ಹಾಡು ಪಾಡು

ಶತಮಾನ ತುಂಬಿದ ಹರವೆಯ ಕನ್ನಡ ಶಾಲೆ

ಇದು ಚಾಮರಾಜನಗರದ ಬಳಿಯ ಹರವೆಯ ಮಾಧ್ಯಮಿಕ ಶಾಲಾಕಟ್ಟಡದ ಶಿಲಾನ್ಯಾಸ ಫಲಕ. ಆಗಿನ ಮೈಸೂರು ರಾಜ್ಯದ ಪ್ರಥಮ ಪ್ರಧಾನ ಸಚಿವರಾದ(ಮುಖ್ಯಮಂತ್ರಿಗಳಿಗೆ ಅಂದು ಪ್ರಧಾನ ಸಚಿವರೆಂದು ಕರೆಯುತ್ತಿದ್ದರಂತೆ) ಕೆ. ಸಿ. ರೆಡ್ಡಿಯವರೆ ಗ್ರಾಮಕ್ಕೆ ಆಗಮಿಸಿದ್ದು ಇತಿಹಾಸ.

ಹರವೆ ಗ್ರಾಮದ ಸುತ್ತಲಿನ ಇಪ್ಪತ್ತು ಮೂವತ್ತು ಗ್ರಾಮಗಳ ಮಕ್ಕಳು ಓದಿಗಾಗಿ ಮುಖ ಮಾಡಿ ಇತ್ತ ಬರಲಾರಂಭಿಸಿದ್ದರು. ಈ ಶಾಲೆ ಈ ಮೊದಲು ಮಹಾರಾಜರ ಕಾಲದಲ್ಲಿ ಪ್ರಾಥಮಿಕ ಶಾಲೆಯಾಗಿ ಶುರುವಾಗಿತ್ತಂತೆ. ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದು ಸದ್ಯ ಹರವೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಕವಿ, ಲೇಖಕ ಮಹೇಶ್ ಹರವೆಯವರು ಶಾಲೆಯಲ್ಲಿನ ತಮ್ಮ ಓದಿನ ದಿನಗಳನ್ನು ಸಂಭ್ರಮದಿಂದ ಹಂಚಿಕೊಳ್ಳುತ್ತಾರೆ.

ಮಕ್ಕಳಿಗೆ ಹರಿಹರನ ರಗಳೆಗಳನ್ನು, ಶರಣರ ಕತೆಗಳನ್ನು ತಮ್ಮ ವಿಶಿಷ್ಟ ಶೈಲಿಯಲ್ಲಿ ಹೇಳಿಕೊಡುತ್ತಿದ್ದ ಸೋಮಣ್ಣ ಮೇಷ್ಟ್ರು, ಭೈರಪ್ಪರ ಪರ್ವ, ಗೃಹಭಂಗ ಕಾದಂಬರಿಗಳನ್ನ ಓದಿ ಮಕ್ಕಳಿಗೆ ಕತೆ ಹೇಳುತ್ತಿದ್ದ ಎಚ್. ನಾಗರಾಜು ಮೇಷ್ಟ್ರು, ಇಂಗ್ಲಿಷ್ ಕಲಿಸುತ್ತಿದ್ದ ಪುಟ್ಟಸ್ವಾಮಿ ಮೇಷ್ಟ್ರು ಹೀಗೆ ಸೃಜನಶೀಲ ಗುರು ಪರಂಪರೆಯನ್ನು ಪ್ರೀತಿಯಿಂದ ನೆನೆಯುವ ಮಹೇಶ್ ಹರವೆಯವರು ತಮ್ಮ ಸೃಜನಶೀಲ ನೆಲೆಯ ತಳಪಾಯ ಪ್ರೈಮರಿ ಶಾಲೆಯದ್ದು ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ ಮತ್ತು ಪ್ರಖರ ವೈಚಾರಿಕ ಪ್ರಜ್ಞೆಯ ಲೇಖಕರಾಗಿದ್ದ ದೇವಯ್ಯ ಹರವೆಯವರು ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದವರು ಎಂದು ನೆನಪಿಸಿಕೊಳ್ಳುತ್ತಾರೆ. ಇತ್ತೀಚಿಗೆ ಹಲವು ಕಾರಣದಿಂದಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿರುವಾಗ ಒಂದೇ ಶೈಕ್ಷಣಿಕ ವರ್ಷದಲ್ಲಿ ಇನ್ನೂರಕ್ಕೂ ಹೆಚ್ಚು ಮಕ್ಕಳು ದಾಖಲಾಗಿರುವ ಇತಿಹಾಸ ಶಾಲೆಯದು.

ಮಾಹಿತಿ: ಅನಿಲ್ ಕುಮಾರ್ ಹೊಸೂರು, ಶಿಕ್ಷಕರು, ಚಾಮರಾಜನಗರ

 

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

4 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

9 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

9 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

9 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

14 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

14 hours ago