ಹಾಡು ಪಾಡು

ದೇವರಾಜಣ್ಣನ ಶಿವಶಕ್ತಿ ಸೌಂಡು

ಮಧುಕರ ಎಂ.ಎಲ್.

ನಮ್ಮ ಬಾಲ್ಯದಲ್ಲಿ ಊರಿನಲ್ಲಿ ಮದುವೆ ಹಬ್ಬಹರಿದಿನಗಳಲ್ಲಿ ಮೈಕ್ ಸೌಂಡ್ಸ್ ಬರುತ್ತದೆಯೆಂಬ ಸುದ್ದಿ ಕಿವಿಗೆ ಬಿದ್ದರೆ ಯಾವ ಮೈಕ್ ಸೆಟ್ ಬರುತ್ತಿದೆಯೆಂಬ ಕುತೂಹಲ ನಮಗೆ. ಆ ದಿನ ಬಸ್‌ನ ಹಾದಿ ಕಾಯುವುದೇ ಒಂದು ಚೆಂದ. ಯಾವುದೇ ವಾಹನ ದೂರದಲ್ಲಿ ಬಂದರೂ ಅದು ಬಸ್ ಎಂಬ ಆಸೆಯಿಂದ ಕೂಗುವುದು, ಬಸ್ ಬಂದಾಗ ಅಂಪ್ಲಿಫೈಯರ್ ಹಾಗೂ ಸೌಂಡ್ ಬಾಕ್ಸ್ ಹೊತ್ತು ತರಲು ನಮ್ಮ ಗೆಳೆಯರ ಗುಂಪಿಗೆ ಪೈಪೋಟಿ. ಅವುಗಳನ್ನು ಮದುವೆ ಮನೆಗೆ ತಂದಿಟ್ಟು, ಮೈಕ್‌ನವರಿಗೆ ಬೇಕಾದ ಸಹಾಯವನ್ನು ಮಾಡುವುದೇ ಒಂದು ಹಬ್ಬ. ಇನ್ನು ಎರಡು ದಿನಗಳ ಕಾಲ ನಮ್ಮ ಮೆಚ್ಚಿನ ನಟನ ಹಾಡುಗಳು, ಭಕ್ತಿಗೀತೆಗಳನ್ನು ಕೇಳಬಹುದೆಂಬ ಖುಷಿ. ಹೊಸ ಹಾಡು ಯಾವುದು ಇದೆಯೆಂದು ಆ ಕ್ಯಾಸೆಟ್ಗಳ ಮೇಲೆ ನಮ್ಮ ಕಣ್ಣು ನೆಟ್ಟಿರುತ್ತಿತ್ತು.

ಮನೆಗೆ ಹೋಗಿ ಅಪ್ಪ-ಅಮ್ಮನ ಪರ್ಮಿಷನ್ ಪಡೆದುಕೊಂಡು ಎರಡು ದಿನಗಳೂ ಅಲ್ಲೇ ಮಲಗುವುದಕ್ಕಾಗಿ ಗೋಣಿಚೀಲ, ಕಂಬಳಿಯನ್ನು ಸಿದ್ಧಪಡಿಸುತ್ತಿದ್ದೆವು. ಮೈಕ್ ಸೆಟ್ ಅಣ್ಣ ಊಟಕ್ಕೆ ಹೋಗುವಾಗ ‘ನಾ ನೋಡ್ಕತೀನಿ ಹೋಗಣ್ಣ’ ಎಂದು ಉಸ್ತುವಾರಿ ಮಾಡುತ್ತಿದ್ದೆವು. ಮಜಾ ಎಂದರೆ ನಮಗಿಂತ ಹರೆಯದ ಹುಡುಗ-ಹುಡುಗಿಯರು, ತಮ್ಮ ಮೆಚ್ಚಿನ ಹಾಡು ಕೇಳಲು ‘ಆ ಕ್ಯಾಸೆಟ್ ಹಾಕ್ಸು’ ಎಂದು ಲಂಚವಾಗಿ ಮಿಠಾಯಿ ಕೊಡಿಸಿದ್ದೂ ಇದೆ. ಎಲ್ಲಾ ಮುಗಿದ ಮೇಲೆ ಮತ್ತೆ ಲಗೇಜ್ ಹೊತ್ತು ಬಸ್‌ಗೆ ಹಾಕುತ್ತಿದ್ದೆವು. ಕ್ಯಾಸೆಟ್‌ನ ಮೇಲಿದ್ದ ನಮ್ಮ ಮೆಚ್ಚಿನ ನಟನ ಚಿತ್ರವೊಂದನ್ನು ಲಪಟಾಯಿಸುತ್ತಿದ್ದೆವು. ಆ ಚಿತ್ರ ಹರಿದು ಚಿಂದಿಯಾಗುವ ತನಕ ನಮ್ಮ ಚೆಡ್ಡಿ ಜೇಬಿನಲ್ಲಿ ಇರುತ್ತಿತ್ತು. ಆ ಪಿಕ್ಚರ್ ಚಿತ್ರಮಂದಿರಕ್ಕೆ ಯಾವಾಗ ಬರುವುದೋ? ನಾವು ಯಾವಾಗ ಹಾಡನ್ನು ನೋಡುತ್ತೇವೆಯೋ ಎಂಬ ಆಸೆ ಹೆಚ್ಚುತ್ತಿತ್ತು.

ಹಳೆಯ ದಿನಗಳು ಮತ್ತೆ ನೆನಪಾಗಲು ಕಾರಣವಿದೆ. ಯಳಂದೂರಿನ ಬಸ್ ನಿಲ್ದಾಣದಲ್ಲಿ ‘ಶಿವಶಕ್ತಿ’ ಎಂಬ ಸೌಂಡ್ಸ್ ಇದೆ. ಹಳೆಯ ಕಾಲದ ಎಲ್ಲಾ ರೀತಿಯ ಸಿಸ್ಟಂಗಳು ತುಂಬಿರುವ ರಿಪೇರಿ ಅಂಗಡಿ ಅದು. ೪೦ ವರ್ಷಗಳ ಹಿಂದಿನ ಹಾಡುಗಳನ್ನು ಅಲ್ಲಿ ಕೇಳಬಹುದು. ಅಂಗಡಿಯ ಮಾಲೀಕರ ಹೆಸರು ದೇವರಾಜಣ್ಣ. ಹತ್ತನೇ ತರಗತಿ ತನಕ ವಿದ್ಯಾಭ್ಯಾಸ. ಮನೆಯ ಬಡತನಕ್ಕೆ ಮೈಕ್ ಅಂಗಡಿಗೆ ಕೆಲಸಕ್ಕೆ ಸೇರಿಕೊಂಡು ಆಗಿನ ಕಾಲಕ್ಕೆ ಸುತ್ತ ಮುತ್ತಲಿನ ಹಳ್ಳಿಗಳಿಗೆ ಫೇಮಸ್ ಸೌಂಡ್ಸ್ ಅಂಗಡಿಯಾಗಿತ್ತು. ಎಲ್ಲಾ ಕೌಶಲಗಳನ್ನೂ ಕಲಿತು ತನ್ನದೇ ಸ್ವಂತ ಅಂಗಡಿಯನ್ನ ತೆರೆದು, ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕ್ ಕೆಲಸ ಕಲಿತು ಹಲವರಿಗೆ ಕಲಿಸಿದ್ದಾರೆ. ಅವರ ಸಂಗ್ರಹದಲ್ಲಿ ೩,೫೦೦ ಹಾಡುಗಳಿವೆ. ಪ್ಲೇಟ್, ಕ್ಯಾಸೆಟ್, ಡಿಸ್ಕ್, ಮೆಮೊರಿm ಚಿಪ್ಪುಗಳು… ಹೀಗೆ ತರಹೇವಾರಿ ಸಾಧನಗಳಿವೆ. ‘ರಿಪೇರಿ ಕೆಲಸ ಹೇಗಿದೆ?’ ಕೇಳಿದೆ. “ಒಂದು ಕಾಲದಲ್ಲಿ ಬಾಂಬೆ, ದೆಹಲಿಗೆ ಹೋಗಿ ಬಂದಿದ್ದೇನೆ. ರಿಪೇರಿಗೆ ಬೇಕಾದ ಕಚ್ಚಾ ಸಾಮಾನುಗಳನ್ನು ತಂದು ನಾನೇ ತಯಾರಿಸುತ್ತಿದ್ದೆ.

ರಿಪೇರಿಗೆಂದು ತಮಿಳುನಾಡು, ಕೇರಳದ ಗಡಿಯಿಂದ ಗ್ರಾಹಕರು ಬರುತ್ತಾರೆ. ಈಗ ಶಕ್ತಿ ಕಡಿಮೆಯಾಗಿದೆ, ಸಣ್ಣಪುಟ್ಟ ರಿಪೇರಿ ಮಾಡಿ ಕಾಲ ಕಳೆಯುತ್ತೇನೆ. ಸಾ ನಂಗೆ ಹಣಕಾಸು ಇದ್ದರೆ ಶಿವಶಕ್ತಿ ಅನ್ನುವ ಒಂದು ದೊಡ್ಡ ಕಂಪೆನಿಯನ್ನೇ ಮಾಡ್ತಾಯಿದ್ದೆ. ಡಿಜೆ ಎಫೆಕ್ಟನ್ನು ನಾನು ಆಗಲೇ ಕೊಡ್ತಿದ್ದೆ. ಈಗ ಈ ಸಣ್ಣ ಅಂಗಡಿಯಲ್ಲೇ ಬದುಕು ಸಾಗ್ತಾಯಿದೆ. ಜೊತೆಗೆ ಸಣ್ಣಪುಟ್ಟ ರೋಗಕ್ಕೆ ನಾಟಿ ಔಷಧಿ ನೀಡುತ್ತೇನೆ. ನನ್ನ ಮಕ್ಕಳು ಕೂಡ ಚೆನ್ನಾಗಿ ಓದಿ, ಅವರವರ ಬದುಕನ್ನು ಕಟ್ಟಿಕೊಂಡಿದ್ದಾರೆ. ಇಷ್ಟೇ ನನ್ನ ಪ್ರಪಂಚ” ಎಂದು ಸಾರ್ಥಕದ ನಗು ಬೀರಿದರು.

” ಯಳಂದೂರಿನ ಬಸ್ ನಿಲ್ದಾಣದಲ್ಲಿರುವ ಹಳೆಯ ಕಾಲದ ಎಲ್ಲಾ ರೀತಿಯ ಸಿಸ್ಟಂಗಳು ತುಂಬಿರುವ ರಿಪೇರಿ ಅಂಗಡಿ ಇದು. ಹಲವು ದಶಕಗಳ ಹಿಂದಿನ ಹಾಡುಗಳನ್ನೂ ನೀವು ಇಲ್ಲಿ ಕೇಳಬಹುದು.”

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago