ಆಂದೋಲನ ಪುರವಣಿ

ಈಗಲೇ ಭತ್ತ ಖರೀದಿಗೆ ಮುಂದಾಗಿ

ಸರ್ಕಾರಕ್ಕೆ ರೈತ ಸಂಘಗಳ ಆಗ್ರಹ; ವಿಳಂಬವಾದರೆ ನಷ್ಟದ ಸುಳಿಗೆ ಸಿಲುಕುವ ರೈತ

ಭತ್ತ ಕಟಾವು ಮಾಡುವ ಸಮಯ ಬಂದಿದೆ. ಸರ್ಕಾರ ಈಗಲೇ ಭತ್ತ ಖರೀದಿ ಕೇಂದ್ರ ಆರಂಭ ಮಾಡಿ ಖರೀದಿ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಆದರೆ ಸರ್ಕಾರ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‌ಎಫ್‌ಸಿ)ಯಿಂದ ಭತ್ತ ಖರೀದಿಗೆ ಮುಂದಾಗಿದೆ. ಆದರೆ ಈ ಕ್ರಮಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದ್ದು, ಬೆಂಬಲ ಬೆಲೆ ಹೆಚ್ಚಳಕ್ಕೂ ಬೇಡಿಕೆ ಎದ್ದಿದೆ. ಈ ಬಗ್ಗೆ ಸಮಗ್ರವಾಗಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದ್ದಾರೆ.

ಈಗಾಗಲೇ ಭತ್ತದ ಕೊಯ್ಲು ಆರಂಭವಾಗಿದೆ. ಇಷ್ಟೊತ್ತಿಗೆ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿಗೆ ಮುಂದಾಗಬೇಕಿತ್ತು. ಆದರೆ ಅದಿನ್ನೂ ಆಗಿಲ್ಲ. ಹಿಂದೆಲ್ಲಾ ಜನವರಿ, ಫೆಬ್ರವರಿ ವೇಳೆಗೆ ಖರೀದಿ ಕೇಂದ್ರಗಳು ಆರಂಭವಾಗುತ್ತಿದ್ದವು. ಈಗ ನಮ್ಮ ಹೋರಾಟ, ಒತ್ತಾಯದ ಅಂಗವಾಗಿ ಡಿಸೆಂಬರ್ ಆರಂಭದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ. ಪ್ರಸ್ತುತ ಕ್ವಿಂಟಾಲ್ ಭತ್ತಕ್ಕೆ ೨೦೪೦, ೨೦೬೦ ರೂ. ಎಂಎಸ್‌ಬಿ ಬೆಲೆ ನಿಗದಿ ಮಾಡಲಾಗಿದ್ದು, ಇದರ ಹೆಚ್ಚಳಕ್ಕೂ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಹೇಳುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಖರೀದಿ ಕೇಂದ್ರಗಳು ನಿರಂತರವಾಗಿ ಇರಬೇಕು ಎಂದು ಒತ್ತಾಯಿಸಿದ್ದಾರೆ.

ವಿಳಂಬದಿಂದ ರೈತರಿಗೆ ನಷ್ಟ

ಕಣದಿಂದ ನೇರವಾಗಿ ಭತ್ತ ಖರೀದಿ ಕೇಂದ್ರಕ್ಕೆ ಹೋಗಿ ಮಾರಾಟವಾದರೆ ಅದರಿಂದ ರೈತನಿಗೆ ಒಂದಷ್ಟು ಲಾಭ ಸಿಕ್ಕುತ್ತದೆ. ಆದರೆ ಖರೀದಿ ಕೇಂದ್ರ ತೆರೆಯುವುದು ತಡವಾದರೆ ರೈತರು ಬೇರೆ ದಾರಿ ಇಲ್ಲದೇ ಭತ್ತವನ್ನು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಇಲ್ಲಿ ಎಂಎಸ್‌ಬಿ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳು ಕೊಂಡುಕೊಳ್ಳುತ್ತಾರೆ. ಸಹಜವಾಗಿಯೇ ರೈತನಿಗೆ ಇದು ನಷ್ಟವನ್ನು ತರುತ್ತದೆ. ಇದರ ಜೊತೆಗೆ ಒಬ್ಬ ರೈತನಿಂದ ಇಂತಿಷ್ಟು ಪ್ರಮಾಣದ ಭತ್ತ ಖರೀದಿ ಮಾಡಬೇಕು ಎನ್ನುವ ನಿಯಮ ಬಿಟ್ಟು ಹೆಚ್ಚಿನ ಭತ್ತ ಖರೀದಿಗೆ ಸರ್ಕಾರ ಮುಂದಾಗಬೇಕು ಎಂಬುದು ನಾಗೇಂದ್ರ ಅವರ ಒತ್ತಾಯ.

ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಿ

ರಾಜ್ಯದಲ್ಲಿ ೧.೩೮ ಕೋಟಿ ಜನತೆಗೆ ಪಡಿತರ ವ್ಯವಸ್ಥೆ ಇದೆ. ಇದರಲ್ಲಿ ಅಕ್ಕಿ, ರಾಗಿ, ಗೋಧಿ, ಎಣ್ಣೆ, ಕಾಳುಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಬದಲಾಗಿ ನಮ್ಮಲ್ಲಿ ಬೆಳೆದ ಭತ್ತವನ್ನೇ ಖರೀದಿ ಮಾಡಿ ಪಡಿತರ ವ್ಯವಸ್ಥೆಗೆ ಬಳಕೆ ಮಾಡಿಕೊಂಡರೆ ರೈತರಿಗೆ ಅನುಕೂಲ ಆಗುತ್ತದೆ. ಇದನ್ನೇ ಹನುಮನಗೌಡ ಬಾದರಲಿ ಅವರನ್ನೊಳಗೊಂಡ ಸಮಿತಿ ಕೊಟ್ಟ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಡಾ. ಪ್ರಕಾಶ್ ಕಮ್ಮರಡಿ ಅವರೂ ಹೇಳಿದ್ದಾರೆ.

ಈಗ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ಭತ್ತ ಖರೀದಿ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದ ರೈತರು ತಾವು ಬೆಳೆದ ಭತ್ತ ಮಾರಲು ವಾರಗಟ್ಟಲೆ ಕ್ಯೂ ನಿಲ್ಲಬೇಕಾಗುತ್ತದೆ. ಸಾಗಣೆ ವೆಚ್ಚವೂ ಹೆಚ್ಚುತ್ತದೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚುತ್ತದೆ. ಹೀಗಾಗಿ ಸರ್ಕಾರ ಹಿಂದಿನ ಪದ್ಧತಿಯಂತೆ ಸ್ಥಳೀಯ ಗಿರಣಿಗಳ ಮೂಲಕ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಮಾಡಬೇಕು ಎನ್ನುವುದು ನಾಗೇಂದ್ರ ಒತ್ತಾಯ.

ಎಲ್ಲ ರೈತರೂ ಒಂದೇ

ಸರ್ಕಾರ ದ.ಕನ್ನಡ, ಉ.ಕನ್ನಡ, ಉಡುಪಿ ಜಿಲ್ಲೆಗಳ ಕುಚಲಕ್ಕಿಗೆ ೫೦೦ ರೂ. ಸಹಾಯಧನ ಕೊಡುತ್ತಿದೆ. ಈ ತಾರತಮ್ಯ ಸರಿಯಲ್ಲ. ಎಲ್ಲ ರೈತರೂ ಒಂದೇ ಆಗಿದ್ದು, ಈ ಸಹಾಯಧನವನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಬೇಕು. ರಸಗೊಬ್ಬರ, ಸಾಗಣೆ ವೆಚ್ಚ, ಕಟಾವು ಖರ್ಚು ಹೆಚ್ಚಾಗುತ್ತಿದೆ. ಇದರಿಂದ ಸ್ವಾಮಿನಾಥ್ ವರದಿ ಪ್ರಕಾರ ಕ್ವಿಂಟಾಲ್ ಭತ್ತಕ್ಕೆ ೩,೫೦೦ ರೂ. ಕ್ವಿಂಟಾಲ್ ಭತ್ತಕ್ಕೆ ಕೊಡಬೇಕು ಎಂಬುದು ರೈತರ ಆಗ್ರಹ.

andolana

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

48 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

1 hour ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

1 hour ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

2 hours ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

2 hours ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

2 hours ago