ಆಂದೋಲನ ಪುರವಣಿ

ಈಗಲೇ ಭತ್ತ ಖರೀದಿಗೆ ಮುಂದಾಗಿ

ಸರ್ಕಾರಕ್ಕೆ ರೈತ ಸಂಘಗಳ ಆಗ್ರಹ; ವಿಳಂಬವಾದರೆ ನಷ್ಟದ ಸುಳಿಗೆ ಸಿಲುಕುವ ರೈತ

ಭತ್ತ ಕಟಾವು ಮಾಡುವ ಸಮಯ ಬಂದಿದೆ. ಸರ್ಕಾರ ಈಗಲೇ ಭತ್ತ ಖರೀದಿ ಕೇಂದ್ರ ಆರಂಭ ಮಾಡಿ ಖರೀದಿ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಆದರೆ ಸರ್ಕಾರ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‌ಎಫ್‌ಸಿ)ಯಿಂದ ಭತ್ತ ಖರೀದಿಗೆ ಮುಂದಾಗಿದೆ. ಆದರೆ ಈ ಕ್ರಮಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದ್ದು, ಬೆಂಬಲ ಬೆಲೆ ಹೆಚ್ಚಳಕ್ಕೂ ಬೇಡಿಕೆ ಎದ್ದಿದೆ. ಈ ಬಗ್ಗೆ ಸಮಗ್ರವಾಗಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದ್ದಾರೆ.

ಈಗಾಗಲೇ ಭತ್ತದ ಕೊಯ್ಲು ಆರಂಭವಾಗಿದೆ. ಇಷ್ಟೊತ್ತಿಗೆ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿಗೆ ಮುಂದಾಗಬೇಕಿತ್ತು. ಆದರೆ ಅದಿನ್ನೂ ಆಗಿಲ್ಲ. ಹಿಂದೆಲ್ಲಾ ಜನವರಿ, ಫೆಬ್ರವರಿ ವೇಳೆಗೆ ಖರೀದಿ ಕೇಂದ್ರಗಳು ಆರಂಭವಾಗುತ್ತಿದ್ದವು. ಈಗ ನಮ್ಮ ಹೋರಾಟ, ಒತ್ತಾಯದ ಅಂಗವಾಗಿ ಡಿಸೆಂಬರ್ ಆರಂಭದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ. ಪ್ರಸ್ತುತ ಕ್ವಿಂಟಾಲ್ ಭತ್ತಕ್ಕೆ ೨೦೪೦, ೨೦೬೦ ರೂ. ಎಂಎಸ್‌ಬಿ ಬೆಲೆ ನಿಗದಿ ಮಾಡಲಾಗಿದ್ದು, ಇದರ ಹೆಚ್ಚಳಕ್ಕೂ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಹೇಳುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಖರೀದಿ ಕೇಂದ್ರಗಳು ನಿರಂತರವಾಗಿ ಇರಬೇಕು ಎಂದು ಒತ್ತಾಯಿಸಿದ್ದಾರೆ.

ವಿಳಂಬದಿಂದ ರೈತರಿಗೆ ನಷ್ಟ

ಕಣದಿಂದ ನೇರವಾಗಿ ಭತ್ತ ಖರೀದಿ ಕೇಂದ್ರಕ್ಕೆ ಹೋಗಿ ಮಾರಾಟವಾದರೆ ಅದರಿಂದ ರೈತನಿಗೆ ಒಂದಷ್ಟು ಲಾಭ ಸಿಕ್ಕುತ್ತದೆ. ಆದರೆ ಖರೀದಿ ಕೇಂದ್ರ ತೆರೆಯುವುದು ತಡವಾದರೆ ರೈತರು ಬೇರೆ ದಾರಿ ಇಲ್ಲದೇ ಭತ್ತವನ್ನು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಇಲ್ಲಿ ಎಂಎಸ್‌ಬಿ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳು ಕೊಂಡುಕೊಳ್ಳುತ್ತಾರೆ. ಸಹಜವಾಗಿಯೇ ರೈತನಿಗೆ ಇದು ನಷ್ಟವನ್ನು ತರುತ್ತದೆ. ಇದರ ಜೊತೆಗೆ ಒಬ್ಬ ರೈತನಿಂದ ಇಂತಿಷ್ಟು ಪ್ರಮಾಣದ ಭತ್ತ ಖರೀದಿ ಮಾಡಬೇಕು ಎನ್ನುವ ನಿಯಮ ಬಿಟ್ಟು ಹೆಚ್ಚಿನ ಭತ್ತ ಖರೀದಿಗೆ ಸರ್ಕಾರ ಮುಂದಾಗಬೇಕು ಎಂಬುದು ನಾಗೇಂದ್ರ ಅವರ ಒತ್ತಾಯ.

ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಿ

ರಾಜ್ಯದಲ್ಲಿ ೧.೩೮ ಕೋಟಿ ಜನತೆಗೆ ಪಡಿತರ ವ್ಯವಸ್ಥೆ ಇದೆ. ಇದರಲ್ಲಿ ಅಕ್ಕಿ, ರಾಗಿ, ಗೋಧಿ, ಎಣ್ಣೆ, ಕಾಳುಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಬದಲಾಗಿ ನಮ್ಮಲ್ಲಿ ಬೆಳೆದ ಭತ್ತವನ್ನೇ ಖರೀದಿ ಮಾಡಿ ಪಡಿತರ ವ್ಯವಸ್ಥೆಗೆ ಬಳಕೆ ಮಾಡಿಕೊಂಡರೆ ರೈತರಿಗೆ ಅನುಕೂಲ ಆಗುತ್ತದೆ. ಇದನ್ನೇ ಹನುಮನಗೌಡ ಬಾದರಲಿ ಅವರನ್ನೊಳಗೊಂಡ ಸಮಿತಿ ಕೊಟ್ಟ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಡಾ. ಪ್ರಕಾಶ್ ಕಮ್ಮರಡಿ ಅವರೂ ಹೇಳಿದ್ದಾರೆ.

ಈಗ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ಭತ್ತ ಖರೀದಿ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದ ರೈತರು ತಾವು ಬೆಳೆದ ಭತ್ತ ಮಾರಲು ವಾರಗಟ್ಟಲೆ ಕ್ಯೂ ನಿಲ್ಲಬೇಕಾಗುತ್ತದೆ. ಸಾಗಣೆ ವೆಚ್ಚವೂ ಹೆಚ್ಚುತ್ತದೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚುತ್ತದೆ. ಹೀಗಾಗಿ ಸರ್ಕಾರ ಹಿಂದಿನ ಪದ್ಧತಿಯಂತೆ ಸ್ಥಳೀಯ ಗಿರಣಿಗಳ ಮೂಲಕ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಮಾಡಬೇಕು ಎನ್ನುವುದು ನಾಗೇಂದ್ರ ಒತ್ತಾಯ.

ಎಲ್ಲ ರೈತರೂ ಒಂದೇ

ಸರ್ಕಾರ ದ.ಕನ್ನಡ, ಉ.ಕನ್ನಡ, ಉಡುಪಿ ಜಿಲ್ಲೆಗಳ ಕುಚಲಕ್ಕಿಗೆ ೫೦೦ ರೂ. ಸಹಾಯಧನ ಕೊಡುತ್ತಿದೆ. ಈ ತಾರತಮ್ಯ ಸರಿಯಲ್ಲ. ಎಲ್ಲ ರೈತರೂ ಒಂದೇ ಆಗಿದ್ದು, ಈ ಸಹಾಯಧನವನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಬೇಕು. ರಸಗೊಬ್ಬರ, ಸಾಗಣೆ ವೆಚ್ಚ, ಕಟಾವು ಖರ್ಚು ಹೆಚ್ಚಾಗುತ್ತಿದೆ. ಇದರಿಂದ ಸ್ವಾಮಿನಾಥ್ ವರದಿ ಪ್ರಕಾರ ಕ್ವಿಂಟಾಲ್ ಭತ್ತಕ್ಕೆ ೩,೫೦೦ ರೂ. ಕ್ವಿಂಟಾಲ್ ಭತ್ತಕ್ಕೆ ಕೊಡಬೇಕು ಎಂಬುದು ರೈತರ ಆಗ್ರಹ.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

58 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago