ಆಂದೋಲನ ಪುರವಣಿ

ಗುರುರಾಜ್ ಜಗ್ಗೇಶ್, ಕೋಮಲ್ ರೀ ಎಂಟ್ರಿ

ಜಗ್ಗೇಶ್ ಪುತ್ರನ ಹೊಸ ಚಿತ್ರ ‘ಅಮರಾವತಿ ಪೊಲೀಸ್ ಸ್ಟೇಷನ್’; ‘ಕಾಲಾಯ ನಮಃ’ ದಲ್ಲಿ ಕೋಮಲ್ ಕಮಲ್

ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ‘ಅಮರಾವತಿ ಪೊಲೀಸ್ ಸ್ಟೇಷನ್’ಎನ್ನುವ ಚಿತ್ರದ ಮೂಲಕ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಚಿಕ್ಕಪ್ಪ, ಜಗ್ಗೇಶ್ ಸಹೋದರ ಕೋಮಲ್ ಐದು ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ ಅದು ‘ಕಾಲಾಯ ನಮಃ’ ಚಿತ್ರದ ಮೂಲಕ.

‘ಅಮರಾವತಿ ಪೊಲೀಸ್ ಸ್ಟೇಷನ್’ ಇದು ಮೊನ್ನೆ ಸೆಟ್ಟೇರಿದ ಹೊಸ ಚಿತ್ರದ ಹೆಸರು. ಈ ಚಿತ್ರದ ಮುಖ್ಯಪಾತ್ರಧಾರಿ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್. ಅರಸೀಕೆರೆುಂ ಪುನೀತ್ ನಿರ್ದೇಶನದ ಈ ಚಿತ್ರದ ಮುಹೂರ್ತ ಆಗಿದ್ದು, ಜಗ್ಗೇಶ್ ಆರಂಭ ಫಲಕ ತೋರಿಸಿ ಶುಭ ಕೋರಿದರು. ಅಂಜನರೆಡ್ಡಿ ನಿರ್ವಾಣದ ಈ ಚಿತ್ರದಲ್ಲಿ ಗುರುರಾಜ ಅವರೊಂದಿಗೆ ರೇಖಾಶ್ರೀ, ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಇರಲಿದ್ದಾರೆ. ಸುರೇಶ್ ಬಾಬು ಛಾಾಂಗ್ರಹಣ, ಕಾರ್ತಿಕ್ ಸಂಗೀತ ಸಂೋಂಜನೆ ಇದೆ. ನಿರ್ದೇಶಕ ಪುನೀತ್ ಪ್ರಕಾರ ಇದು ರೈತರು ಮತ್ತು ವಾಧ್ಯಮಗಳ ಹಿನ್ನೆಲೆುಂಲ್ಲಿ ಈ ದಿನಗಳ ಕುರಿತಂತೆ ಹೇಳುವ ಚಿತ್ರ. ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ೋಂಜನೆ ಇದೆ.

ಕೋಮಲ್ ಕಂ ಬ್ಯಾಕ್

ಕೋಮಲ್ ಗೆ ಕೇತುದೆಸೆ ಇದೆ. ೨೦೨೨ ರವರೆಗೂ ಏನು ವಾಡಬೇಡ ಎಂದು ಹೇಳಿದ್ದೆ. ಆತ ನನ್ನ ವಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದೆುಂಯಿಂದ ಈ ಚಿತ್ರ ಆರಂಭಿಸಿದ್ದಾನೆ ಎಂದು ತಮ್ಮ ತಮ್ಮನ ಬಗ್ಗೆ ಹೇಳಿಕೊಂಡರು ಜಗ್ಗೇಶ್. ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿ ಪ್ರಧಾನ ಪಾತ್ರಗಳಲ್ಲೂ ನಟಿಸಿದ ಕೋಮಲ್ ಕುವಾರ್ ಕೆಲವು ವರ್ಷ ಸೋದರನ ವಾತಿನಂತೆ ಚಿತ್ರಗಳಿಂದ ದೂರವಿದ್ದರು.

ಇಷ್ಟು ಕಾಲ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ವಾಡುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ‘ಕಾಲಾುಂ ನಮಃ’ ಶುರುವಾಗಿದೆ. ಕಾಲಭೈರವನ ಆರಾಧಕ ನಾನು. ನನ್ನ ಸಿನಿವಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀುಂ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿವಾ ಸಾಗುತ್ತದೆ ಎಂದರು ಕೋಮಲ್. ಚಿತ್ರವನ್ನು
ಕೋಮಲ್ ಅವರ ಪತ್ನಿ ಅನಸೂಯ ನಿರ್ಮಿಸುತ್ತಿದ್ದು, ಮತಿವಣನ್ ನಿರ್ದೇಶನವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ತಾರಾಗಣದಲ್ಲಿದ್ದಾರೆ. ಎಮಿಲ್ ಸಂಗೀತ ಸಂಯೋಜನೆ, ರಾಕೇಶ್ ಸಿ. ತಿಲಕ್ ಛಾಯಾಗ್ರಹಣವಿರಲಿದೆ.

andolana

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

25 mins ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

50 mins ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

58 mins ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

1 hour ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

2 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

2 hours ago