ಇವರು ಮೈಸೂರಿನ ಕಾಷ್ಠಶಿಲ್ಪಿ ಕುವಾರ್ ಚಂದ್ರನ್. ಐದು ವರ್ಷದ ಬಾಲಕನಿರುವಾಗ ಕೇರಳದ ತಿರುವನಂತಪುರದಿಂದ ತಂದೆ ನಾಗಪ್ಪ ಆಚಾರಿಯವರೊಂದಿಗೆ ಮೈಸೂರಿಗೆ ಬಂದು ಮರಕ್ಕೆ ಉಳಿ ಹಿಡಿಯಲು ತೊಡಗಿದ ಇವರಿಗೆ ಈಗ ಐವತ್ತಾರು ವರ್ಷ. ದೇವಾನುದೇವತೆಗಳನ್ನೂ, ಶಿಲಾಬಾಲಿಕೆಯರನ್ನೂ ಕಣ್ಣಿಗೆ ಕಟ್ಟುವ ಹಾಗೆ ಒಣಮರದಲ್ಲಿ ಜೀವ ತುಂಬುವ ಇವರಿಗೆ ಇರಲು ಒಂದು ಸ್ವಂತ ಮನೆಯೂ ಇಲ್ಲ. ಮೈಸೂರಿನ ಬಿ.ಎಂ.ಶ್ರೀ ನಗರದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಸಾಕುತ್ತಾ ಬಾಡಿಗೆ ಮನೆಯಲ್ಲಿ ತಾವು ಕಡೆದ ವಿಗ್ರಹಗಳೊಂದಿಗೆ ಬದುಕುತ್ತಿರುವ ಇವರು ಸಿಕ್ಕಾಪಟ್ಟೆ ಸ್ವಾಭಿವಾನಿ. ‘ನಾನು ಕಲಾವಿದ. ದೇವರನ್ನು ಬಿಟ್ಟರೆ ಬೇರೆ ಯಾರ ಮುಂದೆಯೂ ತಲೆ ಬಾಗುವುದಿಲ್ಲ, ಹಾಗಾಗಿ ಪ್ರಧಾನ ಮಂತ್ರಿಗಳ ವಸತಿ ಯೋಜನೆಯಲ್ಲಿ ನನಗೆ ಮನೆಯೊಂದು ಮಂಜೂರಾಗಿದ್ದರೂ ಅದು ನನಗೆ ಇನ್ನೂ ಸಿಕ್ಕಿಲ್ಲ. ಪರವಾಗಿಲ್ಲ. ನಾನು ಯಾರ ಬಳಿಯೂ ಕೈ ಒಡ್ಡಿ ಕೇಳಿಕೊಳ್ಳುವುದಿಲ್ಲ. ನಾನು ಕಡೆದ ದೇವರ ಮೂರ್ತಿಗಳು ಹಾಗೆ ಬಯಸಿದರೆ ಹಾಗೇ ಆಗಲಿ. ನಾನು ಸ್ವಂತ ಸೂರಿಲ್ಲದವನಾಗಿಯೇ ಈ ಮೈಸೂರಿನಲ್ಲಿ ಬದುಕುತ್ತೇನೆ’ ಎಂದು ಮತ್ತೆ ಮೂರ್ತಿಗಳನ್ನು ಕೆತ್ತಲು ತೊಡಗುತ್ತಾರೆ. ಈ ಚಿತ್ರದಲ್ಲಿ ನೀವು ನೋಡುತ್ತಿರುವ ಬೇಲೂರ ಶಿಲಾಬಾಲಿಕೆಯನ್ನು ಸತತ ಮೂರು ತಿಂಗಳುಗಳ ಕಾಲ ಕೆತ್ತಿ ಮುಗಿಸಿ, ಈಗ ಶಯನಶೀಲನಾಗಿರುವ ಗಣಪತಿಯ ಮೂರ್ತಿಯನ್ನು ಇವರು ಮರದಲ್ಲಿ ಮೂಡಿಸಲು ತೊಡಗಿದ್ದಾರೆ. ಇವರು ಕೆತ್ತಿರುವ ಸರಸ್ವತಿ,ಗಣಪ, ಶ್ರೀ ಕೃಷ್ಣ, ಬುದ್ದ, ಏಸು, ಗಾಂಧಿಯರ ಮೂರ್ತಿಯರು ವಿಗ್ರಹದ ಅಂಗಡಿಗಳವರಿಗೆ ಸಾವಿರಾರು ರೂಪಾಯಿಗಳ ಲಾಭ ತಂದುಕೊಟ್ಟಿದೆ. ಪ್ರಧಾನ ಮಂತಿಗಳವರೆಗೂ ತಲುಪಿವೆ. ಆದರೆ ಇವರ ಶ್ರಮಕ್ಕೆ ಕನಿಷ್ಟ ಸಂಬಳವೂ ದೊರಕುವುದಿಲ್ಲ. ಅದೊಂದು ಸಾತ್ವಿಕ ಸಿಟ್ಟು ಬಿಟ್ಟರೆ ಇವರಿಗೆ ತಾನೊಬ್ಬ ಕಲಾವಿದ ಎಂಬುದರ ಕುರಿತು ಆತ್ಮ ಸಂತೃಪ್ತಿಯಿದೆ. ತನ್ನ ಜೀವನದ ಅರ್ಧ ದಶಕವನ್ನು ಮರದ ದೇವದೇವತೆಗಳೊಂದಿಗೆ ಮೈಸೂರಿನಲ್ಲೇ ಕಳೆದಿರುವ ಇವರಿಗೆ ಇರಲೊಂದು ನೆಲೆ ಸಿಗಲು ಮೈಸೂರಿಗರು ಹಕ್ಕೊತ್ತಾಯ ಮಾಡಬೇಕಾಗಿದೆ.
( mysoorininda@gmail.com )

andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

12 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

12 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

13 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

13 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

13 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

14 hours ago