ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ಕೇವಲ ಆತ್ಮಸುಖಕ್ಕಾಗಿ ಬರೆದವರು. ಇವರ ಬರಹಗಳ ಘಮಲನ್ನು ನಾಡಿನುದ್ದಕ್ಕೂ ಕಾವ್ಯ ರಸಿಕರು ಅನುಭವಿಸಿದ್ದಾರೆ. ಆದರೆ ಇವರ ಬದುಕಿನ ಏಳುಬೀಳುಗಳನ್ನು ಕಂಡವರು ಬಹಳ ಕಡಿಮೆ. ಕೇವಲ ಕಂಡದ್ದು ಮಾತ್ರವಲ್ಲ; ಕಂಡು ಅನಭವಿಸಿದವರು ಕವಿಯ ಮಗ ಕೆ.ಎನ್.ಮಹಾಬಲ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾಗಿರುವ ಮಹಾಬಲ ಅವರ ಪುಸ್ತಕ ‘ನನ್ನ ಅಪ್ಪ ಕೆಎಸ್‌ನ’ ಇಂತಹ ಅಪರೂಪದ ನೆನಪುಗಳ ಹೊತ್ತಗೆ. (ಬಹುರೂಪಿ ಪ್ರಕಾಶನ ದೂರವಾಣಿ: ೭೦೧೯೧೮೨೭೨೯).

‘ಸೋಫಾದ ಕೆಳಗಿತ್ತು ವಾಕಿಂಗ್ ಸ್ಟಿಕ್’ ಎಂಬ ಬರಹದಲ್ಲಿ ಒಂದು ಪ್ರಸಂಗ ಬರುತ್ತದೆ. ಮೈಸೂರಿನಲ್ಲಿ ಮಹಾಬಲ ಅವರ ಮನೆಯಲ್ಲಿ ಕೆ. ಎಸ್.ನ ಅವರ ನಡಿಗೆ ಬೆತ್ತ ಮಿಸ್ ಆಗಿಹೋಯಿತು. ಮಹಾಬಲ ಅವರ ತಮ್ಮ ತಂದೆಗೆ ಮೈಸೂರಿನಿಂದ ಬೆಂಗಳೂರಿಗೆ ಹೋಗುವ ಹಾದಿಯ ಚನ್ನಪಟ್ಟಣದಲ್ಲಿ ಮತ್ತೊಂದು ನಡಿಗೆ ಬೆತ್ತವನ್ನು ಕೊಡಿಸಿದರು. ಸರಿ ಆದರೆ ಕೆ.ಎಸ್.ನ ಅವರಿಗೆ ಇವರ ಮನೆಯಲ್ಲಿ ಉಳಿದುಬಿಟ್ಟ ವಾಕಿಂಗ್ ಸ್ಟಿಕ್ ಬಗೆಗೆ ಮೋಹ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ : ಕೇರಳದ ಸಂತೋಷ್‌ಕುಮಾರ್ ಹೆಸರು ತಳುಕು

ಏಕೆಂದರೆ ಅದು ಕೆ.ವಿ.ಸುಬ್ಬಣ್ಣನವರು ಪ್ರೀತಿಯಿಂದ ಕೆ.ಎಸ್.ನ, ಅವರಿಗೆ ಕೊಟ್ಟಿದ್ದು. ಆ ವಾಕಿಂಗ್ ಸ್ಟಿಕ್ ಸಿಕ್ಕರೂ ಮಹಾಬಲ ಅವರು ಅಪ್ಪನಿಗೆ ಸದಾ ಒಂದು ನೆಪ ಒಡ್ಡಿ ಕೊಡಲಿಲ್ಲ. ಕಾರಣ ಅದರ ಮೇಲೆ ಇವರಿಗೂ ಮೋಹ ಬೆಳೆದುಕೊಂಡಿತ್ತು. ಕೊನೆಗೂ ಕೆ.ಎಸ್.ನ. ಅವರು ಜಾರಿಬಿದ್ದು ಆಸ್ಪತ್ರೆಯಲ್ಲಿ ಇದ್ದಾಗಲೂ ಅದನ್ನು ನೆನಪು ಮಾಡಿಕೊಂಡು ತರಿಸಿಕೊಂಡೇಬಿಟ್ಟರು. ಆ ವಾಕಿಂಗ್ ಸ್ಟಿಕ್ ಮನೆಗೆ ಬಂದ ದಿನ ‘ಲೇ ವಾಕಿಂಗ್ ಸ್ಟಿಕ್ ಬಂತು’ ಎಂದು ಹರ್ಷಪಟ್ಟಿದ್ದರು. ಅಮ್ಮ, ಆಗಲಿ ಗಸಗಸೆ ಪಾಯಸ ಮಾಡೋಣ ಎಂದರು.

ಪಾಯಸಗಳಲ್ಲಿ ಗಸಗಸೆ ಪಾಯಸ ನಮ್ಮ ತಂದೆಯವರಿಗೆ ತುಂಬಾ ಇಷ್ಟವಾದದ್ದು. ನಮ್ಮ ತಂದೆಯವರು ನಿಧನರಾದ ಸಮಯದಲ್ಲೂ ಆ ವಾಕಿಂಗ್ ಸ್ಟಿಕ್ ವಿರಾಜಿಸುತ್ತಿತ್ತು ಎಂದು ಮುಗಿಯುವ ಆ ಬರಹ ನಮಗೇ ಗೊತ್ತಿಲ್ಲದೆ ಒಂದು ನಿಟ್ಟುಸಿರನ್ನು ತರುತ್ತದೆ.

(ಮಂಡ್ಯದ ಲೇಖಕಿ ಶುಭಶ್ರೀಪ್ರಸಾದ್ ಅವರ ಹೊಸ ಪುಸ್ತಕ ‘ಹೊತ್ತಗೆ ಹಿಡಿವ ಹೊತ್ತು’ ಕೃತಿಯಿಂದ. ಪ್ರಕಾಶಕರು: ಪರಿಚಯ ಪ್ರಕಾಶನ.ದೂರವಾಣಿ: ೯೯೧೬೮೯೪೪೧೭ )

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

8 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

10 hours ago