ಇವರು ಬುಡಬುಡಿಕೆಯ ಕುನ್ನಪ್ಪ ಅಲಿಯಾಸ್ ಹನುಮಂತಪ್ಪ. ಕಳೆದ ಎರಡು ಮೂರು ವರ್ಷಗಳಿಂದ ಮೈಸೂರಿನ ಬೀದಿಗಳಲ್ಲಿ ಶಕುನ ಹೇಳುತ್ತ ನಡೆಯುತ್ತಿದ್ದಾರೆ. ಇರುಳ ಹೊತ್ತಲ್ಲಿ ಜಂಟಿಯಾಗಿ ಹಾಲಕ್ಕಿ ಶಕುನ, ಹಗಲು ಹೊತ್ತಲ್ಲಿ ಒಂಟಿಯಾಗಿ ಬುಡಬುಡಿಕೆಯ ಶಾಸ್ತ್ರ ಹೇಳುವುದು ಇವರ ತಲೆತಲಾಂತರದ ವೃತ್ತಿ. ಕಯ್ಯ ತುದಿಯ ಕರ್ಚೀಫಿಗೆ ಕಟ್ಟಿರುವ ಡಮರುಗದಲ್ಲಿ ನೆಲೆಸಿರುವ ತನ್ನ ಕುಲದೇವತೆಯಆಣತಿಯಂತೆ ನಡೆಯುವ ಇವರು ತಮ್ಮ ಶಾಸ್ತ್ರ ಹೇಳುವ ವಿದ್ಯೆಯನ್ನು ಹೊಟ್ಟೆಪಾಡಿಗೆ ಅಂತ ಅಂದುಕೊಂಡಿಲ್ಲ. ಒಂದು ಕಾಲದಲ್ಲಿ ಜಾನಪದ ವೈದ್ಯರಂತೆ, ಪಾರಂಪರಿಕ ಆಪ್ತ ಮನೋಸಲಹೆಗಾರರಂತೆ ಎಲ್ಲರ ಗೌರವ ಪಡೆದುಕೊಂಡೇ ಬದುಕುತ್ತಿದ್ದ ಇವರು ಈ ಕಾಲದಲ್ಲಿ ಹಲವರಿಗೆ ಪಳೆಯುಳಿಕೆಯಂತೆ, ಭಿಕ್ಷಾಟನೆಯವರಂತೆ ಕಾಣಿಸುತ್ತಾರೆ. ಆದರೆ ಇವರ ಮೂಲ ಇರುವುದು ಮಹಾಭಾರತದ ಕಾಲದ ಕೃಷ್ಣನ ಕಥೆಯಲ್ಲಿ ಎಂದು ಈ ಕಾಲದಲ್ಲಿ ಬದುಕುತ್ತಿರುವ ನಮಗೆ ಗೊತ್ತಿಲ್ಲ. ಬುಡಬುಡಿಕೆಯ ಹನುಮಂತಪ್ಪನವರಿಗೆ ಈ ಕುರಿತು ಬೇಸರವೂ ಇಲ್ಲ.
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…