾರೆ: ‘ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಯಾಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೇವೆ’.

ಈಗ ‘ದೇವ್ಲೇ ದೇವ್ಲೇ’ ಎಂದು ಆರಂಭವಾಗುವ ಹಾಡನ್ನು ಮೊದಲು ‘ದೇವ್ರೇ ದೇವ್ರೇ…’ ಎಂದು ಬರೆದಿದ್ದರಂತೆ ಭಟ್ಟರು. ಅದನ್ನು ನೋಡಿ ಅರ್ಜುನ್ ಜನ್ಯ, ‘ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ’ ಎಂದಾಗ, ‘ರ’ ಕಾರ ತೆಗೆದು ‘ಲ’ ಕಾರ ಹಾಕಲು ಹೇಳಿದ್ದು, ವಿಜಯ್ ಪ್ರಕಾಶ್ ಹಾಡಿದ್ದು, ಹಿಂದಿನ ಹಾಡುಗಳಂತೆ ಈ ಹಾಡು ಕೂಡ ಗೆಲ್ಲುತ್ತೆ ಎನ್ನುವ ಭರವಸೆ ಅವರದು. ನಿರ್ಮಾಪಕ ರಮೇಶ್ ರೆಡ್ಡಿ, ಕಲಾವಿದರಾದ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ಸುಧಾ ಬೆಳವಾಡಿ, ಸಂಗೀತ ಸಂಯೋಜಕ ಅರ್ಜುನ್ ಜನ್ಯ , ಗಾಯಕ ವಿಜಯ್ ಪ್ರಕಾಶ್, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ನೃತ್ಯ ಸಂಯೋಜಕಧನು, ಆನಂದ್‌ಆಡಿೋಂ ಶ್ಯಾಮ್ ‘ದೇವ್ಲೆ ದೇವ್ಲೆ’ ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

andolana

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

12 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

13 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

14 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

14 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

15 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

16 hours ago