ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ ಭಾನುವಾರಗಳಂದು ಹೋದರೆ ಅಲ್ಲಿ ಗುಡಿಯ ಮುಂದೆ ತಂಬೂರಿ ಮೀಟಿಕೊಂಡು, ‘ಗೋವಿಂದಾ.. ಗೋಪಾಲಾ..’ ಎಂದು ಭಿಕ್ಷಕ್ಕೆ ಕೂತಿರುತ್ತಾರೆ. ಇಂದಿರಾಗಾಂಧಿಯ ಕಾನೂನಿನಿಂದಾಗಿ ಇಪ್ಪತ್ತು ವರ್ಷಗಳ ಜೀತ ಮುಗಿಸಿ ಅದರಿಂದ ಹೊರಬಂದವರು ಇವರು. ಜೀತದಿಂದ ಹೊರಬಂದು, ಆಮೇಲೆ ಮದುವೆಯಾಗಿ, ಇಬ್ಬರು ಮಕ್ಕಳೂ ಆಗಿ, ಅದರಲ್ಲಿ ಒಬ್ಬ ಮಗ ಅಂಧನಾಗಿ ದಮ್ಮಡಿ ಬಾರಿಸಿಕೊಂಡು, ಇನ್ನೊಬ್ಬ ಮಗನೂ ಕಂಸಾಳೆ ಹಾಡುಗಾರನಾಗಿದ್ದಾನೆ. ಮಡದಿ ಸಾಕಮ್ಮ ಈ ಮೂವರಿಗೂ ಬಡಿಸಿ ಹಾಕುತ್ತಾರೆ.
ಮಾದಯ್ಯನವರು ಬಾಯಿಬಿಟ್ಟರೆ ಗಂಟೆಗಟ್ಟಲೆ ಜಾನಪದ ಕಾವ್ಯಗಳನ್ನು ಹಾಡಬಲ್ಲರು. ಮಾದೇಶ್ವರನ ಹಾಡು, ಬೇವಿನ ಕಾಳಮ್ಮನ ಕಥೆ, ಸಂಕಮ್ಮನವರ ಸಾಲು, ನಂಜುಂಡೇಶ್ವರನ ಹಾಡು ಇವರ ಕಂಠದಿಂದ ಪುಂಖಾನುಪುಂಖವಾಗಿ ಹೊರಬಂದರೆ ನಿಮ್ಮಂತಹವರು ಕೊಡುವ ಹತ್ತೋ ಇಪ್ಪತ್ತೋ ಐವತ್ತೋ ರೂಪಾಯಿಗಳು ಇವರ ಬದುಕಿನ ಗಾಡಿಯನ್ನು ಮುಂದಕ್ಕೆ ಓಡಿಸುತ್ತದೆ.
ಸರ್ಕಾರ ಕೊಟ್ಟಿರುವ ಎರಡೆಕೆರೆ ಭೂಮಿಯನ್ನು ಇರುವ ಎರಡು ಮಕ್ಕಳಿಗೆ ಹಂಚಿ ತಾವು ಮಾತ್ರ ಹಾಡುಗಳ ಹಾಡುತ್ತಾ ನಿಸೂರಾಗಿ ಕಳೆಯುವ ಮಾದಯ್ಯನವರು ಮಾತಾಡಲು ತೊಡಗಿದರೆ ಕಣ್ಣೀರುಗರೆಯುತ್ತಾರೆ. ಈ ಕಣ್ಣೀರು ಅವರ ಈ ಇಳಿವಯಸ್ಸಿನ ಪರಿಣಾಮವೋ ಅಥವಾ ಅವರ ಯೌವನವನ್ನೆಲ್ಲ ಕಬಳಿಸಿದ ಜೀತದ ಬದುಕಿನ ಹೆಪ್ಪುಗಟ್ಟಿದ ನೆನಪುಗಳ ಪರಿಣಾಮವೋ ಎಂದು ಗೊತ್ತಾಗದೆ ನೀವೂ ಕಂಗಾಲಾಗುತ್ತೀರಿ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…