ಇವರು ಮೈಸೂರಿನೊಳಗೇ ಸೇರಿಕೊಂಡಿರುವ ಬನ್ನೂರು ರಸ್ತೆ ಯರಗನಹಳ್ಳಿಯ ಸೋಬಾನೆ ಹಾಡುಗಾರ್ತಿ ನಿಂಗಮ್ಮ. ಉಸಿರೆತ್ತಿದರೆ ಇವರ ಬಾಯಿಂದ ಹಾಡುಗಳು ಬರುತ್ತವೆ. ಒಂದು ಕಾಲದಲ್ಲಿ ಮೈಸೂರಿನ ಸಾರೋಟು ಕುದುರೆಗಳಿಗೆ ಬೇಕಾದ ಹುಲ್ಲು ಕತ್ತರಿಸಿ ಮಾರಿ ಅದರಿಂದ ಬಂದ ಕಾಸಲ್ಲಿ ಭತ್ತ ರಾಗಿ ಕೊಂಡು ಅನ್ನ ಅಂಬಲಿ ಮಾಡಿ ತನ್ನ ಎಂಟು ಮಕ್ಕಳಿಗೂ ಕುಡಿಸಿ ತಾನು ಮಾತ್ರ ಹಸಿದು ಮಲಗಿದಾಕೆ. ಮೈಸೂರು ಸುತ್ತಮುತ್ತ ಹುಟ್ಟು, ಸಾವು, ಮದುವೆ, ಸೀಮಂತಗಳಿಗೆ ಹೋಗಿ ಮದುವೆ ಶಾಸ್ತ್ರದ ಹಾಡು, ಸೂತಕದ ಹಾಡು, ಎಣ್ಣೆ ಎರೆಯುವ ಹಾಡುಗಳನ್ನು ಹಾಡಿ ಅವರು ಇವರು ಕೊಟ್ಟ ಕಾಸು ಕೂಡಿಸಿ ಮೂಗಿಗೆ ಮೂಗುತಿ, ಕಿವಿಗೆ ವಾಲೆ ಮಾಡಿಸಿಕೊಂಡು ಒಂದಿಷ್ಟು ಸಂಭ್ರಮಿಸಿದಾಕೆ. ಬೆಂಗಳೂರು, ರಂಗಾಯಣ, ರಾಮನಗರ ಆಕಾಶವಾಣಿ ಇಲ್ಲೆಲ್ಲ ಹೋಗಿ ಹಾಡು ಹಸೆ ಹೇಳಿ ಒಂದಿಷ್ಟು ಕಾಸು ಕೂಡಿಸಿ ಅದರಲ್ಲೇ ಮಕ್ಕಳು ಮೊಮ್ಮಕ್ಕಳ ಬಾಣಂತನವನ್ನೂ ಮಾಡಿಸಿ ತನ್ನ ಯಜಮಾನಿಕೆ ತೋರಿಸಿದಾಕೆ.
ಈಗ ನಿಂಗಮ್ಮ ಊರು ಬಿಟ್ಟು ನಂಜನಗೂಡು, ಮಾದೇಶ್ವರನ ಬೆಟ್ಟ ಎಂದು ಸಿಟ್ಟಲ್ಲಿ ಕೊರಗಿಕೊಂಡು ಎಲ್ಲೆಲ್ಲೋ ತಿರುಗುತ್ತಿದ್ದಾರೆ. ಸಿಟ್ಟಿಗೆ ಕಾರಣ ಏನು ಎಂದು ಕೇಳಿದರೆ ದೊಡ್ಡ ಕಥೆಯನ್ನೇ ಹೇಳುತ್ತಾರೆ. ಅದು ಬಹಳ ದೊಡ್ಡ ನೋವಿನ ಕತೆ. ನೀವು ಈ ಹಾಡುಗಾರ್ತಿ ತಾಯಿಯನ್ನು ಎಲ್ಲಾದರೂ ದಾರಿಯಲ್ಲಿ ಕಂಡು ಪ್ರೀತಿಯಲ್ಲಿ ಮಾತನಾಡಿಸಿದರೆ ಖುಷಿಪಡುತ್ತಾರೆ. ಮನಸಾರೆ ಅಳುತ್ತಾರೆ ಮತ್ತು ತಮ್ಮ ಬದುಕಿನ ಕಥೆ ಹೇಳಿ ಮುಗಿಸಿ ಸಂಕಟದಲ್ಲಿ ಮುಗುಳ್ನಗುತ್ತಾರೆ.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…