malthej trip
ಮಹಾರಾಷ್ಟ್ರದ ಮಾಲ್ಶೇಜ್
ಸಿನಿಮಾದಲ್ಲಿ ತೋರಿಸುವ ಫ್ಯಾಂಟಸಿ ಲೋಕ ಕಣ್ಣೆದುರು ನಿಂತುಬಿಟ್ಟರೆ ಹೇಗೆನಿಸಬಹುದು? ನಿಸರ್ಗ ಸೃಷ್ಟಿಸಿದ ಬೆರಗನ್ನು ಕಣ್ಣ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ, ಹನಿ ಮಳೆಯನ್ನು ಕಾಣುವುದಕ್ಕಾಗಿ ಮಹಾರಾಷ್ಟ್ರದ ಮಾಲ್ಶೇಜ್ಗೆ ಪಯಣ ಹೊರಟೆವು.
ಮಧ್ಯಾಹ್ನದ ಎರಡರ ಹೊತ್ತಾಗಿದೆಯೆಂದು ಗಡಿಯಾರವಷ್ಟೇ ಹೇಳುತ್ತಿತ್ತು. ಮಾಲ್ಶೇಜ್ ಘಟ್ಟ ಮಾತ್ರ ಮುಂಜಾವಿನಲ್ಲೇ ಮುಳುಗಿತ್ತು. ಬೀಸಿದ ಗಾಳಿ ನೀರು ಚಿಮುಕಿಸುತ್ತಿತ್ತು. ನೋಡನೋಡುತ್ತಲೇ ಮಳೆ ಶುರುವಾಗೇಬಿಟ್ಟಿತು! ಕೋವಿಯಂತೆ ಉದ್ದವಿದ್ದ ಕೋಲಿಗಿಂತ ತುಸು ದಪ್ಪವಿದ್ದ ‘ಕಾಸ್ಟ್ಲಿ’ ಕೊಡೆಯನ್ನು ಬಿಡಿಸಿ, ಕಂಬವನ್ನು ಆಶ್ರಯಿಸಿದಂತೆ ಅಪ್ಪಿಹಿಡಿದು ಹೆಜ್ಜೆ ಹಾಕಿದೆವು. ಜಿಟಿ ಜಿಟಿ ಮಳೆಯಲ್ಲಿ ಆ ಘಟ್ಟದಲ್ಲಿ ಕೊಡೆ ಹಿಡಿದು ನಡೆವ ನಡಿಗೆ ಇದೆಯಲ್ಲಾ, ಆಹಾ! ಮನಸ್ಸಿಗೂ ಮಂಜಿಗೂ ಪ್ರೀತಿಯ ಸಮರ. ಸುತ್ತಣ ಹಸಿರನ್ನೊಮ್ಮೆ ನೋಡಬೇಕೆಂಬ ಮನಸ್ಸನ್ನು ಮಂಜು ಅದೆಷ್ಟು ಸತಾಯಿಸುತ್ತದೆ! ಅತ್ತ ಮಳೆ ನಿಲ್ಲುವುದಿಲ್ಲ, ಇತ್ತ ಕವಿದ ಮಂಜು ಕರಗುವುದಿಲ್ಲ.
ತಂಪು ಹವೆ, ಮೈಗಂಟುವ ಚಳಿಯ ನಡುವೆ ಮಳೆಯ ರಭಸಕ್ಕೆ ಹಿಡಿದ ಕೊಡೆಯೇ ನೃತ್ಯ ಮಾಡುವ ಪ್ರಸಂಗವಂತೂ ಅಲ್ಲಿ ಸಾಮಾನ್ಯ. ಹಾಗೇ ಅಲ್ಲಲ್ಲಿ ಪುಟ್ಟ ಪುಟ್ಟ ಝರಿಗಳು ಕಾಣುತ್ತವೆ. ಕತ್ತು ಮೇಲೆತ್ತಿದರೆ ಬಂಡೆಯ ನಡುವೆ’ ಇದು ನನ್ನ ದಾರಿ’ ಎನ್ನುತ್ತಾ ಬೆಡಗು ಬಿನ್ನಾಣದಿಂದ ಹರಿವ ಝರಿಗಳವು. ಬಂಡೆಯ ಕೆಲ ಕಡೆಗಳಲ್ಲಿ ಹಸಿರು ಹಬ್ಬಿತ್ತು. ಒಂದಷ್ಟು ದೂರ ನಡೆದ ಮೇಲೆ ಮಳೆಯೊಂದಿಗೆ ನಡೆಯೋಣ ಅನಿಸಿತು. ಅಷ್ಟು ಹೊತ್ತಿಗಾಗಲೇ ತೊಟ್ಟ ಬಟ್ಟೆಗಳೆಲ್ಲ ಮುಕ್ಕಾಲು ಭಾಗ ಒದ್ದೆಯಾಗಿತ್ತು. ಮಳೆಯಲ್ಲಿ ನೆನೆಯಬೇಕು, ಆದರೆ ಬಟ್ಟೆ ಒದ್ದೆಯಾಗಬಾರದು ಎಂಬ ವಿಚಿತ್ರ ಲಾಜಿಕ್ ನಮ್ಮದು. ಹಾಗಾಗಿ ಮಳೆಯ ಸಲುವಾಗಿಯೇ ಬ್ಯಾಗಿನಲ್ಲಿದ್ದ ರೈನ್ಕೋಟ್ ತೊಟ್ಟು, ಕೊಡೆ ಮಡಚಿಟ್ಟು ನಡೆದೆವು.
ಮಾಲ್ಶೇಜ್ ಘಟ್ಟದ ಪಕ್ಕವಿರುವ ಬಂಡೆಯ ತುದಿ ತಾಕಿ ಬರುವ ಮಳೆಯ ದಪ್ಪ ಹನಿಗಳು ಬಿದ್ದೊಡನೆ ಕಲ್ಲೇ ಬಿದ್ದಂತ ಅನುಭವ. ನಮ್ಮಂತೆ ಅದೆಷ್ಟೋ ಮಂದಿ ಮಳೆಯಲ್ಲಿ ನೆನೆಯುತ್ತಾ ಸಂಭ್ರಮಿಸುತ್ತಿದ್ದರು. ಕಂಡರೆ ಕಾಣದಂತಿರುವ ಹಸಿರು, ಎಲ್ಲಿಂದಲೋ ಧುತ್ತೆಂದು ಬಂದು ನಿಂತ ಮಂಜು, ಬೆನ್ನಿಗೆ ಬಡಿಯುತ್ತಿರುವ ಕಲ್ಲು ಮಳೆ? ಸೃಷ್ಟಿಯ ಸೌಂದರ್ಯ ಸಹಜ ಸುಂದರ.
ಕೀರ್ತಿ ಬೈಂದೂರು ( keerthisba2018@gmail.com )
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…