ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ ಭಾನುವಾರಗಳಂದು ಹೋದರೆ ಅಲ್ಲಿ ಗುಡಿಯ ಮುಂದೆ ತಂಬೂರಿ ಮೀಟಿಕೊಂಡು, ‘ಗೋವಿಂದಾ.. ಗೋಪಾಲಾ..’ ಎಂದು ಭಿಕ್ಷಕ್ಕೆ ಕೂತಿರುತ್ತಾರೆ. ಇಂದಿರಾಗಾಂಧಿಯ ಕಾನೂನಿನಿಂದಾಗಿ ಇಪ್ಪತ್ತು ವರ್ಷಗಳ ಜೀತ ಮುಗಿಸಿ ಅದರಿಂದ ಹೊರಬಂದವರು ಇವರು. ಜೀತದಿಂದ ಹೊರಬಂದು, ಆಮೇಲೆ ಮದುವೆಯಾಗಿ, ಇಬ್ಬರು ಮಕ್ಕಳೂ ಆಗಿ, ಅದರಲ್ಲಿ ಒಬ್ಬ ಮಗ ಅಂಧನಾಗಿ ದಮ್ಮಡಿ ಬಾರಿಸಿಕೊಂಡು, ಇನ್ನೊಬ್ಬ ಮಗನೂ ಕಂಸಾಳೆ ಹಾಡುಗಾರನಾಗಿದ್ದಾನೆ. ಮಡದಿ ಸಾಕಮ್ಮ ಈ ಮೂವರಿಗೂ ಬಡಿಸಿ ಹಾಕುತ್ತಾರೆ.

ಮಾದಯ್ಯನವರು ಬಾಯಿಬಿಟ್ಟರೆ ಗಂಟೆಗಟ್ಟಲೆ ಜಾನಪದ ಕಾವ್ಯಗಳನ್ನು ಹಾಡಬಲ್ಲರು. ಮಾದೇಶ್ವರನ ಹಾಡು, ಬೇವಿನ ಕಾಳಮ್ಮನ ಕಥೆ, ಸಂಕಮ್ಮನವರ ಸಾಲು, ನಂಜುಂಡೇಶ್ವರನ ಹಾಡು ಇವರ ಕಂಠದಿಂದ ಪುಂಖಾನುಪುಂಖವಾಗಿ ಹೊರಬಂದರೆ ನಿಮ್ಮಂತಹವರು ಕೊಡುವ ಹತ್ತೋ ಇಪ್ಪತ್ತೋ ಐವತ್ತೋ ರೂಪಾಯಿಗಳು ಇವರ ಬದುಕಿನ ಗಾಡಿಯನ್ನು ಮುಂದಕ್ಕೆ ಓಡಿಸುತ್ತದೆ.

ಸರ್ಕಾರ ಕೊಟ್ಟಿರುವ ಎರಡೆಕೆರೆ ಭೂಮಿಯನ್ನು ಇರುವ ಎರಡು ಮಕ್ಕಳಿಗೆ ಹಂಚಿ ತಾವು ಮಾತ್ರ ಹಾಡುಗಳ ಹಾಡುತ್ತಾ ನಿಸೂರಾಗಿ ಕಳೆಯುವ ಮಾದಯ್ಯನವರು ಮಾತಾಡಲು ತೊಡಗಿದರೆ ಕಣ್ಣೀರುಗರೆಯುತ್ತಾರೆ. ಈ ಕಣ್ಣೀರು ಅವರ ಈ ಇಳಿವಯಸ್ಸಿನ ಪರಿಣಾಮವೋ ಅಥವಾ ಅವರ ಯೌವನವನ್ನೆಲ್ಲ ಕಬಳಿಸಿದ ಜೀತದ ಬದುಕಿನ ಹೆಪ್ಪುಗಟ್ಟಿದ ನೆನಪುಗಳ ಪರಿಣಾಮವೋ ಎಂದು ಗೊತ್ತಾಗದೆ ನೀವೂ ಕಂಗಾಲಾಗುತ್ತೀರಿ.

andolana

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

5 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago