ಹಾಡು ಪಾಡು

ಹಸಿರ ನಡುವಿನ ಮಳೆಯ ಫ್ಯಾಂಟಸಿ

ಮಹಾರಾಷ್ಟ್ರದ ಮಾಲ್ಶೇಜ್

ಸಿನಿಮಾದಲ್ಲಿ ತೋರಿಸುವ ಫ್ಯಾಂಟಸಿ ಲೋಕ ಕಣ್ಣೆದುರು ನಿಂತುಬಿಟ್ಟರೆ ಹೇಗೆನಿಸಬಹುದು? ನಿಸರ್ಗ ಸೃಷ್ಟಿಸಿದ ಬೆರಗನ್ನು ಕಣ್ಣ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ, ಹನಿ ಮಳೆಯನ್ನು ಕಾಣುವುದಕ್ಕಾಗಿ ಮಹಾರಾಷ್ಟ್ರದ ಮಾಲ್ಶೇಜ್‌ಗೆ ಪಯಣ ಹೊರಟೆವು.

ಮಧ್ಯಾಹ್ನದ ಎರಡರ ಹೊತ್ತಾಗಿದೆಯೆಂದು ಗಡಿಯಾರವಷ್ಟೇ ಹೇಳುತ್ತಿತ್ತು. ಮಾಲ್ಶೇಜ್ ಘಟ್ಟ ಮಾತ್ರ ಮುಂಜಾವಿನಲ್ಲೇ ಮುಳುಗಿತ್ತು. ಬೀಸಿದ ಗಾಳಿ ನೀರು ಚಿಮುಕಿಸುತ್ತಿತ್ತು. ನೋಡನೋಡುತ್ತಲೇ ಮಳೆ ಶುರುವಾಗೇಬಿಟ್ಟಿತು! ಕೋವಿಯಂತೆ ಉದ್ದವಿದ್ದ ಕೋಲಿಗಿಂತ ತುಸು ದಪ್ಪವಿದ್ದ ‘ಕಾಸ್ಟ್ಲಿ’ ಕೊಡೆಯನ್ನು ಬಿಡಿಸಿ, ಕಂಬವನ್ನು ಆಶ್ರಯಿಸಿದಂತೆ ಅಪ್ಪಿಹಿಡಿದು ಹೆಜ್ಜೆ ಹಾಕಿದೆವು. ಜಿಟಿ ಜಿಟಿ ಮಳೆಯಲ್ಲಿ ಆ ಘಟ್ಟದಲ್ಲಿ ಕೊಡೆ ಹಿಡಿದು ನಡೆವ ನಡಿಗೆ ಇದೆಯಲ್ಲಾ, ಆಹಾ! ಮನಸ್ಸಿಗೂ ಮಂಜಿಗೂ ಪ್ರೀತಿಯ ಸಮರ. ಸುತ್ತಣ ಹಸಿರನ್ನೊಮ್ಮೆ ನೋಡಬೇಕೆಂಬ ಮನಸ್ಸನ್ನು ಮಂಜು ಅದೆಷ್ಟು ಸತಾಯಿಸುತ್ತದೆ! ಅತ್ತ ಮಳೆ ನಿಲ್ಲುವುದಿಲ್ಲ, ಇತ್ತ ಕವಿದ ಮಂಜು ಕರಗುವುದಿಲ್ಲ.

ತಂಪು ಹವೆ, ಮೈಗಂಟುವ ಚಳಿಯ ನಡುವೆ ಮಳೆಯ ರಭಸಕ್ಕೆ ಹಿಡಿದ ಕೊಡೆಯೇ ನೃತ್ಯ ಮಾಡುವ ಪ್ರಸಂಗವಂತೂ ಅಲ್ಲಿ ಸಾಮಾನ್ಯ. ಹಾಗೇ ಅಲ್ಲಲ್ಲಿ ಪುಟ್ಟ ಪುಟ್ಟ ಝರಿಗಳು ಕಾಣುತ್ತವೆ. ಕತ್ತು ಮೇಲೆತ್ತಿದರೆ ಬಂಡೆಯ ನಡುವೆ’ ಇದು ನನ್ನ ದಾರಿ’ ಎನ್ನುತ್ತಾ ಬೆಡಗು ಬಿನ್ನಾಣದಿಂದ ಹರಿವ ಝರಿಗಳವು. ಬಂಡೆಯ ಕೆಲ ಕಡೆಗಳಲ್ಲಿ ಹಸಿರು ಹಬ್ಬಿತ್ತು. ಒಂದಷ್ಟು ದೂರ ನಡೆದ ಮೇಲೆ ಮಳೆಯೊಂದಿಗೆ ನಡೆಯೋಣ ಅನಿಸಿತು. ಅಷ್ಟು ಹೊತ್ತಿಗಾಗಲೇ ತೊಟ್ಟ ಬಟ್ಟೆಗಳೆಲ್ಲ ಮುಕ್ಕಾಲು ಭಾಗ ಒದ್ದೆಯಾಗಿತ್ತು. ಮಳೆಯಲ್ಲಿ ನೆನೆಯಬೇಕು, ಆದರೆ ಬಟ್ಟೆ ಒದ್ದೆಯಾಗಬಾರದು ಎಂಬ ವಿಚಿತ್ರ ಲಾಜಿಕ್ ನಮ್ಮದು. ಹಾಗಾಗಿ ಮಳೆಯ ಸಲುವಾಗಿಯೇ ಬ್ಯಾಗಿನಲ್ಲಿದ್ದ ರೈನ್‌ಕೋಟ್ ತೊಟ್ಟು, ಕೊಡೆ ಮಡಚಿಟ್ಟು ನಡೆದೆವು.

ಮಾಲ್ಶೇಜ್ ಘಟ್ಟದ ಪಕ್ಕವಿರುವ ಬಂಡೆಯ ತುದಿ ತಾಕಿ ಬರುವ ಮಳೆಯ ದಪ್ಪ ಹನಿಗಳು ಬಿದ್ದೊಡನೆ ಕಲ್ಲೇ ಬಿದ್ದಂತ ಅನುಭವ. ನಮ್ಮಂತೆ ಅದೆಷ್ಟೋ ಮಂದಿ ಮಳೆಯಲ್ಲಿ ನೆನೆಯುತ್ತಾ ಸಂಭ್ರಮಿಸುತ್ತಿದ್ದರು. ಕಂಡರೆ ಕಾಣದಂತಿರುವ ಹಸಿರು, ಎಲ್ಲಿಂದಲೋ ಧುತ್ತೆಂದು ಬಂದು ನಿಂತ ಮಂಜು, ಬೆನ್ನಿಗೆ ಬಡಿಯುತ್ತಿರುವ ಕಲ್ಲು ಮಳೆ? ಸೃಷ್ಟಿಯ ಸೌಂದರ್ಯ ಸಹಜ ಸುಂದರ.

ಕೀರ್ತಿ ಬೈಂದೂರು  ( keerthisba2018@gmail.com )

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

41 mins ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 hour ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago