ಆಂದೋಲನ ಪುರವಣಿ

ಈಗಲೇ ಭತ್ತ ಖರೀದಿಗೆ ಮುಂದಾಗಿ

ಸರ್ಕಾರಕ್ಕೆ ರೈತ ಸಂಘಗಳ ಆಗ್ರಹ; ವಿಳಂಬವಾದರೆ ನಷ್ಟದ ಸುಳಿಗೆ ಸಿಲುಕುವ ರೈತ

ಭತ್ತ ಕಟಾವು ಮಾಡುವ ಸಮಯ ಬಂದಿದೆ. ಸರ್ಕಾರ ಈಗಲೇ ಭತ್ತ ಖರೀದಿ ಕೇಂದ್ರ ಆರಂಭ ಮಾಡಿ ಖರೀದಿ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಆದರೆ ಸರ್ಕಾರ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‌ಎಫ್‌ಸಿ)ಯಿಂದ ಭತ್ತ ಖರೀದಿಗೆ ಮುಂದಾಗಿದೆ. ಆದರೆ ಈ ಕ್ರಮಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದ್ದು, ಬೆಂಬಲ ಬೆಲೆ ಹೆಚ್ಚಳಕ್ಕೂ ಬೇಡಿಕೆ ಎದ್ದಿದೆ. ಈ ಬಗ್ಗೆ ಸಮಗ್ರವಾಗಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದ್ದಾರೆ.

ಈಗಾಗಲೇ ಭತ್ತದ ಕೊಯ್ಲು ಆರಂಭವಾಗಿದೆ. ಇಷ್ಟೊತ್ತಿಗೆ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿಗೆ ಮುಂದಾಗಬೇಕಿತ್ತು. ಆದರೆ ಅದಿನ್ನೂ ಆಗಿಲ್ಲ. ಹಿಂದೆಲ್ಲಾ ಜನವರಿ, ಫೆಬ್ರವರಿ ವೇಳೆಗೆ ಖರೀದಿ ಕೇಂದ್ರಗಳು ಆರಂಭವಾಗುತ್ತಿದ್ದವು. ಈಗ ನಮ್ಮ ಹೋರಾಟ, ಒತ್ತಾಯದ ಅಂಗವಾಗಿ ಡಿಸೆಂಬರ್ ಆರಂಭದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಮುಂದಾಗಿದೆ. ಪ್ರಸ್ತುತ ಕ್ವಿಂಟಾಲ್ ಭತ್ತಕ್ಕೆ ೨೦೪೦, ೨೦೬೦ ರೂ. ಎಂಎಸ್‌ಬಿ ಬೆಲೆ ನಿಗದಿ ಮಾಡಲಾಗಿದ್ದು, ಇದರ ಹೆಚ್ಚಳಕ್ಕೂ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಹೇಳುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಖರೀದಿ ಕೇಂದ್ರಗಳು ನಿರಂತರವಾಗಿ ಇರಬೇಕು ಎಂದು ಒತ್ತಾಯಿಸಿದ್ದಾರೆ.

ವಿಳಂಬದಿಂದ ರೈತರಿಗೆ ನಷ್ಟ

ಕಣದಿಂದ ನೇರವಾಗಿ ಭತ್ತ ಖರೀದಿ ಕೇಂದ್ರಕ್ಕೆ ಹೋಗಿ ಮಾರಾಟವಾದರೆ ಅದರಿಂದ ರೈತನಿಗೆ ಒಂದಷ್ಟು ಲಾಭ ಸಿಕ್ಕುತ್ತದೆ. ಆದರೆ ಖರೀದಿ ಕೇಂದ್ರ ತೆರೆಯುವುದು ತಡವಾದರೆ ರೈತರು ಬೇರೆ ದಾರಿ ಇಲ್ಲದೇ ಭತ್ತವನ್ನು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಇಲ್ಲಿ ಎಂಎಸ್‌ಬಿ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳು ಕೊಂಡುಕೊಳ್ಳುತ್ತಾರೆ. ಸಹಜವಾಗಿಯೇ ರೈತನಿಗೆ ಇದು ನಷ್ಟವನ್ನು ತರುತ್ತದೆ. ಇದರ ಜೊತೆಗೆ ಒಬ್ಬ ರೈತನಿಂದ ಇಂತಿಷ್ಟು ಪ್ರಮಾಣದ ಭತ್ತ ಖರೀದಿ ಮಾಡಬೇಕು ಎನ್ನುವ ನಿಯಮ ಬಿಟ್ಟು ಹೆಚ್ಚಿನ ಭತ್ತ ಖರೀದಿಗೆ ಸರ್ಕಾರ ಮುಂದಾಗಬೇಕು ಎಂಬುದು ನಾಗೇಂದ್ರ ಅವರ ಒತ್ತಾಯ.

ಪಡಿತರ ವ್ಯವಸ್ಥೆಗೆ ಬಳಸಿಕೊಳ್ಳಿ

ರಾಜ್ಯದಲ್ಲಿ ೧.೩೮ ಕೋಟಿ ಜನತೆಗೆ ಪಡಿತರ ವ್ಯವಸ್ಥೆ ಇದೆ. ಇದರಲ್ಲಿ ಅಕ್ಕಿ, ರಾಗಿ, ಗೋಧಿ, ಎಣ್ಣೆ, ಕಾಳುಗಳನ್ನು ವಿತರಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಬದಲಾಗಿ ನಮ್ಮಲ್ಲಿ ಬೆಳೆದ ಭತ್ತವನ್ನೇ ಖರೀದಿ ಮಾಡಿ ಪಡಿತರ ವ್ಯವಸ್ಥೆಗೆ ಬಳಕೆ ಮಾಡಿಕೊಂಡರೆ ರೈತರಿಗೆ ಅನುಕೂಲ ಆಗುತ್ತದೆ. ಇದನ್ನೇ ಹನುಮನಗೌಡ ಬಾದರಲಿ ಅವರನ್ನೊಳಗೊಂಡ ಸಮಿತಿ ಕೊಟ್ಟ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿದ್ದ ಡಾ. ಪ್ರಕಾಶ್ ಕಮ್ಮರಡಿ ಅವರೂ ಹೇಳಿದ್ದಾರೆ.

ಈಗ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ಭತ್ತ ಖರೀದಿ ಮಾಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದ ರೈತರು ತಾವು ಬೆಳೆದ ಭತ್ತ ಮಾರಲು ವಾರಗಟ್ಟಲೆ ಕ್ಯೂ ನಿಲ್ಲಬೇಕಾಗುತ್ತದೆ. ಸಾಗಣೆ ವೆಚ್ಚವೂ ಹೆಚ್ಚುತ್ತದೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚುತ್ತದೆ. ಹೀಗಾಗಿ ಸರ್ಕಾರ ಹಿಂದಿನ ಪದ್ಧತಿಯಂತೆ ಸ್ಥಳೀಯ ಗಿರಣಿಗಳ ಮೂಲಕ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಮಾಡಬೇಕು ಎನ್ನುವುದು ನಾಗೇಂದ್ರ ಒತ್ತಾಯ.

ಎಲ್ಲ ರೈತರೂ ಒಂದೇ

ಸರ್ಕಾರ ದ.ಕನ್ನಡ, ಉ.ಕನ್ನಡ, ಉಡುಪಿ ಜಿಲ್ಲೆಗಳ ಕುಚಲಕ್ಕಿಗೆ ೫೦೦ ರೂ. ಸಹಾಯಧನ ಕೊಡುತ್ತಿದೆ. ಈ ತಾರತಮ್ಯ ಸರಿಯಲ್ಲ. ಎಲ್ಲ ರೈತರೂ ಒಂದೇ ಆಗಿದ್ದು, ಈ ಸಹಾಯಧನವನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಬೇಕು. ರಸಗೊಬ್ಬರ, ಸಾಗಣೆ ವೆಚ್ಚ, ಕಟಾವು ಖರ್ಚು ಹೆಚ್ಚಾಗುತ್ತಿದೆ. ಇದರಿಂದ ಸ್ವಾಮಿನಾಥ್ ವರದಿ ಪ್ರಕಾರ ಕ್ವಿಂಟಾಲ್ ಭತ್ತಕ್ಕೆ ೩,೫೦೦ ರೂ. ಕ್ವಿಂಟಾಲ್ ಭತ್ತಕ್ಕೆ ಕೊಡಬೇಕು ಎಂಬುದು ರೈತರ ಆಗ್ರಹ.

andolana

Recent Posts

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

2 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

2 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

12 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

12 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

14 hours ago