ಹಾಡು ಪಾಡು

ಎಲ್ಲ ಅಳಿದರೂ ಉಳಿವ ಅನುಭಾವಿ ಸಖ್ಯ

ಸುಕನ್ಯಾ ಕನಾರಳ್ಳಿ

ಸುಪ್ರಸಿದ್ಧ ಪರ್ಷಿಯನ್ ಕವಿ ರೂಮಿ ಅಫ್ಘಾನಿಸ್ತಾನದ ಬಾಲ್ಖ್‌ನಲ್ಲಿ ಕ್ರಿ.ಶ.೧೨೦೭ ರಲ್ಲಿ ಹುಟ್ಟಿದ. ಆತ ಒಬ್ಬ ಇಸ್ಲಾಮ್ ಧರ್ಮಶಾಸ್ತ್ರಜ್ಞ ಮತ್ತು ಬೋಧಕನಾಗಿ ಜನರ ಜೊತೆ ಗಾಢವಾಗಿ ಬೆರೆಯುತ್ತಿದ್ದವ.

೧೨೪೪ರಲ್ಲಿ ರೂಮಿ ಒಬ್ಬ ಅಲೆಮಾರಿಯನ್ನು ಹಾದಿಯಲ್ಲಿ ಭೇಟಿಯಾದ. ಆತನ ಹೆಸರು ಶಂಶುದ್ದೀನ್. ಶಮ್ಸ್ ಬುಟ್ಟಿಗಳನ್ನು ಹೆಣೆದು ಬದುಕುತ್ತಿದ್ದ ಗುಂಪಿಗೆ ಸೇರಿದವ. ತಬ್ರೀಜ್ ಪಟ್ಟಣದಲ್ಲಿದ್ದ ಸಂತನೊಬ್ಬನಿಂದ ಅನುಭಾವಿ ದರ್ಶನದಲ್ಲಿ ಆಸಕ್ತಿಯನ್ನು ತಳೆದ. ನಂತರ ಅಧ್ಯಾತ್ಮದ ಗುರುಗಳನ್ನು ಅರಸುತ್ತಾ ಅಲೆಯ ಹತ್ತಿದ. ಆತ ಜನರೊಂದಿಗೆ ಬೆರೆಯುತ್ತಿರಲಿಲ್ಲ.

ಧರ್ಮಶಾಸ್ತ್ರಜ್ಞರನ್ನಂತೂ ದೂರವೇ ಇಟ್ಟಿದ್ದ. ಊರಿನ ಹೊರಗೆಲ್ಲೊ ಮನೆ ಮಠವಿಲ್ಲದ ಯಾತ್ರಿಕರ ಗುಂಪಿನಲ್ಲಿರುತ್ತಿದ್ದ. ಒಟ್ಟಿನಲ್ಲಿ ಮಾಗಿದ್ದ, ಈಗ ತನ್ನ ಅನುಭವವನ್ನು ಹಂಚಿಕೊಳ್ಳುವ ಸಹಜೀವಕ್ಕೆ ಕಾಯುತ್ತಿದ್ದ. ರೂಮಿಯನ್ನು ಕಂಡಾಗ ಇವ ತನಗೆ ತಕ್ಕ ಸಖನಾಗಬಲ್ಲವ ಅಂತನ್ನಿಸಿರಬೇಕು.

ಅವರಿಬ್ಬರ ಭೇಟಿಯ ಬಗ್ಗೆ ಈ ಕತೆಯಿದೆ: ರೂಮಿ ಧರ್ಮಶಾಸ್ತ್ರಜ್ಞನಾಗಿದ್ದ ಮದ್ರಸಾಗೆ ಒಬ್ಬ ಅಪರಿಚಿತ ಬಂದನಂತೆ. ಎಂದಿನಂತೆ ರೂಮಿ ಬೋಧನೆಯಲ್ಲಿ ತಲ್ಲೀನನಾಗಿದ್ದ. ಅಲ್ಲೇ ಹತ್ತಿರದಲ್ಲಿ ಪುಸ್ತಕಗಳನ್ನು ಪೇರಿಸಿದ್ದ ಒಂದು ಗುಡ್ಡೆಯೇ ಇತ್ತು. ಯಾರೂ ಕರೆಯದೆ ಬಂದ ಅಪರಿಚಿತ, ಯಾರೂ ಹೇಳದಿದ್ದರೂ ಒಂದು ಮೂಲೆಯಲ್ಲಿ ಕೂತ. ಅತ್ತಿತ್ತ ನೋಡಿ ಪುಸ್ತಕಗಳ ಗುಡ್ಡೆಯತ್ತ ಬೆರಳು ತೋರಿಸುತ್ತಾ, ‘ಏನದು?’ ಅಂತ ಕೇಳಿದ. ಅವನ ಧಾಷ್ಟ ಕ್ಕೆ ಮೊದಲೇ ರೇಗಿದ್ದ ರೂಮಿ, ‘ಅದಾ? ನಿನಗೆ ಅರ್ಥವಾಗದ್ದು, ಬಿಡು’ ಅಂತ ಉಡಾಫೆಯಿಂದ ಉತ್ತರ ಕೊಟ್ಟ. ಹಾಗೆ ಹೇಳಿದ ತಕ್ಷಣವೇ ಗುಡ್ಡೆ ಹತ್ತಿ ಉರಿಯಲಾರಂಭಿಸಿತು. ಎಲ್ಲರೂ ಬೆಚ್ಚಿಬಿದ್ದರು.

“ಹೇ… ಹೇ… ಏನಿದು?” ಅಂತ ರೂಮಿ ಕಿರುಚಿದ. ‘ಅದಾ, ನಿನಗೆ ಅರ್ಥವಾಗದ್ದು, ಬಿಡು,’ ಎಂದು ಉತ್ತರ ಕೊಟ್ಟ ಅಪರಿಚಿತ, ಬಂದ ಹಾಗೆಯೇ ಎದ್ದು ಹೋದ. ದಡಬಡಿಸಿ ಓಡಿದ ರೂಮಿ ಅವನನ್ನು ಎಲ್ಲಾ ಕಡೆ ಹುಡುಕಿ ಮನೆಗೆ ಕರೆತಂದನಂತೆ.

ಶಮ್ಸ್ ಎಂದರೆ ಸೂರ್ಯ. ರೂಮಿಯ ಮೂವತ್ತೇಳನೆಯ ವಯಸ್ಸಿನಲ್ಲಿ ದಮಸ್ಕಸಿನಲ್ಲಿ ಭೇಟಿಯಾದ ಶಮ್ಸನಿಗೆ ಆಗ ಐವತ್ತೊ ಅರವತ್ತೊ ಇದ್ದಿರಬಹುದು. ಸುಮಾರು ನಲ್ವತ್ತು ದಿನಗಳ ಕಾಲ ಎಡಬಿಡದೆ ಒಟ್ಟಿಗಿದ್ದು ಶಮ್ಸ್ ಅವನಿಗೆ ಅನುಭಾವಿ ಪ್ರೇಮದ ನಲ್ವತ್ತು ಸತ್ಯಗಳನ್ನು ಬೋಧಿಸಿದ ಎಂಬ ಮಾಹಿತಿಯಿದೆ.

ಅನುಭಾವಿ ದರ್ಶನದಲ್ಲಿ ರೂಮಿ-ಶಮ್ಸ್ ಸ್ನೇಹ ಒಂದು ಮಹತ್ತರ ಪ್ರತಿಮೆಯಾಗಿ ಒದಗಿ ಬಂದಿದೆ. ಗುರು-ಶಿಷ್ಯ; ಪ್ರೇಮಿ-ಪ್ರೀತಿಪಾತ್ರ; ಅಸ್ತಿತ್ವ-ನಾಸ್ತಿತ್ವ; ಬೆಳಕು-ಮೂಲ; ಇತ್ಯಾದಿ ಎಲ್ಲ ಗುರುತುಗಳೂ ಅಳಿದು ಪರಸ್ಪರರಲ್ಲಿ ಲೀನವಾಗಬಲ್ಲ ಅನುಭಾವಿ ಸಖ್ಯ (ಸೊಹಬೆತ್) ಅವರದು.

ರೂಮಿಯ ಕಡು ಪ್ರೇಮದ ಕಾವ್ಯ ಬಿದಿರ ಮೆಳೆಯನ್ನು ತೊರೆದು ಬಂದಿರುವ ಜೊಂಡುಗೊಳಲಿನ ವಿರಹ ಕಾವ್ಯವೂ ಹೌದು, ಅನುಭಾವಿ ದರ್ಶನವೂ ಹೌದು. (ಸದ್ಯದಲ್ಲೇ ಪ್ರಕಟವಾಗಲಿರುವ ಲೇಖಕಿಯ ‘ದಿವ್ಯ ದಲ್ಲಿ ಹಿಸ್ಸೆಯಿಲ್ಲ: ಮೌಲಾನಾ ಜಲಾಲುದ್ದೀನ್ ರೂಮಿಯ ಪ್ರೇಮಕಾವ್ಯ’ ಕೃತಿಯ ಪ್ರಸ್ತಾವನೆಯಿಂದ ಆಯ್ದ ಭಾಗ)

” ಅನುಭಾವಿ ದರ್ಶನದಲ್ಲಿ ರೂಮಿ-ಶಮ್ಸ್ ಸ್ನೇಹ ಒಂದು ಮಹತ್ತರ ಪ್ರತಿಮೆಯಾಗಿ ಒದಗಿ ಬಂದಿದೆ”

ಆಂದೋಲನ ಡೆಸ್ಕ್

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

3 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

46 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago