ಹಾಡು ಪಾಡು

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ

ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ ತುಂಬಿಕೊಂಡಿದ್ದ ಬಸ್ಸೊಂದನ್ನು ಹತ್ತುತ್ತಾನೆ. ಸರಿಯಾಗಿ ನಿಂತುಕೊಳ್ಳಲೂ ಜಾಗವಿಲ್ಲದ ಬಸ್ಸಿನಲ್ಲಿ ಹೇಗೋ ಅಡ್ಜಸ್ಟ್ ಮಾಡ್ಕೊಂಡು ನಿಂತಿದ್ದವನಿಗೆ ತನ್ನ ಬೆನ್ನ ಹಿಂದೆ ನಡೆಯುವ ಯಾವ ವಿಷಯವೂ ತಿಳಿದಿರಲಿಲ್ಲ. ಆತನಿಗೆ ತಾನು ಹೀಗೊಂದು ಅಪವಾದದಲ್ಲಿ ಸಿಲುಕಿದ್ದು ತಿಳಿದದ್ದೇ ವೈರಲ್ ಪೋಸ್ಟ್ ನೋಡಿದ ನಂತರ!

ದೀಪಕ್‌ನ ಹಿಂದೆ ನಿಂತಿದ್ದ ಶಿಂಜಿಯಾ ಮುಸ್ತಫ ಎನ್ನುವಾಕೆ ಆತನಿಗೆ ಅಂಟಿಕೊಂಡಂತೆ ನಿಂತು ೯೦ ಸೆಕೆಂಡಿನೊಳಗಿನ ವಿಡಿಯೋ ಒಂದನ್ನು ಮಾಡಿ ನಂತರ ಅದಕ್ಕೆ ‘ಲೈಂಗಿಕ ಕಿರುಕುಳದ ಕುರಿತು ಜಾಗೃತರಾಗಿ’ ಎಂದು ವಾಯ್ಸ್ ಓವರ್ ಕೊಟ್ಟು ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಳ್ಳುತ್ತಾಳೆ. ಅದು ಯಾವ ಪರಿಯಾಗಿ ವೈರಲ್ ಆಗುತ್ತದೆಯೆಂದರೆ ದೀಪಕ್‌ನ ಚಾರಿತ್ರ್ಯಹರಣ ಮಾಡುವಂತಹ ಕಮೆಂಟ್‌ಗಳು ಬರತೊಡಗುತ್ತವೆ. ಬಹಳಷ್ಟು ಜನರ ಜಾಲತಾಣದ ಖಾತೆಗಳಲ್ಲಿ ಹಂಚಿಕೆಯಾಗುತ್ತದೆ. ಈ ಅವಮಾನ ಸಹಿಸಿಕೊಳ್ಳಲಾಗದೆ ದೀಪಕ್ ನೇಣಿಗೆ ಶರಣಾಗುತ್ತಾನೆ.

ಕಾರಣ ತಿಳಿದಾಗ ಕೇರಳವನ್ನೂ ಸೇರಿಸಿಕೊಂಡಂತೆ ಇಡೀ ದೇಶದ ಜನತೆ ಶಿಂಜಿಯಾ ವಿರುದ್ಧ ತಿರುಗಿ ಬೀಳುತ್ತದೆ. ಆಕೆಯನ್ನು ಬಂಧಿಸುವಂತೆ ಸಾರ್ವಜನಿಕರು ಮನವಿ ಮಾಡುತ್ತಾರೆ. ಆಕೆಯನ್ನು ಬಂಽಸಿದ್ದೂ ಆಯಿತು. ಆದರೆ ‘ಅಡಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು’ ಎಂಬ ಗಾದೆ ಮಾತಿನಂತೆ ಶಿಂಜಿಯಾಳ ಕ್ರೀಪ್ ವಿಡಿಯೋ ದಾಹಕ್ಕೆ ಬಲಿಯಾಗಿದ್ದು ಮಾತ್ರ ದೀಪಕ್ ಎಂಬ ಮುಗ್ಧ ಜೀವ. ಕೇವಲ ಒಂದು ಕ್ರೀಪ್ ವಿಡಿಯೋದಿಂದ ಇಷ್ಟೆಲ್ಲ ಆಯಿತೇ ಎಂದು ಕೇಳಿದರೆ ಖಂಡಿತಾ ಹೌದು.

ಯಾಕೆಂದರೆ ಕ್ರೀಪ್ ವಿಡಿಯೋ ಹುಟ್ಟಿಸುವ ಮಾನಸಿಕ ಒತ್ತಡ, ಭಯದ ಪರಿಣಾಮ ಸಣ್ಣದೇನಲ್ಲ. ‘ಕ್ರೀಪ್’ ಎಂಬುದಕ್ಕೆ ಹರಡುವುದು ಎಂದರ್ಥವಿದ್ದು, ವೈರಲ್ ಮಾಡುವುದಕ್ಕಾಗಿಯೇ ಸೃಷ್ಟಿಸುವ ವಿಡಿಯೋಗಳೂ ಕ್ರೀಪ್ ವಿಡಿಯೋ ಸಾಲಿಗೆ ಸೇರುತ್ತದೆ. ಇಲ್ಲಿ ಹೇಳುವ ವಿಷಯದಲ್ಲಿ ಸತ್ಯ ಇರಲೇಬೇಕೆಂಬ ಕಟ್ಟುಪಾಡಿಲ್ಲ. ವಿಡಿಯೋವನ್ನು ಅತೀ ಹೆಚ್ಚು ಜನರು ವೀಕ್ಷಿಸುವುದಷ್ಟೇ ಉದ್ದೇಶವಾಗಿರುತ್ತದೆ. ಒಮ್ಮೆ ಇಂತಹ ವಿಡಿಯೋ ಪೋಸ್ಟ್ ಮಾಡಿಬಿಟ್ಟರೆ ಅಲ್ಲಿಗೆ ಕೆಲಸ ಮುಗಿಯಿತು. ನಂತರ ಜಾಲತಾಣಗಳಲ್ಲಿ ವಿಡಿಯೋ ವೀಕ್ಷಿಸುವವರು ಲೈಕ್ಸ್, ಕಮೆಂಟ್ಸ್, ಶೇರ್ ಮಾಡಿದಷ್ಟು ಜನಪ್ರಿಯತೆ ಹೆಚ್ಚುತ್ತಾ ಹೋಗುತ್ತದೆ. ಇಲ್ಲಿ ಜನಪ್ರಿಯತೆಯೇ ಮಾನದಂಡ!

ಇಂತಹ ಕ್ರೀಪ್ ವಿಡಿಯೋಗಳಿಂದ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಅನಾಹುತಗಳ ಪಟ್ಟಿ ಸಣ್ಣದೇನಲ್ಲ. ಶಿಂಜಿಯಾ ಮುಸ್ತಫ ಪ್ರಕರಣವನ್ನೇ ನೋಡುವುದಾದರೆ, ಸ್ತ್ರೀಪರ ಕಾನೂನುಗಳನ್ನು ದಾಳವನ್ನಾಗಿಸಿ ಜಾಗೃತಿ ಮೂಡಿಸುವ ನೆಪದಲ್ಲಿ ಗಂಡಿನ ಮಾನ ಹರಾಜಾಗಿದೆ. ಹೆಣ್ಣು ಗಂಡು ಸಮಾನರು ಎಂಬ ಕಾಲಘಟ್ಟದಲ್ಲಿ ನಾವಿರುವಾಗ ಮಾನಕ್ಕೂ ಸಮಬೆಲೆಯಿದೆ ಎಂಬುದನ್ನು ಮರೆಯುವಂತಿಲ್ಲ. ಹೆಣ್ಣಾಗಲಿ, ಗಂಡಾಗಲಿ ತಪ್ಪು ಯಾರೇ ಮಾಡಿದ್ದರೂ ಒಪ್ಪಿಕೊಳ್ಳುವುದು ಮನುಷ್ಯ ಧರ್ಮವಾಗುತ್ತದೆ

” ರೀಲ್ ಹುಚ್ಚಾಟಕ್ಕೆ ಗಂಭೀರ ವಿಚಾರವೊಂದರ ಎಳೆಯನ್ನು ಉಪಯೋಗಿಸಿಕೊಂಡರೆ ಏನಾಗಬಹುದು ಎಂಬುದಕ್ಕೆ ಒಂದು ನಿದರ್ಶನ ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ನಡೆದ ಪ್ರಕರಣ.”

 

 

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

50 mins ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

2 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

3 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

7 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

8 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

14 hours ago