ಹಾಡು ಪಾಡು

ಪಾಷಾಣ ಮೂರ್ತಿ ಎಂಬ ಹೆಣ್ಣು ದೈವ

ಮೇದ ಜನಾಂಗದವರು ಹಳೆಯ ಕಾಲದಿಂದಲೂ ‘ಪಾಷಾಣ ಮೂರ್ತಿ’ ಎನ್ನುವ ಹೆಣ್ಣು ದೈವವನ್ನು ಆರಾಧಿಸಿಕೊಂಡು ಬಂದಿದ್ದಾರೆ

  • ಆರತಿ ಎಂ. ಎಸ್‌.

‘ಪಾಷಾಣ ಮೂರ್ತಿ’ ದೈವಕ್ಕೆ ಯಾವುದೇ ನಿರ್ದಿಷ್ಟ ಗುಡಿ, ಕಟ್ಟೆ, ಮಂದಿರವಾಗಲಿ ಇರುವುದಿಲ್ಲ. ಕೊಡಗಿನ ಮೇದ’ ಸಮುದಾಯದ ಹಿರಿಯ ಕುಟುಂಬದ ಮನೆಯಲ್ಲಿಯೇ ಯಾವುದೇ ವಸ್ತ್ರಾಭರಣಗಳಿಲ್ಲದ ಚಿಕ್ಕ ಹೆಣ್ಣಿನ ಮೂರ್ತಿಯನ್ನಿಟ್ಟು ಆರಾಧಿಸುತ್ತಾರೆ. ವರ್ಷದ ಜೂನ್ ತಿಂಗಳಲ್ಲಿ ಬರುವ ಹುಣ್ಣಿಮೆಯಂದು ‘ಪಾಷಾಣ ಮೂರ್ತಿ’ಗೆ ಎಡೆ ಇಡುವ ಪದ್ಧತಿಯನ್ನು ಹಿಂದಿನಿಂದಲೂ ಬಹಳ ವಿಶಿಷ್ಟವಾಗಿ ನಡೆಸಿಕೊಂಡು ಬರಲಾಗಿದೆ.

‘ತಾಯಿ’ಯ ಸ್ವರೂಪದಲ್ಲಿ ‘ಪಾಷಾಣ ಮೂರ್ತಿ’ಯನ್ನು ನಂಬುವ ‘ಮೇದರು ದೈವಕ್ಕೆ ಎಡೆ ಇಡುವುದರಲ್ಲಿ ಪಾರಂಪರಿಕ ಸಂಪ್ರದಾಯವನ್ನು ಪಾಲಿಸುತ್ತಾರೆ. ಎಡೆ ಇಡುವ ಹಿರಿಯರ ಮನೆಗೆ ಗ್ರಾಮದ ಪ್ರತಿಯೊಂದು ‘ಮೇದ’ ಸಮುದಾಯದವರ ಮನೆಯಿಂದ ಕೋಳಿ ಹಾಗೂ ತೆಂಗಿನಕಾಯಿಯನ್ನು ತರಲಾಗುತ್ತದೆ. ಭತ್ತವನ್ನು ಹುರಿದು ಮಾಡಿದ ಪುರಿ ಹಾಗೂ ಕಲ್ಲಿನಲ್ಲಿ ಬೀಸಿದ ಅಕ್ಕಿ ಹಿಟ್ಟನ್ನು ಮಾಡಿ ತರುತ್ತಾರೆ. ಎಡೆ ಇಡುವ ದಿನದಂದು ಅಕ್ಕಿಯಿಂದ ತಯಾರಿಸುವ ಆಹಾರವನ್ನು ಅಜ್ಜ, ಅಜ್ಜಿಯಂದಿರು ಹಾಗೂ ಗಂಡಸರು ಮಾತ್ರ ಮಾಡುತ್ತಾರೆ. ಆರಂಭದಲ್ಲಿ ಒಂದು ಬಾಳೆಗೊನೆಹಾಗೂ ಅಕ್ಕಿ ಹಾಕಿದ ತಟ್ಟೆಯ ಮೇಲೆ ‘ಪಾಷಾಣ ಮೂರ್ತಿಯ ವಿಗ್ರಹವನ್ನು ಇಡುತ್ತಾರೆ.

‘ಪಾಷಾಣ ಮೂರ್ತಿ’ಗೆ ಎಡೆ ಇಡುವಾಗ ಮನೆಯ ಹಿರಿಯರು ದೈವಕ್ಕೆ ಪ್ರಾರ್ಥನೆ ಮಾಡಿ ‘ನಾವು ಕೋಳಿಯನ್ನು ಅರ್ಪಿಸುತ್ತಿದ್ದೇವೆ’ ಎಂದು ನುಡಿದು ಕೋಳಿಯ ಕತ್ತನ್ನು ತಿರುವುತ್ತಾರೆ.

ಪ್ರಸಾದವನ್ನು ಎಡೆಯಾಗಿ ಇಡುವಾಗ ‘ಪಾಷಾಣ ಮೂರ್ತಿ’ಯ ಜೊತೆಗೆ ಹಿರಿಯರ ಆತ್ಮಗಳಿಗೂ ಎಡೆ ಇಡುತ್ತಾರೆ. ಎಡೆಗಳ ಎರಡೂ ಕಡೆ ಲೋಟದ ಆಕೃತಿಯಲ್ಲಿ ಮಡಚಿದ ಬಾಳೆ ಎಲೆಯಲ್ಲಿ ಒಂದು ಬದಿಯಲ್ಲಿ ಸರಾಯಿ ಹಾಗೂ ಇನ್ನೊಂದು ಬದಿಯಲ್ಲಿ ಕುರ್ದಿ ನೀರನ್ನು ಇಡಲಾಗುತ್ತದೆ. ಎಡೆಯ ಎರಡು ಬಿದಿರುವಿನ ಕಡ್ಡಿಯ ತುದಿಗೆ ಬಟ್ಟೆಯ ನೆಣೆ ಮಾಡಿ, ಬಾಳೆ ದಿಂಡಿನ ದೀಪವನ್ನು ಸಿದ್ಧಪಡಿಸಿ ಇಡಲಾಗುತ್ತದೆ. ಎಡೆ ಇಟ್ಟು ಪೂಜಿಸುವಾಗ ಕುಲಕಸುಬಿನ ಸಂಕೇತವಾಗಿ ಬಿದಿರಿನ ಕೋಲುಗಳಿಗೂ ಮಹತ್ವವನ್ನು ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ‘ಭೂಮಿ ಗುಳಿಗ ದೈವಕ್ಕೂ ಭತ್ತದಿಂದ ತಯಾರಿಸಿದ ಪುರಿಯನ್ನು ಕೋಳಿ ರಕ್ತದೊಂದಿಗೆ ಬೆರೆಸಿ ಎಡೆ ಹಾಕುತ್ತಾರೆ. ಪಾಷಾಣ ಮೂರ್ತಿ’ಗೆ ಎಡೆ ಇಡುವ ಹಿರಿಯರು ಕೊನೆಯಲ್ಲಿ ನಮ್ಮಿಂದ ಪ್ರಕೃತಿಗೆ ಕೇಡಾಗಿದ್ದಲ್ಲಿ ಕ್ಷಮಿಸಬೇಕು ಹಾಗೂ ಇಡೀ ಸಮುದಾಯದ ನೋವುಗಳನ್ನು ದೂರವಾಗಿಸಬೇಕು ಎಂದು ಪ್ರಾರ್ಥಿಸುತ್ತಾರೆ. ಹಾಗೆಯೇ ‘ಪಾಷಾಣ ಮೂರ್ತಿ’ಗೆ ಇರಿಸಲಾದ ಎಡೆಯನ್ನು ಸ್ವಲ್ಪ ಸ್ವಲ್ಪ ತಿನ್ನುವ ಮೂಲಕ ಹಿರಿಯರು ಆ ದಿನದ ಉಪವಾಸವನ್ನು ಅಂತ್ಯ ಮಾಡುತ್ತಾರೆ.

arathims117@gmail.com
(ಲೇಖಕಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ)

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago