ಇವರು ಮಂಡ್ಯ ಜಿಲ್ಲೆ ದುದ್ದ ಹೋಬಳಿ ಮಲ್ಲಾಯನಕಟ್ಟೆಯ ಹಾಡುಗಾರ್ತಿ ನಾಟಿ ಸಾಕಮ್ಮ. ನಾಟಿ ಸಾಕಮ್ಮ ಅಂತ ಇವರ ಹೆಸರು ಯಾಕೆ ಅಂದರೆ ಇವರ ಊರಿನಲ್ಲಿ ಬಹಳ ಮಂದಿ ಸಾಕಮ್ಮಂದಿರು ಇದ್ದಾರೆ. ಆದರೆ ನಾಟಿ ಹಾಕುವಾಗ ಹಾಡು ಹೇಳುವ ಸಾಕಮ್ಮ ಇವರೊಬ್ಬರೇ. ಹಾಗಾಗಿ. ಇವರಿಗೆ ಈಗ ಆಸುಪಾಸು ಅರವತ್ತರ ವಯಸ್ಸು. ಇವರ ತವರು ಮನೆ ಚನ್ನಪಟ್ಟಣದ ಬಳಿಯ ಸಿದ್ದನಹಳ್ಳಿ. ಸಣ್ಣ ವಯಸ್ಸಲ್ಲೇ ಮದುವೆಯಾಗಿ ಗಂಡನ ಮನೆಗೆ ಬಂದ ಸಾಕಮ್ಮ ಆಗಿನಿಂದ ತೊಡಗಿದ ಕೂಲಿ ಕೆಲಸ ಈಗಲೂ ಮುಂದುವರಿದಿದೆ. ನಾಟಿ ಸಾಕಮ್ಮ ಪ್ರಸಿದ್ಧರಾಗಿರುವುದು ಹಾಡುಗಾರ್ತಿಯಾಗಿ. ನಾಟಿ ಹಾಕುವಾಗ, ಕಳೆ ಕೀಳುವಾಗ, ಯಾರಾದರೂ ತೀರಿ ಹೋದಾಗ, ಮೈ ನೆರೆದಾಗ, ಮದುವೆಯಾಗುವಾಗ ಅಲ್ಲಿ ಸಾಕಮ್ಮ ಮತ್ತು ಸಂಗಡಿಗರ ಜಾನಪದ ಹಾಡುಗಳು ಇರಲೇಬೇಕು. ಹಾಗಾಗಿ ಹಾಡುಗಳು ಅಂದರೆ ಸಾಕಮ್ಮನಿಗೆ ಬದುಕಲು ಇರುವ ದಾರಿ ಮತ್ತು ಬಡತನವ ಮರೆಯಲು ಇರುವ ಸಂಗಾತಿ. ನಾಟಿ ಸಾಕಮ್ಮನಿಗೆ ಇರಲು ಮನೆಯಿಲ್ಲ, ಬೆಳೆಯಲು ಭೂಮಿಯಿಲ್ಲ. ಹೊಟ್ಟೆ ತುಂಬ ಅನ್ನ ಸಿಗುವಷ್ಟು ಕೂಲಿ ಕೆಲಸವೂ ಸಿಗುವುದಿಲ್ಲ. ಆದರೆ ಈ ಯಾವುದರ ಕುರಿತೂ ಈಕೆಗೆ ಸಿಟ್ಟೂ ಇಲ್ಲ ಬೇಸರವೂ ಇಲ್ಲ. ತನ್ನ ಮನೆದೇವರು ಮಂಚಮ್ಮ ತನ್ನನ್ನು ಎಲ್ಲದರಿಂದ ಕಾಪಾಡುತ್ತಾಳೆ ಎನ್ನುವ ಮುಗ್ಧ ನಂಬಿಕೆ ಆಕೆಯದ್ದು. ಆದರೆ ಇಂತಹ ಸಾವಿರ ಸಾವಿರ ಸಾಕಮ್ಮಂದಿರ ಮುಗ್ದತೆಯನ್ನೇ ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವ ಅಧಿಕಾರಸ್ಥರಿಗೆ ಇಂತಹ ತಾಯಂದಿರ ನಿಟ್ಟುಸಿರುಗಳು ಕೇಳಿಸುವುದೂ ಇಲ್ಲ (mysoorininda@gmail.com)

andolana

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

22 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago