ಒಂದು ಕಾಲದಲ್ಲಿ ಮೈಸೂರಿನ ಸಯ್ಯಾಜಿರಾವ್ ರಸ್ತೆ- ಸರ್ದಾರ್ ಪಟೇಲ್ ರಸ್ತೆಗಳು ಸೇರುವ ಒಂದು ಮೂಲೆಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜನಸಂದಣಿಯನ್ನು ಅಯಸ್ಕಾಂತದಂತೆ ಸೆಳೆಯುತ್ತಿದ್ದ ಶ್ರೀಯುತ ದಿನೇಶ್ ಚಂದ್ರ ಮಿಶ್ರಾ ಅವರಿಗೆ ಈಗ ೮೫ ವರ್ಷ! ಈಗ ಇವರ ಬಾನ್ಸುರಿಯ ಸದ್ದು ಕೇಳಬೇಕಾದರೆ ಅಲ್ಲೇ ಪಕ್ಕದಲ್ಲಿರುವ ಅರಸು ಕಾಂಪ್ಲೆಕ್ಸಿನಲ್ಲಿರುವ ಇವರ ಪೆನ್ನಿನ ಅಂಗಡಿಗೆ ಹೋಗಿ ಒಂದು ಪೇಪರಿನಲ್ಲಿ ಬರೆದು ಇವರ ಬಳಿ ಕೇಳಿಕೊಳ್ಳಬೇಕು. ಏಕೆಂದರೆ ವೋಂಸಹಜ ಕಾರಣಗಳಿಂದಾಗಿ ಇವರ ಶ್ರವಣಶಕ್ತಿ ಮಂದವಾಗಿದೆ. ಇನ್ನೂ ಒಂದು ವಿಷಯವೆಂದರೆ ಕೆಲವು ವರ್ಷಗಳ ಹಿಂದೆ ನಡೆದ ಹೃದಯ ಶಸ್ತ್ರ ಚಿಕಿತ್ಸೆಯಿಂದಾಗಿ ಇವರಿಗೆ ಒಂದು ನಿಮಿಷಕ್ಕಿಂತ ಹೆಚ್ಚು ಬಾನ್ಸುರಿ ನುಡಿಸಲೂ ಆಗುವುದಿಲ್ಲ.

ದಿನೇಶ್ ಚಂದ್ರ ಮಿಶ್ರಾ ಅವರ ಹಿರಿಯರು ಉತ್ತರ ಪ್ರದೇಶದ ಕನೌಜ್ ಪ್ರದೇಶಕ್ಕೆ ಸೇರಿದವರು. ನಂತರ ಕಾರಣಾಂತರಗಳಿಂದಾಗಿ ಕಲಕತ್ತಾಗೆ ವಲಸೆ ಹೋದವರು. ಅಲ್ಲಿ ಅವರಿಗೆ ಒಂದು ಪೆನ್ನಿನ ಕಾರ್ಖಾನೆ ಇತ್ತು. ಆ ಪೆನ್ನು ಮಾರುತ್ತಾ ದೇಶ ಸುತ್ತುತ್ತಿದ್ದ ಮಿಶ್ರಾ ಅವರಿಗೆ ಮೈಸೂರು ಯಾಕೋ ಇಷ್ಟವಾಯಿತು. ಆ ಕಾರಣದಿಂದ ಇಲ್ಲೇ ಉಳಿದುಕೊಂಡರು. ರಸ್ತೆ ಬದಿಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜೀವನ ಕಟ್ಟಿಕೊಂಡರು. ಈಗ ಇವರ ಮಗ ಖ್ಯಾತ ಬಾನ್ಸುರಿ ವಾದಕ ಮತ್ತು ತಯಾರಕ. ಮಗಳು ಹೆಸರಾಂತ ಮಾಧ್ಯಮ ತಜ್ಞೆ. ಆದರೆ ಈ ಯಾವುದರ ಪರಿವೆಯೂ ಇಲ್ಲದೆ ಮಿಶ್ರಾ ಅವರು ವಾರದ ದಿನಗಳಲ್ಲಿ ಅಪರಾಹ್ನ ಎರಡರಿಂದ ಇರುಳಿನ ತನಕ ತಮ್ಮ ಅಂಗಡಿಯಲ್ಲಿ ಕೂತಿರುತ್ತಾರೆ ಮತ್ತು ಮನಸಾದಾಗ ಸಣ್ಣಗೆ ಬಾನ್ಸುರಿಯನ್ನೂ ಬಾರಿಸುತ್ತಾರೆ.

ಮಿಶ್ರಾ ಅವರು ಮೈಸೂರಿನ ರಾಜಮಾರ್ಗದ ಬದಿ ಬಾನ್ಸುರಿ ನುಡಿಸಲು ತೊಡಗಿ ಐವತ್ತು ವರ್ಷಗಳಾಗುತ್ತಾ ಬಂತು. ಅವರ ‘ಹಾರ್ವೆಸ್ಟ್’ ಪೆನ್ನಿನ ಕಾರ್ಖಾನೆ ನಿಂತು ಹೋಗಿದೆ. ಬಾನ್ಸುರಿ ನುಡಿಸುವ ಶಕ್ತಿಯೂ ಕುಂದುತ್ತಾ ಬಂದಿದೆ. ಆದರೂ ಏನೂ ಗೊಣಗದೆ, ಯಾರನ್ನೂ ದೂರದೆ ಮೈಸೂರನ್ನೂ ಇನ್ನಷ್ಟು ಪ್ರೀತಿಸುತ್ತಿರುವ ಅವರಿಗೆ ನಾವು ಕೃತಜ್ಞರಾಗಬೇಕಾಗಿದೆ.

andolana

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago