ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ ಭಾನುವಾರಗಳಂದು ಹೋದರೆ ಅಲ್ಲಿ ಗುಡಿಯ ಮುಂದೆ ತಂಬೂರಿ ಮೀಟಿಕೊಂಡು, ‘ಗೋವಿಂದಾ.. ಗೋಪಾಲಾ..’ ಎಂದು ಭಿಕ್ಷಕ್ಕೆ ಕೂತಿರುತ್ತಾರೆ. ಇಂದಿರಾಗಾಂಧಿಯ ಕಾನೂನಿನಿಂದಾಗಿ ಇಪ್ಪತ್ತು ವರ್ಷಗಳ ಜೀತ ಮುಗಿಸಿ ಅದರಿಂದ ಹೊರಬಂದವರು ಇವರು. ಜೀತದಿಂದ ಹೊರಬಂದು, ಆಮೇಲೆ ಮದುವೆಯಾಗಿ, ಇಬ್ಬರು ಮಕ್ಕಳೂ ಆಗಿ, ಅದರಲ್ಲಿ ಒಬ್ಬ ಮಗ ಅಂಧನಾಗಿ ದಮ್ಮಡಿ ಬಾರಿಸಿಕೊಂಡು, ಇನ್ನೊಬ್ಬ ಮಗನೂ ಕಂಸಾಳೆ ಹಾಡುಗಾರನಾಗಿದ್ದಾನೆ. ಮಡದಿ ಸಾಕಮ್ಮ ಈ ಮೂವರಿಗೂ ಬಡಿಸಿ ಹಾಕುತ್ತಾರೆ.
ಮಾದಯ್ಯನವರು ಬಾಯಿಬಿಟ್ಟರೆ ಗಂಟೆಗಟ್ಟಲೆ ಜಾನಪದ ಕಾವ್ಯಗಳನ್ನು ಹಾಡಬಲ್ಲರು. ಮಾದೇಶ್ವರನ ಹಾಡು, ಬೇವಿನ ಕಾಳಮ್ಮನ ಕಥೆ, ಸಂಕಮ್ಮನವರ ಸಾಲು, ನಂಜುಂಡೇಶ್ವರನ ಹಾಡು ಇವರ ಕಂಠದಿಂದ ಪುಂಖಾನುಪುಂಖವಾಗಿ ಹೊರಬಂದರೆ ನಿಮ್ಮಂತಹವರು ಕೊಡುವ ಹತ್ತೋ ಇಪ್ಪತ್ತೋ ಐವತ್ತೋ ರೂಪಾಯಿಗಳು ಇವರ ಬದುಕಿನ ಗಾಡಿಯನ್ನು ಮುಂದಕ್ಕೆ ಓಡಿಸುತ್ತದೆ.
ಸರ್ಕಾರ ಕೊಟ್ಟಿರುವ ಎರಡೆಕೆರೆ ಭೂಮಿಯನ್ನು ಇರುವ ಎರಡು ಮಕ್ಕಳಿಗೆ ಹಂಚಿ ತಾವು ಮಾತ್ರ ಹಾಡುಗಳ ಹಾಡುತ್ತಾ ನಿಸೂರಾಗಿ ಕಳೆಯುವ ಮಾದಯ್ಯನವರು ಮಾತಾಡಲು ತೊಡಗಿದರೆ ಕಣ್ಣೀರುಗರೆಯುತ್ತಾರೆ. ಈ ಕಣ್ಣೀರು ಅವರ ಈ ಇಳಿವಯಸ್ಸಿನ ಪರಿಣಾಮವೋ ಅಥವಾ ಅವರ ಯೌವನವನ್ನೆಲ್ಲ ಕಬಳಿಸಿದ ಜೀತದ ಬದುಕಿನ ಹೆಪ್ಪುಗಟ್ಟಿದ ನೆನಪುಗಳ ಪರಿಣಾಮವೋ ಎಂದು ಗೊತ್ತಾಗದೆ ನೀವೂ ಕಂಗಾಲಾಗುತ್ತೀರಿ.
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…