ಹಾಡು ಪಾಡು

ಎಲ್ಲರನ್ನೂ ಪೊರೆಯುವ ಅಮ್ಮನಂತಹ ಸಂವಿಧಾನ

ಫಾತಿಮಾ ರಲಿಯಾ

೧೯೨೫ರ ಆಸುಪಾಸಿನಲ್ಲಿ ಹುಟ್ಟಿದ, ಆ ಹೊತ್ತಿಗೆ ಮೆಟ್ರಿಕ್ ಮುಗಿಸಿದ ನನ್ನಜ್ಜ ಅಹ್ಮದ್ ಸ್ವಾತಂತ್ರ್ಯ ಸಿಕ್ಕು, ಸಂವಿಧಾನ ಜಾರಿಯಾದ ನಂತರ ಮೇಷ್ಟ್ರಾಗಿ ಸರ್ಕಾರಿ ಕೆಲಸಕ್ಕೆ ಸೇರಿಕೊಂಡದ್ದು. ಯಾರೇನು ಹೇಳುತ್ತಾರೋ, ಯಾರೇನು ಅಂದುಕೊಳ್ಳುತ್ತಾರೋ, ತಾನುಡುವ ಬಟ್ಟೆಯಿಂದ, ತಾನು ತೊಟ್ಟುಕೊಳ್ಳುವ ಟೊಪ್ಪಿಯಿಂದ ಎಲ್ಲಿ ಗೇಲಿಗೊಳಗಾಗುತ್ತೋ ಎನ್ನುವ ಅಂಜಿಕೆಯಿಂದಲೇ ಶಾಲೆಗೆ ಹೋಗುತ್ತಿದ್ದ ನನಗೆ ಸಂವಿಧಾನ ಜಾರಿಗೆ ಬಂದ ಮೇಲೆ ಒಂದು ವಿಶಿಷ್ಟ ಬಲ ಬಂದಂತಾಗಿತ್ತು ಎನ್ನುತ್ತಿದ್ದರು ನನ್ನಜ್ಜ.

ಬಹುಶಃ ಸಂವಿಧಾನದ ಅತಿ ದೊಡ್ಡ ಗೆಲುವು ಈ ದೇಶದ ಅತಿ ಸಾಮಾನ್ಯನಿಗೂ ಇಂಥ ಬಲವನ್ನು ಒದಗಿಸಿದುದರಲ್ಲಿದೆ, ತಾನು ಶಕ್ತ ಎಂಬ ನಂಬಿಕೆ ಹುಟ್ಟಿಸಿರುವುದರಲ್ಲಿದೆ, ತನಗೂ ಇಲ್ಲಿ ಬದುಕುವ ಹಕ್ಕಿದೆ ಎಂಬ ಆತ್ಮವಿಶ್ವಾಸ ತುಂಬಿರುವುದರಲ್ಲಿದೆ. ಓದಿದ್ದ, ಶಿಕ್ಷಕರಾಗಿದ್ದ ನನ್ನಜ್ಜ ಅಮ್ಮನನ್ನು, ಚಿಕ್ಕಮ್ಮಂದಿರನ್ನು ಓದಿಸಿದರು. ಆ ಮೂಲಕ ನಂತರದ ತಲೆಮಾರಿಗೆ ಅರಿವಿನ ಬಾಗಿಲನ್ನು ತೆರೆದರು.

ತಾನು ಓದುವಾಗ ಇದ್ದ ಕಷ್ಟ, ಅಡೆತಡೆಗಳು ನನ್ನ ಮಕ್ಕಳು ಓದುವಾಗ ಇರಲಿಲ್ಲ, ಮೊಮ್ಮಕ್ಕಳು ಓದುವಾಗ ಇರಬಾರದು ಅನ್ನುತ್ತಿದ್ದರು. ಅಜ್ಜನ ಕಾಲಕ್ಕಿದ್ದ ಕಟ್ಟುಪಾಡು ಅಮ್ಮನ ಕಾಲದ ಹೊತ್ತಿಗೆ ಸಡಿಲವಾಗಿತ್ತು, ನನ್ನ ಕಾಲಕ್ಕೆ ತಲುಪುವಾಗ ಮತ್ತಷ್ಟು ಸಡಿಲವಾಗಿದೆ. ನನ್ನ ಮಗಳ ಕಾಲಕ್ಕೆ ಕಳಚಿ ಬಿದ್ದರೂ ಬೀಳಬಹುದು. ನನ್ನ ವ್ಯಕ್ತಿತ್ವವನ್ನು ಕಟ್ಟಿಕೊಳ್ಳುವಲ್ಲಿ ಮತ್ತು ಒಬ್ಬ ವ್ಯಕ್ತಿಯಾಗಿ ಸಮಾಜದ ಮುಂದೆ ನಿಂತುಕೊಳ್ಳುವಲ್ಲಿ ಮೂರು ತಲೆಮಾರುಗಳಿಂದ ಬೀಸಿಕೊಂಡು ಬಂದಿರುವ ಶಿಕ್ಷಣದ ಗಾಳಿ ತುಂಬಾ ಮಹತ್ವವಾದದ್ದು. ಆ ಶಿಕ್ಷಣದ ಮೂಲ ಬೀಜವನ್ನು ಬಿತ್ತಿದ್ದು ಯಾವ ತಾರತಮ್ಯವೂ ಇಲ್ಲದೆ ಶಾಲೆಯ ಬಾಗಿಲನ್ನು ಎಲ್ಲರಿಗೂ ತೆರೆದ ಸಂವಿಧಾನ.

ಇನ್ನು, ನೂರಾರು ಧರ್ಮ, ನೂರಾರು ಜಾತಿ, ನೂರಾರು ಸಮುದಾಯಗಳು, ಭಾಷೆಗಳು, ಸಂಸ್ಕ ತಿಗಳು… ಹೀಗೆ ಒಂದು ಖಂಡವಾಗಬಹುದಾದಷ್ಟು ವೈವಿಧ್ಯತೆ ಇರುವ ಈ ಭರತ ಭೂಮಿ ಒಂದು ದೇಶವಾಗಿಯೇ ಇನ್ನೂ ಉಳಿದಿದೆ ಮತ್ತು ದೇಶವಾಸಿಗಳಿಗೆ ಸುಭದ್ರ, ಕಂಫರ್ಟ್‌ನ ಭಾವ ನೀಡುತ್ತದೆ ಅಂತಾದರೆ ಅದಕ್ಕೆ ಸಂವಿಧಾನವೇ ಮುಖ್ಯ ಕಾರಣ. ಮೊದಲು, ದೇಶ ವಿಭಜನೆ, ಸ್ವಾತಂತ್ರ್ಯಾನಂತರ ಗಾಂಧಿ ಹತ್ಯೆ, ತುರ್ತು ಪರಿಸ್ಥಿತಿಯ ಹೇರಿಕೆ, ಬಾಬರಿ ಮಸೀದಿ ಧ್ವಂಸ, ಗೋಧ್ರಾ ಮತ್ತು ಗೋಧ್ರೋತ್ತರ ಘಟನೆಗಳು, ಯುದ್ಧಗಳು, ನಿತ್ಯ ಸುದ್ದಿಯಾಗುತ್ತಿರುವ ಜಾತಿ ಮತ್ತು ಕೋಮುಗಲಭೆಗಳು… ಹೀಗೆ ಈ ದೇಶದ ಮೇಲೆ ಮಾಗದ ಗಾಯಗಳಾದರೂ ಪರಸ್ಪರರ ಮೇಲಿನ ನಂಬಿಕೆ, ವಿಶ್ವಾಸ, ವ್ಯಕ್ತಿಗತ ಪ್ರೀತಿ, ಅಕ್ಕರೆಗಳು ಇನ್ನೂ ಉಳಿದುಕೊಂಡಿರುವುದೂ ಕೂಡ ಸಂವಿಧಾನದಿಂದಲೇ.

ಮೇಲ್ನೋಟಕ್ಕೆ ಇವೆಲ್ಲವೂ ಕೂಡ ವೈಯಕ್ತಿಕ ಏಳಿಗೆ ಮತ್ತು ಬದುಕಿಗೆ ಸಂಬಂಧಿಸಿದ್ದಲ್ಲ ಅನ್ನಿಸಿದರೂ ಬಹುಸಂಸ್ಕ ತಿಯ ಜೊತೆಗೆ ಬೆರೆತು, ಸಹನೀಯ ಬದುಕನ್ನು ಬದುಕಲು ಈ ಭದ್ರತಾ ಭಾವ ಬೇಕೇ ಬೇಕು. ಒಂದು ಅರಾಜಕತೆ ತುಂಬಿದ, ಅನಿಶ್ಚಿತ ರಾಜಕೀಯ ಸ್ಥಿತಿಗಳಿರುವ, ಯಾವಾಗ ಏನಾಗುತ್ತೋ ಎನ್ನುವ ಆತಂಕದಲ್ಲೇ ಬದುಕಬೇಕಾದ ರಾಜಕೀಯ ಪರಿಸ್ಥಿತಿಗಳಿರುವ ದೇಶದಲ್ಲಿ ಒಬ್ಬ ಮನುಷ್ಯ ನೆಮ್ಮದಿಯಾಗಿ ಬದುಕಲು ಸಾಧ್ಯವೇ ಇಲ್ಲ.

ಇಲ್ಲಿ ಏನೇ ಆದರೂ ಅಂತಿಮವಾಗಿ ಸಂವಿಧಾನ ನಮ್ಮ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸದೊಂದಿಗೇ ನಾವು ಬದುಕುತ್ತೇವೆ. ಮನುಷ್ಯ ಮನುಷ್ಯರ ನಡುವಿನ ನಂಬಿಕೆಯ ಬೇರು ಅಲುಗಾಡುವಂತಹ, ಎಲ್ಲವನ್ನೂ ಧರ್ಮ, ಜಾತಿಗಳ ಅಳತೆಗೋಲಿಂದಲೇ ಅಳೆದು ತಕ್ಕಡಿ ತೂಗಿಸುವ ಘಟನೆಗಳು ಅಲ್ಲಲ್ಲಿ ನಡೆದರೂ ಇಲ್ಲಿ ಇನ್ನೂ ಸೌಹಾರ್ದತೆಯ ಬೇರುಗಳು ಗಟ್ಟಿಯಾಗಿಯೇ ಇವೆ ಅಂದರೆ ನಮ್ಮೆಲ್ಲರನ್ನೂ ಪೊರೆಯುವ ಅಮ್ಮನಂತಹ ಸಂವಿಧಾನ ಯಾರಿಗೂ ಯಾವತ್ತಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ನಂಬಿಕೆಯಿಂದ.

(ಲೇಖಕಿ ಹೊಸ ತಲೆಮಾರಿನ ಕನ್ನಡ ಕಥೆಗಾರ್ತಿ)

” ಮತ್ತೆ ಮತ್ತೆ ಮಾಗದ ಗಾಯಗಳಾಗುತ್ತಿದ್ದರೂ ಪರಸ್ಪರರ ಮೇಲಿನ ನಂಬಿಕೆ, ವಿಶ್ವಾಸ, ವ್ಯಕ್ತಿಗತ ಪ್ರೀತಿ, ಅಕ್ಕರೆಗಳು ಇನ್ನೂ ಉಳಿದುಕೊಂಡಿರುವುದು ಈ ಗಣರಾಜ್ಯದ ಸಂವಿಧಾನದಿಂದಲೇ.” 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

19 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

19 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago