ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ ಭಾನುವಾರಗಳಂದು ಹೋದರೆ ಅಲ್ಲಿ ಗುಡಿಯ ಮುಂದೆ ತಂಬೂರಿ ಮೀಟಿಕೊಂಡು, ‘ಗೋವಿಂದಾ.. ಗೋಪಾಲಾ..’ ಎಂದು ಭಿಕ್ಷಕ್ಕೆ ಕೂತಿರುತ್ತಾರೆ. ಇಂದಿರಾಗಾಂಧಿಯ ಕಾನೂನಿನಿಂದಾಗಿ ಇಪ್ಪತ್ತು ವರ್ಷಗಳ ಜೀತ ಮುಗಿಸಿ ಅದರಿಂದ ಹೊರಬಂದವರು ಇವರು. ಜೀತದಿಂದ ಹೊರಬಂದು, ಆಮೇಲೆ ಮದುವೆಯಾಗಿ, ಇಬ್ಬರು ಮಕ್ಕಳೂ ಆಗಿ, ಅದರಲ್ಲಿ ಒಬ್ಬ ಮಗ ಅಂಧನಾಗಿ ದಮ್ಮಡಿ ಬಾರಿಸಿಕೊಂಡು, ಇನ್ನೊಬ್ಬ ಮಗನೂ ಕಂಸಾಳೆ ಹಾಡುಗಾರನಾಗಿದ್ದಾನೆ. ಮಡದಿ ಸಾಕಮ್ಮ ಈ ಮೂವರಿಗೂ ಬಡಿಸಿ ಹಾಕುತ್ತಾರೆ.

ಮಾದಯ್ಯನವರು ಬಾಯಿಬಿಟ್ಟರೆ ಗಂಟೆಗಟ್ಟಲೆ ಜಾನಪದ ಕಾವ್ಯಗಳನ್ನು ಹಾಡಬಲ್ಲರು. ಮಾದೇಶ್ವರನ ಹಾಡು, ಬೇವಿನ ಕಾಳಮ್ಮನ ಕಥೆ, ಸಂಕಮ್ಮನವರ ಸಾಲು, ನಂಜುಂಡೇಶ್ವರನ ಹಾಡು ಇವರ ಕಂಠದಿಂದ ಪುಂಖಾನುಪುಂಖವಾಗಿ ಹೊರಬಂದರೆ ನಿಮ್ಮಂತಹವರು ಕೊಡುವ ಹತ್ತೋ ಇಪ್ಪತ್ತೋ ಐವತ್ತೋ ರೂಪಾಯಿಗಳು ಇವರ ಬದುಕಿನ ಗಾಡಿಯನ್ನು ಮುಂದಕ್ಕೆ ಓಡಿಸುತ್ತದೆ.

ಸರ್ಕಾರ ಕೊಟ್ಟಿರುವ ಎರಡೆಕೆರೆ ಭೂಮಿಯನ್ನು ಇರುವ ಎರಡು ಮಕ್ಕಳಿಗೆ ಹಂಚಿ ತಾವು ಮಾತ್ರ ಹಾಡುಗಳ ಹಾಡುತ್ತಾ ನಿಸೂರಾಗಿ ಕಳೆಯುವ ಮಾದಯ್ಯನವರು ಮಾತಾಡಲು ತೊಡಗಿದರೆ ಕಣ್ಣೀರುಗರೆಯುತ್ತಾರೆ. ಈ ಕಣ್ಣೀರು ಅವರ ಈ ಇಳಿವಯಸ್ಸಿನ ಪರಿಣಾಮವೋ ಅಥವಾ ಅವರ ಯೌವನವನ್ನೆಲ್ಲ ಕಬಳಿಸಿದ ಜೀತದ ಬದುಕಿನ ಹೆಪ್ಪುಗಟ್ಟಿದ ನೆನಪುಗಳ ಪರಿಣಾಮವೋ ಎಂದು ಗೊತ್ತಾಗದೆ ನೀವೂ ಕಂಗಾಲಾಗುತ್ತೀರಿ.

andolana

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

3 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

3 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

4 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

4 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

5 hours ago