ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ಕೇವಲ ಆತ್ಮಸುಖಕ್ಕಾಗಿ ಬರೆದವರು. ಇವರ ಬರಹಗಳ ಘಮಲನ್ನು ನಾಡಿನುದ್ದಕ್ಕೂ ಕಾವ್ಯ ರಸಿಕರು ಅನುಭವಿಸಿದ್ದಾರೆ. ಆದರೆ ಇವರ ಬದುಕಿನ ಏಳುಬೀಳುಗಳನ್ನು ಕಂಡವರು ಬಹಳ ಕಡಿಮೆ. ಕೇವಲ ಕಂಡದ್ದು ಮಾತ್ರವಲ್ಲ; ಕಂಡು ಅನಭವಿಸಿದವರು ಕವಿಯ ಮಗ ಕೆ.ಎನ್.ಮಹಾಬಲ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾಗಿರುವ ಮಹಾಬಲ ಅವರ ಪುಸ್ತಕ ‘ನನ್ನ ಅಪ್ಪ ಕೆಎಸ್‌ನ’ ಇಂತಹ ಅಪರೂಪದ ನೆನಪುಗಳ ಹೊತ್ತಗೆ. (ಬಹುರೂಪಿ ಪ್ರಕಾಶನ ದೂರವಾಣಿ: ೭೦೧೯೧೮೨೭೨೯).

‘ಸೋಫಾದ ಕೆಳಗಿತ್ತು ವಾಕಿಂಗ್ ಸ್ಟಿಕ್’ ಎಂಬ ಬರಹದಲ್ಲಿ ಒಂದು ಪ್ರಸಂಗ ಬರುತ್ತದೆ. ಮೈಸೂರಿನಲ್ಲಿ ಮಹಾಬಲ ಅವರ ಮನೆಯಲ್ಲಿ ಕೆ. ಎಸ್.ನ ಅವರ ನಡಿಗೆ ಬೆತ್ತ ಮಿಸ್ ಆಗಿಹೋಯಿತು. ಮಹಾಬಲ ಅವರ ತಮ್ಮ ತಂದೆಗೆ ಮೈಸೂರಿನಿಂದ ಬೆಂಗಳೂರಿಗೆ ಹೋಗುವ ಹಾದಿಯ ಚನ್ನಪಟ್ಟಣದಲ್ಲಿ ಮತ್ತೊಂದು ನಡಿಗೆ ಬೆತ್ತವನ್ನು ಕೊಡಿಸಿದರು. ಸರಿ ಆದರೆ ಕೆ.ಎಸ್.ನ ಅವರಿಗೆ ಇವರ ಮನೆಯಲ್ಲಿ ಉಳಿದುಬಿಟ್ಟ ವಾಕಿಂಗ್ ಸ್ಟಿಕ್ ಬಗೆಗೆ ಮೋಹ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ : ಕೇರಳದ ಸಂತೋಷ್‌ಕುಮಾರ್ ಹೆಸರು ತಳುಕು

ಏಕೆಂದರೆ ಅದು ಕೆ.ವಿ.ಸುಬ್ಬಣ್ಣನವರು ಪ್ರೀತಿಯಿಂದ ಕೆ.ಎಸ್.ನ, ಅವರಿಗೆ ಕೊಟ್ಟಿದ್ದು. ಆ ವಾಕಿಂಗ್ ಸ್ಟಿಕ್ ಸಿಕ್ಕರೂ ಮಹಾಬಲ ಅವರು ಅಪ್ಪನಿಗೆ ಸದಾ ಒಂದು ನೆಪ ಒಡ್ಡಿ ಕೊಡಲಿಲ್ಲ. ಕಾರಣ ಅದರ ಮೇಲೆ ಇವರಿಗೂ ಮೋಹ ಬೆಳೆದುಕೊಂಡಿತ್ತು. ಕೊನೆಗೂ ಕೆ.ಎಸ್.ನ. ಅವರು ಜಾರಿಬಿದ್ದು ಆಸ್ಪತ್ರೆಯಲ್ಲಿ ಇದ್ದಾಗಲೂ ಅದನ್ನು ನೆನಪು ಮಾಡಿಕೊಂಡು ತರಿಸಿಕೊಂಡೇಬಿಟ್ಟರು. ಆ ವಾಕಿಂಗ್ ಸ್ಟಿಕ್ ಮನೆಗೆ ಬಂದ ದಿನ ‘ಲೇ ವಾಕಿಂಗ್ ಸ್ಟಿಕ್ ಬಂತು’ ಎಂದು ಹರ್ಷಪಟ್ಟಿದ್ದರು. ಅಮ್ಮ, ಆಗಲಿ ಗಸಗಸೆ ಪಾಯಸ ಮಾಡೋಣ ಎಂದರು.

ಪಾಯಸಗಳಲ್ಲಿ ಗಸಗಸೆ ಪಾಯಸ ನಮ್ಮ ತಂದೆಯವರಿಗೆ ತುಂಬಾ ಇಷ್ಟವಾದದ್ದು. ನಮ್ಮ ತಂದೆಯವರು ನಿಧನರಾದ ಸಮಯದಲ್ಲೂ ಆ ವಾಕಿಂಗ್ ಸ್ಟಿಕ್ ವಿರಾಜಿಸುತ್ತಿತ್ತು ಎಂದು ಮುಗಿಯುವ ಆ ಬರಹ ನಮಗೇ ಗೊತ್ತಿಲ್ಲದೆ ಒಂದು ನಿಟ್ಟುಸಿರನ್ನು ತರುತ್ತದೆ.

(ಮಂಡ್ಯದ ಲೇಖಕಿ ಶುಭಶ್ರೀಪ್ರಸಾದ್ ಅವರ ಹೊಸ ಪುಸ್ತಕ ‘ಹೊತ್ತಗೆ ಹಿಡಿವ ಹೊತ್ತು’ ಕೃತಿಯಿಂದ. ಪ್ರಕಾಶಕರು: ಪರಿಚಯ ಪ್ರಕಾಶನ.ದೂರವಾಣಿ: ೯೯೧೬೮೯೪೪೧೭ )

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

21 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

45 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

53 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

3 hours ago