ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ ರಾಮಾನುಜ ರಸ್ತೆಯ ಕ್ರಾಸೊಂದರಲ್ಲಿ ಅಂಗಡಿ ಇಟ್ಟುಕೊಂಡಿದ್ದ ವೀಣಾ ಮಾಂತ್ರಿಕ ರುದ್ರಪ್ಪನವರು ಯುವಕ ವಿಶ್ವೇಶ್ವರನ್ ಅವರಿಗೆ ಬೇಕಾಗಿೆುೀಂ ಈ ವಿಶೇಷ ವೀಣೆಯನ್ನು ತಯಾರಿಸಿಕೊಟ್ಟಿದ್ದರು. ದೇಶದಲ್ಲಿೆುೀಂ ಈಗಲೂ ೧೬ ಇಂಚಿನ ದೊಡ್ಡ ಕೊಡ ಇರುವ ಇಂತಹದೊಂದು ವೀಣೆ ಇಲ್ಲವಂತೆ. ಈ ವಯಸ್ಸಿನಲ್ಲಿಯೂ ಇಷ್ಟೊಂದು ಸುಲಲಿತವಾಗಿ ವೀಣೆ ನುಡಿಸಬಲ್ಲ ಇನ್ನೊಬ್ಬ ವೈಣಿಕನಿಲ್ಲ.
ಕಡೂರು ಬೀರೂರು ಕಡೆಯಿಂದ ಆ ಕಾಲದಲ್ಲಿ ಮೈಸೂರಿಗೆ ಬಂದ ಬಿ.ರಾಮಯ್ಯನವರು ವಿಶ್ವೇಶ್ವರನ್ ಅವರ ತಂದೆ. ಅವರು ಮಹಾರಾಜ ನಾಲ್ವಡಿಯವರ ಅರಮನೆಯ ಖಾಸ್ ಬಿಡದಿಯ ಲೆಕ್ಕಿಗರಾಗಿದ್ದರು. ಮೈಸೂರು ಸಿಂಹಾಸನದ ಹೂವಿನ ಅಲಂಕಾರವನ್ನು ಇವರಿಂದಲೇ ಮಾಡಿಸಬೇಕೆಂದು ಮಹಾರಾಜರ ಆಜ್ಞೆಯಾಗಿತ್ತು. ವಿಶ್ವೇಶ್ವರನ್ ಅವರ ತಾಯಿ ವರಲಕ್ಷ್ಮಮ್ಮ ಮೈಸೂರಿನ ಅಭಿನವ ತ್ಯಾಗರಾಜ ಎಂದೇ ಹೆಸರಾಗಿದ್ದ ಸುಂದರಶಾಸ್ತ್ರಿಗಳ ಶಿಷ್ಯೆಯಾಗಿದ್ದರು. ಇವರ ನಾಲ್ಕು ಮಕ್ಕಳಲ್ಲಿ ವಿಶ್ವೇಶ್ವರನ್ ಅವರು ಕೊನೆಯವರು. ಈ ನಾಲ್ಕೂ ಮಕ್ಕಳು ಮೈಸೂರು ಸಹೋದರರೆಂದೇ ಹೆಸರಾಗಿದ್ದವರು.

‘ವೀಣೆ ನುಡಿಸುವುದು ಗಾಯನದ ಹಾಗಿರಬೇಕು’ ಎನ್ನುವುದು ವಿಶ್ವೇಶ್ವರನ್ ಅವರು ಇದುವರೆಗೆ ನಂಬಿಕೊಂಡು ನುಡಿಸಿಕೊಂಡು ಪ್ರತಿಪಾದಿಸುತ್ತಿರುವ ಸಿದ್ಧಾಂತ. ‘ಆಧ್ಯಾತ್ಮದ ಸ್ಪರ್ಶವಿಲ್ಲದ ಸಂಗೀತ ಬರಿಯ ಒಂದು ಕೈಚಳಕ’ ಎನ್ನುವುದು ಇವರ ಮಾತು. ‘ಸಂಗೀತದ ಗುರಿ ಮನರಂಜನೆಯಲ್ಲ ಅದು ದೇವರನ್ನು ಮುಟ್ಟುವ ದಾರಿ’ ಎಂಬುದು ಇವರ ವೇದಾಂತ. ‘ಸಂಗೀತವನ್ನು ಕೊಟ್ಟ ಶಾರದೆಗೂ ಮತ್ತು ಆಕೆಯನ್ನು ಆರಾಧಿಸುವ ನನಗೂ ಒಂದು ಅದ್ವೈತದಂತಹ ಸಂಬಂಧವಿದೆ’ ಎನ್ನುವುದು ಇವರ ನಂಬಿಕೆ.

ನಿಮ್ಮ ಈ ಯೌವನದ ಗುಟ್ಟೇನು ಅಂತ ಕೇಳಿದರೆ, ‘ಈ ಎಪ್ಪತ್ತು ವರ್ಷದ ವೀಣೆೆುೀಂ ನನ್ನನ್ನು ಇನ್ನೂ ತರುಣನನ್ನಾಗಿ ಇಟ್ಟಿರುವುದು’ ಎನ್ನುತ್ತಾರೆ ತೊಂಬತ್ತೆರಡು ವರ್ಷದ ಈ ಸುಂದರ ವೈಣಿಕ!

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

2 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

4 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

4 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago