ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ ರಾಮಾನುಜ ರಸ್ತೆಯ ಕ್ರಾಸೊಂದರಲ್ಲಿ ಅಂಗಡಿ ಇಟ್ಟುಕೊಂಡಿದ್ದ ವೀಣಾ ಮಾಂತ್ರಿಕ ರುದ್ರಪ್ಪನವರು ಯುವಕ ವಿಶ್ವೇಶ್ವರನ್ ಅವರಿಗೆ ಬೇಕಾಗಿೆುೀಂ ಈ ವಿಶೇಷ ವೀಣೆಯನ್ನು ತಯಾರಿಸಿಕೊಟ್ಟಿದ್ದರು. ದೇಶದಲ್ಲಿೆುೀಂ ಈಗಲೂ ೧೬ ಇಂಚಿನ ದೊಡ್ಡ ಕೊಡ ಇರುವ ಇಂತಹದೊಂದು ವೀಣೆ ಇಲ್ಲವಂತೆ. ಈ ವಯಸ್ಸಿನಲ್ಲಿಯೂ ಇಷ್ಟೊಂದು ಸುಲಲಿತವಾಗಿ ವೀಣೆ ನುಡಿಸಬಲ್ಲ ಇನ್ನೊಬ್ಬ ವೈಣಿಕನಿಲ್ಲ.
ಕಡೂರು ಬೀರೂರು ಕಡೆಯಿಂದ ಆ ಕಾಲದಲ್ಲಿ ಮೈಸೂರಿಗೆ ಬಂದ ಬಿ.ರಾಮಯ್ಯನವರು ವಿಶ್ವೇಶ್ವರನ್ ಅವರ ತಂದೆ. ಅವರು ಮಹಾರಾಜ ನಾಲ್ವಡಿಯವರ ಅರಮನೆಯ ಖಾಸ್ ಬಿಡದಿಯ ಲೆಕ್ಕಿಗರಾಗಿದ್ದರು. ಮೈಸೂರು ಸಿಂಹಾಸನದ ಹೂವಿನ ಅಲಂಕಾರವನ್ನು ಇವರಿಂದಲೇ ಮಾಡಿಸಬೇಕೆಂದು ಮಹಾರಾಜರ ಆಜ್ಞೆಯಾಗಿತ್ತು. ವಿಶ್ವೇಶ್ವರನ್ ಅವರ ತಾಯಿ ವರಲಕ್ಷ್ಮಮ್ಮ ಮೈಸೂರಿನ ಅಭಿನವ ತ್ಯಾಗರಾಜ ಎಂದೇ ಹೆಸರಾಗಿದ್ದ ಸುಂದರಶಾಸ್ತ್ರಿಗಳ ಶಿಷ್ಯೆಯಾಗಿದ್ದರು. ಇವರ ನಾಲ್ಕು ಮಕ್ಕಳಲ್ಲಿ ವಿಶ್ವೇಶ್ವರನ್ ಅವರು ಕೊನೆಯವರು. ಈ ನಾಲ್ಕೂ ಮಕ್ಕಳು ಮೈಸೂರು ಸಹೋದರರೆಂದೇ ಹೆಸರಾಗಿದ್ದವರು.

‘ವೀಣೆ ನುಡಿಸುವುದು ಗಾಯನದ ಹಾಗಿರಬೇಕು’ ಎನ್ನುವುದು ವಿಶ್ವೇಶ್ವರನ್ ಅವರು ಇದುವರೆಗೆ ನಂಬಿಕೊಂಡು ನುಡಿಸಿಕೊಂಡು ಪ್ರತಿಪಾದಿಸುತ್ತಿರುವ ಸಿದ್ಧಾಂತ. ‘ಆಧ್ಯಾತ್ಮದ ಸ್ಪರ್ಶವಿಲ್ಲದ ಸಂಗೀತ ಬರಿಯ ಒಂದು ಕೈಚಳಕ’ ಎನ್ನುವುದು ಇವರ ಮಾತು. ‘ಸಂಗೀತದ ಗುರಿ ಮನರಂಜನೆಯಲ್ಲ ಅದು ದೇವರನ್ನು ಮುಟ್ಟುವ ದಾರಿ’ ಎಂಬುದು ಇವರ ವೇದಾಂತ. ‘ಸಂಗೀತವನ್ನು ಕೊಟ್ಟ ಶಾರದೆಗೂ ಮತ್ತು ಆಕೆಯನ್ನು ಆರಾಧಿಸುವ ನನಗೂ ಒಂದು ಅದ್ವೈತದಂತಹ ಸಂಬಂಧವಿದೆ’ ಎನ್ನುವುದು ಇವರ ನಂಬಿಕೆ.

ನಿಮ್ಮ ಈ ಯೌವನದ ಗುಟ್ಟೇನು ಅಂತ ಕೇಳಿದರೆ, ‘ಈ ಎಪ್ಪತ್ತು ವರ್ಷದ ವೀಣೆೆುೀಂ ನನ್ನನ್ನು ಇನ್ನೂ ತರುಣನನ್ನಾಗಿ ಇಟ್ಟಿರುವುದು’ ಎನ್ನುತ್ತಾರೆ ತೊಂಬತ್ತೆರಡು ವರ್ಷದ ಈ ಸುಂದರ ವೈಣಿಕ!

andolana

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

4 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

4 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

4 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

4 hours ago