ಇವರು ಮೈಸೂರಿನ ಕಾಷ್ಠಶಿಲ್ಪಿ ಕುವಾರ್ ಚಂದ್ರನ್. ಐದು ವರ್ಷದ ಬಾಲಕನಿರುವಾಗ ಕೇರಳದ ತಿರುವನಂತಪುರದಿಂದ ತಂದೆ ನಾಗಪ್ಪ ಆಚಾರಿಯವರೊಂದಿಗೆ ಮೈಸೂರಿಗೆ ಬಂದು ಮರಕ್ಕೆ ಉಳಿ ಹಿಡಿಯಲು ತೊಡಗಿದ ಇವರಿಗೆ ಈಗ ಐವತ್ತಾರು ವರ್ಷ. ದೇವಾನುದೇವತೆಗಳನ್ನೂ, ಶಿಲಾಬಾಲಿಕೆಯರನ್ನೂ ಕಣ್ಣಿಗೆ ಕಟ್ಟುವ ಹಾಗೆ ಒಣಮರದಲ್ಲಿ ಜೀವ ತುಂಬುವ ಇವರಿಗೆ ಇರಲು ಒಂದು ಸ್ವಂತ ಮನೆಯೂ ಇಲ್ಲ. ಮೈಸೂರಿನ ಬಿ.ಎಂ.ಶ್ರೀ ನಗರದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಸಾಕುತ್ತಾ ಬಾಡಿಗೆ ಮನೆಯಲ್ಲಿ ತಾವು ಕಡೆದ ವಿಗ್ರಹಗಳೊಂದಿಗೆ ಬದುಕುತ್ತಿರುವ ಇವರು ಸಿಕ್ಕಾಪಟ್ಟೆ ಸ್ವಾಭಿವಾನಿ. ‘ನಾನು ಕಲಾವಿದ. ದೇವರನ್ನು ಬಿಟ್ಟರೆ ಬೇರೆ ಯಾರ ಮುಂದೆಯೂ ತಲೆ ಬಾಗುವುದಿಲ್ಲ, ಹಾಗಾಗಿ ಪ್ರಧಾನ ಮಂತ್ರಿಗಳ ವಸತಿ ಯೋಜನೆಯಲ್ಲಿ ನನಗೆ ಮನೆಯೊಂದು ಮಂಜೂರಾಗಿದ್ದರೂ ಅದು ನನಗೆ ಇನ್ನೂ ಸಿಕ್ಕಿಲ್ಲ. ಪರವಾಗಿಲ್ಲ. ನಾನು ಯಾರ ಬಳಿಯೂ ಕೈ ಒಡ್ಡಿ ಕೇಳಿಕೊಳ್ಳುವುದಿಲ್ಲ. ನಾನು ಕಡೆದ ದೇವರ ಮೂರ್ತಿಗಳು ಹಾಗೆ ಬಯಸಿದರೆ ಹಾಗೇ ಆಗಲಿ. ನಾನು ಸ್ವಂತ ಸೂರಿಲ್ಲದವನಾಗಿಯೇ ಈ ಮೈಸೂರಿನಲ್ಲಿ ಬದುಕುತ್ತೇನೆ’ ಎಂದು ಮತ್ತೆ ಮೂರ್ತಿಗಳನ್ನು ಕೆತ್ತಲು ತೊಡಗುತ್ತಾರೆ. ಈ ಚಿತ್ರದಲ್ಲಿ ನೀವು ನೋಡುತ್ತಿರುವ ಬೇಲೂರ ಶಿಲಾಬಾಲಿಕೆಯನ್ನು ಸತತ ಮೂರು ತಿಂಗಳುಗಳ ಕಾಲ ಕೆತ್ತಿ ಮುಗಿಸಿ, ಈಗ ಶಯನಶೀಲನಾಗಿರುವ ಗಣಪತಿಯ ಮೂರ್ತಿಯನ್ನು ಇವರು ಮರದಲ್ಲಿ ಮೂಡಿಸಲು ತೊಡಗಿದ್ದಾರೆ. ಇವರು ಕೆತ್ತಿರುವ ಸರಸ್ವತಿ,ಗಣಪ, ಶ್ರೀ ಕೃಷ್ಣ, ಬುದ್ದ, ಏಸು, ಗಾಂಧಿಯರ ಮೂರ್ತಿಯರು ವಿಗ್ರಹದ ಅಂಗಡಿಗಳವರಿಗೆ ಸಾವಿರಾರು ರೂಪಾಯಿಗಳ ಲಾಭ ತಂದುಕೊಟ್ಟಿದೆ. ಪ್ರಧಾನ ಮಂತಿಗಳವರೆಗೂ ತಲುಪಿವೆ. ಆದರೆ ಇವರ ಶ್ರಮಕ್ಕೆ ಕನಿಷ್ಟ ಸಂಬಳವೂ ದೊರಕುವುದಿಲ್ಲ. ಅದೊಂದು ಸಾತ್ವಿಕ ಸಿಟ್ಟು ಬಿಟ್ಟರೆ ಇವರಿಗೆ ತಾನೊಬ್ಬ ಕಲಾವಿದ ಎಂಬುದರ ಕುರಿತು ಆತ್ಮ ಸಂತೃಪ್ತಿಯಿದೆ. ತನ್ನ ಜೀವನದ ಅರ್ಧ ದಶಕವನ್ನು ಮರದ ದೇವದೇವತೆಗಳೊಂದಿಗೆ ಮೈಸೂರಿನಲ್ಲೇ ಕಳೆದಿರುವ ಇವರಿಗೆ ಇರಲೊಂದು ನೆಲೆ ಸಿಗಲು ಮೈಸೂರಿಗರು ಹಕ್ಕೊತ್ತಾಯ ಮಾಡಬೇಕಾಗಿದೆ.
( mysoorininda@gmail.com )

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

34 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago