ಇದು ಚಾಮರಾಜನಗರದ ಬಳಿಯ ಹರವೆಯ ಮಾಧ್ಯಮಿಕ ಶಾಲಾಕಟ್ಟಡದ ಶಿಲಾನ್ಯಾಸ ಫಲಕ. ಆಗಿನ ಮೈಸೂರು ರಾಜ್ಯದ ಪ್ರಥಮ ಪ್ರಧಾನ ಸಚಿವರಾದ(ಮುಖ್ಯಮಂತ್ರಿಗಳಿಗೆ ಅಂದು ಪ್ರಧಾನ ಸಚಿವರೆಂದು ಕರೆಯುತ್ತಿದ್ದರಂತೆ) ಕೆ. ಸಿ. ರೆಡ್ಡಿಯವರೆ ಗ್ರಾಮಕ್ಕೆ ಆಗಮಿಸಿದ್ದು ಇತಿಹಾಸ.
ಹರವೆ ಗ್ರಾಮದ ಸುತ್ತಲಿನ ಇಪ್ಪತ್ತು ಮೂವತ್ತು ಗ್ರಾಮಗಳ ಮಕ್ಕಳು ಓದಿಗಾಗಿ ಮುಖ ಮಾಡಿ ಇತ್ತ ಬರಲಾರಂಭಿಸಿದ್ದರು. ಈ ಶಾಲೆ ಈ ಮೊದಲು ಮಹಾರಾಜರ ಕಾಲದಲ್ಲಿ ಪ್ರಾಥಮಿಕ ಶಾಲೆಯಾಗಿ ಶುರುವಾಗಿತ್ತಂತೆ. ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದು ಸದ್ಯ ಹರವೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಕವಿ, ಲೇಖಕ ಮಹೇಶ್ ಹರವೆಯವರು ಶಾಲೆಯಲ್ಲಿನ ತಮ್ಮ ಓದಿನ ದಿನಗಳನ್ನು ಸಂಭ್ರಮದಿಂದ ಹಂಚಿಕೊಳ್ಳುತ್ತಾರೆ.
ಮಕ್ಕಳಿಗೆ ಹರಿಹರನ ರಗಳೆಗಳನ್ನು, ಶರಣರ ಕತೆಗಳನ್ನು ತಮ್ಮ ವಿಶಿಷ್ಟ ಶೈಲಿಯಲ್ಲಿ ಹೇಳಿಕೊಡುತ್ತಿದ್ದ ಸೋಮಣ್ಣ ಮೇಷ್ಟ್ರು, ಭೈರಪ್ಪರ ಪರ್ವ, ಗೃಹಭಂಗ ಕಾದಂಬರಿಗಳನ್ನ ಓದಿ ಮಕ್ಕಳಿಗೆ ಕತೆ ಹೇಳುತ್ತಿದ್ದ ಎಚ್. ನಾಗರಾಜು ಮೇಷ್ಟ್ರು, ಇಂಗ್ಲಿಷ್ ಕಲಿಸುತ್ತಿದ್ದ ಪುಟ್ಟಸ್ವಾಮಿ ಮೇಷ್ಟ್ರು ಹೀಗೆ ಸೃಜನಶೀಲ ಗುರು ಪರಂಪರೆಯನ್ನು ಪ್ರೀತಿಯಿಂದ ನೆನೆಯುವ ಮಹೇಶ್ ಹರವೆಯವರು ತಮ್ಮ ಸೃಜನಶೀಲ ನೆಲೆಯ ತಳಪಾಯ ಪ್ರೈಮರಿ ಶಾಲೆಯದ್ದು ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ ಮತ್ತು ಪ್ರಖರ ವೈಚಾರಿಕ ಪ್ರಜ್ಞೆಯ ಲೇಖಕರಾಗಿದ್ದ ದೇವಯ್ಯ ಹರವೆಯವರು ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದವರು ಎಂದು ನೆನಪಿಸಿಕೊಳ್ಳುತ್ತಾರೆ. ಇತ್ತೀಚಿಗೆ ಹಲವು ಕಾರಣದಿಂದಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿರುವಾಗ ಒಂದೇ ಶೈಕ್ಷಣಿಕ ವರ್ಷದಲ್ಲಿ ಇನ್ನೂರಕ್ಕೂ ಹೆಚ್ಚು ಮಕ್ಕಳು ದಾಖಲಾಗಿರುವ ಇತಿಹಾಸ ಶಾಲೆಯದು.
ಮಾಹಿತಿ: ಅನಿಲ್ ಕುಮಾರ್ ಹೊಸೂರು, ಶಿಕ್ಷಕರು, ಚಾಮರಾಜನಗರ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…