ಭತ್ತ ಕಟಾವು ಮಾಡುವ ಸಮಯ ಬಂದಿದೆ. ಸರ್ಕಾರ ಈಗಲೇ ಭತ್ತ ಖರೀದಿ ಕೇಂದ್ರ ಆರಂಭ ಮಾಡಿ ಖರೀದಿ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಆದರೆ ಸರ್ಕಾರ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್ಎಫ್ಸಿ)ಯಿಂದ ಭತ್ತ ಖರೀದಿಗೆ ಮುಂದಾಗಿದೆ. ಆದರೆ ಈ ಕ್ರಮಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದ್ದು, ಬೆಂಬಲ ಬೆಲೆ ಹೆಚ್ಚಳಕ್ಕೂ ಬೇಡಿಕೆ ಎದ್ದಿದೆ. ಈ ಬಗ್ಗೆ ಸಮಗ್ರವಾಗಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದ್ದಾರೆ.
ಈಗಾಗಲೇ ಭತ್ತದ ಕೊಯ್ಲು ಆರಂಭವಾಗಿದೆ. ಇಷ್ಟೊತ್ತಿಗೆ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿಗೆ ಮುಂದಾಗಬೇಕಿತ್ತು. ಆದರೆ ಅದಿನ್ನೂ ಆಗಿಲ್ಲ. ಹಿಂದೆಲ್ಲಾ ಜನವರಿ, ಫೆಬ್ರವರಿ ವೇಳೆಗೆ ಖರೀದಿ ಕೇಂದ್ರಗಳು ಆರಂಭವಾಗುತ್ತಿದ್ದವು. ಈಗ ನಮ್ಮ ಹೋರಾಟ, ಒತ್ತಾಯದ ಅಂಗವಾಗಿ ಡಿಸೆಂಬರ್ ಆರಂಭದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ. ಪ್ರಸ್ತುತ ಕ್ವಿಂಟಾಲ್ ಭತ್ತಕ್ಕೆ ೨೦೪೦, ೨೦೬೦ ರೂ. ಎಂಎಸ್ಬಿ ಬೆಲೆ ನಿಗದಿ ಮಾಡಲಾಗಿದ್ದು, ಇದರ ಹೆಚ್ಚಳಕ್ಕೂ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಹೇಳುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಖರೀದಿ ಕೇಂದ್ರಗಳು ನಿರಂತರವಾಗಿ ಇರಬೇಕು ಎಂದು ಒತ್ತಾಯಿಸಿದ್ದಾರೆ.
ವಿಳಂಬದಿಂದ ರೈತರಿಗೆ ನಷ್ಟ
ಕಣದಿಂದ ನೇರವಾಗಿ ಭತ್ತ ಖರೀದಿ ಕೇಂದ್ರಕ್ಕೆ ಹೋಗಿ ಮಾರಾಟವಾದರೆ ಅದರಿಂದ ರೈತನಿಗೆ ಒಂದಷ್ಟು ಲಾಭ ಸಿಕ್ಕುತ್ತದೆ. ಆದರೆ ಖರೀದಿ ಕೇಂದ್ರ ತೆರೆಯುವುದು ತಡವಾದರೆ ರೈತರು ಬೇರೆ ದಾರಿ ಇಲ್ಲದೇ ಭತ್ತವನ್ನು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಇಲ್ಲಿ ಎಂಎಸ್ಬಿ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳು ಕೊಂಡುಕೊಳ್ಳುತ್ತಾರೆ. ಸಹಜವಾಗಿಯೇ ರೈತನಿಗೆ ಇದು ನಷ್ಟವನ್ನು ತರುತ್ತದೆ. ಇದರ ಜೊತೆಗೆ ಒಬ್ಬ ರೈತನಿಂದ ಇಂತಿಷ್ಟು ಪ್ರಮಾಣದ ಭತ್ತ ಖರೀದಿ ಮಾಡಬೇಕು ಎನ್ನುವ ನಿಯಮ ಬಿಟ್ಟು ಹೆಚ್ಚಿನ ಭತ್ತ ಖರೀದಿಗೆ ಸರ್ಕಾರ ಮುಂದಾಗಬೇಕು ಎಂಬುದು ನಾಗೇಂದ್ರ ಅವರ ಒತ್ತಾಯ.
ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಿ
ರಾಜ್ಯದಲ್ಲಿ ೧.೩೮ ಕೋಟಿ ಜನತೆಗೆ ಪಡಿತರ ವ್ಯವಸ್ಥೆ ಇದೆ. ಇದರಲ್ಲಿ ಅಕ್ಕಿ, ರಾಗಿ, ಗೋಧಿ, ಎಣ್ಣೆ, ಕಾಳುಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಬದಲಾಗಿ ನಮ್ಮಲ್ಲಿ ಬೆಳೆದ ಭತ್ತವನ್ನೇ ಖರೀದಿ ಮಾಡಿ ಪಡಿತರ ವ್ಯವಸ್ಥೆಗೆ ಬಳಕೆ ಮಾಡಿಕೊಂಡರೆ ರೈತರಿಗೆ ಅನುಕೂಲ ಆಗುತ್ತದೆ. ಇದನ್ನೇ ಹನುಮನಗೌಡ ಬಾದರಲಿ ಅವರನ್ನೊಳಗೊಂಡ ಸಮಿತಿ ಕೊಟ್ಟ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಡಾ. ಪ್ರಕಾಶ್ ಕಮ್ಮರಡಿ ಅವರೂ ಹೇಳಿದ್ದಾರೆ.
ಈಗ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ಭತ್ತ ಖರೀದಿ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದ ರೈತರು ತಾವು ಬೆಳೆದ ಭತ್ತ ಮಾರಲು ವಾರಗಟ್ಟಲೆ ಕ್ಯೂ ನಿಲ್ಲಬೇಕಾಗುತ್ತದೆ. ಸಾಗಣೆ ವೆಚ್ಚವೂ ಹೆಚ್ಚುತ್ತದೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚುತ್ತದೆ. ಹೀಗಾಗಿ ಸರ್ಕಾರ ಹಿಂದಿನ ಪದ್ಧತಿಯಂತೆ ಸ್ಥಳೀಯ ಗಿರಣಿಗಳ ಮೂಲಕ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಮಾಡಬೇಕು ಎನ್ನುವುದು ನಾಗೇಂದ್ರ ಒತ್ತಾಯ.
ಎಲ್ಲ ರೈತರೂ ಒಂದೇ
ಸರ್ಕಾರ ದ.ಕನ್ನಡ, ಉ.ಕನ್ನಡ, ಉಡುಪಿ ಜಿಲ್ಲೆಗಳ ಕುಚಲಕ್ಕಿಗೆ ೫೦೦ ರೂ. ಸಹಾಯಧನ ಕೊಡುತ್ತಿದೆ. ಈ ತಾರತಮ್ಯ ಸರಿಯಲ್ಲ. ಎಲ್ಲ ರೈತರೂ ಒಂದೇ ಆಗಿದ್ದು, ಈ ಸಹಾಯಧನವನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಬೇಕು. ರಸಗೊಬ್ಬರ, ಸಾಗಣೆ ವೆಚ್ಚ, ಕಟಾವು ಖರ್ಚು ಹೆಚ್ಚಾಗುತ್ತಿದೆ. ಇದರಿಂದ ಸ್ವಾಮಿನಾಥ್ ವರದಿ ಪ್ರಕಾರ ಕ್ವಿಂಟಾಲ್ ಭತ್ತಕ್ಕೆ ೩,೫೦೦ ರೂ. ಕ್ವಿಂಟಾಲ್ ಭತ್ತಕ್ಕೆ ಕೊಡಬೇಕು ಎಂಬುದು ರೈತರ ಆಗ್ರಹ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…