ಹಾಡು ಪಾಡು

ಎರಿಯೂರಿಂದ ಬರುವ ಸೊಪ್ಪಿನ ಗುಂಡಮ್ಮ

• ಮಧುಕರ ಮಳವಳ್ಳಿ

ತನ್ನ ಬಟ್ಟೆಯ ಚೀಲದಲ್ಲಿ ಬೆರಕೆ ಸೊಪ್ಪಿನ ರಾಶಿಯನ್ನೇ ತುಂಬಿ ತುಳುಕಿಸಿಕೊಂಡು ಬರುವ ಈಕೆ ಒಮ್ಮೊಮ್ಮೆ ಬಿದಿರಿನ ಕಳಲೆ, ಕೆಲವೊಮ್ಮೆ ಕಾಡಿನ ಹೂಗಳನ್ನೂ ತರುವಳು.

ಈ ಮಳೆಗಾಲ ಮತ್ತು ಆಷಾಢದ ಕಾಲದಲ್ಲಿ ಅದರಲ್ಲೂ ನೀರು ಹರಿಯುವ ಕಾಲುವೆಯ ಬಳಿ ಬೆಳೆಯುವ ತಾವರೆಗೆಣಸು (ಇದು ಅಂಬಿನ ರೀತಿಯಲ್ಲಿ ಬೆಳೆದಿರುತ್ತದೆ. ಅದನ್ನು ಕತ್ತರಿಸಿದರೆ ಬೆಂಡೆಕಾಯಿಯಂತೆ ಇರುತ್ತೆ), ಕೊಹ್ಲಿ ಗೆಡ್ಡೆ (ಕಾರಣ ಅದು ಬೆಕ್ಕಿನ ತಲೆಯಂತೆ ಇರುವ ಕಾರಣ ಇದನ್ನ ಕೊತ್ತಿಗೆಡ್ಡೆ ಎನ್ನುವುದು ಎಂದು ಹೇಳುತ್ತಾಳೆ). ಆಷಾಢ ಕಾಲ ಬಲುಮುಖ್ಯವಾಗಿ ನುಗ್ಗೇಸೊಪ್ಪು ಮತ್ತು ಒಂದೆಲಗ (ಇದನ್ನು ಜನಪದರು ತಿಮಿರೆಯೆಂದು ಕರೆಯುವರು) ಮದುವೆಯಾದ ಹೆಣ್ಣು ಮಕ್ಕಳು ಗರ್ಭಧಾರಣಿಯಾಗುವ ಕಾಲಕ್ಕೆ ಮಗುವಿನ ಬುದ್ದಿ ಚಂದಾಗಿ ಇರಲಿ ಎಂಬ ಆಸೆಯಂತೆ. ಮತ್ತೆ ನೂರು ತರಹದ ಸೊಪ್ಪುಗಳನ್ನು ಬಳಸಿ ಸಾರು ಮಾಡುವುದು ವಾಡಿಕೆ. ಹಾಗೆಯೇ ಉದ್ದಿನ ಕಡಬು, ದೋಸೆಗಳಿಗೆ ಈ ಒಂದೆಲಗ ಸೊಪ್ಪನ್ನು ಬಳಸಿ ಮಾಡಿಕೊಡುವುದು ಹೆಣ್ಣುಬಲವಾಗಿ ಇರಲಿ ಅಂತ. ಅದರ ಜೊತೆಗೆ ತುಪ್ಪ ಬೆಣ್ಣೆ ಇದ್ದರೆ ಒಳ್ಳೆಯದು ಎಂದು ತನ್ನಲ್ಲಿರುವ ನಾವು ಶಾಲೆಯಲ್ಲಿ ಕಲಿತ ಮೆದುಳಿನ ಚಿತ್ರದಂತೆ ಇರುವ ಒಂದೆಲಗ ಸೊಪ್ಪನ್ನು ತೋರುವಳು. ಕೀರೆಸೊಪ್ಪು, ಕೀರೆಬೇರು, ನೆಲಗುಂಟೆ, ಅಗಸೆ, ಅಣ್ಣೆಸೊಪ್ಪು, ಗರಿಕೆ ಹಾಲಿನಸೊಪ್ಪು, ಹುತ್ತು ಅಣಬೆ, ಗಣಿಕೆ, ಬಗರ್ ಒಂಟೆ, ಕಲ್ಲಕರಗ, ಹಾಲೇ ಸೊಪ್ಪು, ನಾರಂಬಳ ಗೋಣಿ, ಜಾಲಿ ಸೀಗೆಸೊಪ್ಪು, ಮುಳ್ಳುರೆ, ಗೊರಜ ಸೊಪ್ಪು… ಹೀಗೆ ತನಗೆ ತಿಳಿದಿರುವ ಎಲ್ಲಾ ಸೊಪ್ಪುಗಳ ಕುರಿತು ಹೇಳುತ್ತಾಳೆ.

‘ನೋಡು ಕೂಸೆ… ಈ ಬಗರ್‌ ಒಂಟೆ ಸೊಪ್ಪು ಬೇಳೆಕಾಳು ಜೊತೆಗೆ ಸೀಗಡಿ, ಕರಿಮೀನು, ಅವರೆ ಕಾಳು ಹಾಕಿ ಬಾಣಂತಿಗೆ ಕೊಟ್ಟರೆ ಈ ಕಾಲಕ್ಕೆ ದೇಹ ಶಾಖವಾಗುತ್ತದೆ. ಹೀಗೆ ಮತ್ತೊಂದು ಕಿರುನೆಲ್ಲಿಸೊಪ್ಪು ಔಷಧಿ ಗುಣ ಹೊಂದಿದೆ, ಹೊಟ್ಟೆ ಸರಿಮಾಡುತ್ತದೆ’ ಎಂದು ಬೆರಕೆಸೊಪ್ಪಿನ ಮಹತ್ವ ಹೇಳುತ್ತಾಳೆ. ‘ಬಿದಿರನ ಕಳಲೆ ಎಲ್ಲ ವಿಚಾರಕ್ಕೂ ರಾಮಬಾಣ ಅದರಲ್ಲೂ ಹೊಸದಾಗಿ ಮದುವೆಯಾದ ಗಂಡುಗೆ ಇದಾ ಕೊಡಬೇಕು ತಿಂದು ಮೈ ಬೆಂಕಿಕೆಂಡ ಆಗಬೇಕು’ ಎನ್ನುತ್ತಾ ಕಿರುನಗೆ ಬೀರುತ್ತಾಳೆ. ‘ಕೂಸೇ, ಮಂಟೇಸ್ವಾಮಿಗಳೇ ಹೇಳವರೆ ಆಣೇಸೊಪ್ಪು ಬಡವರದು ಅಂತ. ಹಂಗೆ ಚಳಿಗಾಲಕ್ಕೆ ಕಡಲೆಸೊಪ್ಪಿನ ಜೊತೆಗೆ ಬೇಳೆಕಾಳು ಹಾಕಿ ಸಾರು ಮಾಡಿದ್ರೆ ಈ ದೇಹವಾ ಶಾಖವಾಗಿ ಇಡುತ್ತದೆ’ ಅನ್ನುತ್ತಾಳೆ.

‘ಹಂಗೇ ಈ ಆಷಾಢದ ಕಾಲದಲ್ಲಿ ಹೆಣ್ಣು ಪ್ರಾಯಕ್ಕೆ ಬಂದರೆ, ಅವಳಿಗೆ ಮೊದಲನೇ ಸ್ನಾನಕ್ಕೆ ನೇರಳೆ, ಮಾವು, ಬೇವು, ಅತ್ತಿ, ದಾಸವಾಳ, ಶ್ರೀಗಂಧ ಇವುಗಳ ಬಲಿತ ಎಲೆಗಳನ್ನು ತಂದು ನೀರಿನಲ್ಲಿ ಹಾಕಿ ಬಿಸಿ ನೀರಕಾಯಿಸಿ ಅದರಲ್ಲಿ ಸ್ನಾನ ಮಾಡಿಸಿ ಕೊನೆಗೆ ಅರಿಸಿನದಲ್ಲಿ ಜಳಕ ಮಾಡಿ ಆರತಿ ಮಾಡುತ್ತಿದ್ದರು. ಆದರೆ ಅದೆಲ್ಲ ಈಗ ಎಲ್ಲಿ’ ಎಂದು ನಗೆ ಬೀರುತ್ತಾಳೆ… ‘ಹಂಗೇ ಸ್ಥಾನ ಆದ್ ಮೇಲೆ ಬೆರಕೆ ಸೊಪ್ಪಿಗೆ ಬಾಡು ತಿನ್ನೋ ಜಾತಿಯೋರು ಕೊರ್ ಬಾಡು ಜೊತೆ ಸೀಗಡಿ, ಅವರೆಕಾಳು ಹಾಕಿ ಕೊಟ್ಟರೆ ಎಂಥ ಹೆಣ್ಣು ಒಂದ್ ತಟ್ಟೆ ಅನ್ನ ಉಂಡು ಸುಖ ನಿದ್ದೆ ಮಾಡುತ್ತಾಳೆ’ ಎಂದು ಹಳೆಯವರೆ ನರಸಿಕೊಂಡು ನಸು ನಗುತ್ತಾಳೆ.

‘ಆಮೇಲೆ ಮಾಂಸ ತಿನ್ನೋ ಜಾತಿಯೊಳಗೆ ಅಳಿಯ ಬಂದಾಗ ಎರಡು ದಿನ ಮಾಂಸದ ಅಡುಗೆ ಮಾಡೋರು, ಆಮೇಲೆ ನುಗ್ಗೆಸೊಪ್ಪಿನ ಪಲ್ಯ ದಿನಾ ಕೊಡೋರು, ಯಾಕ ಗೊತ್ತಾ, ದೇಹ ಲಯವಾಗಲಿ ಅಂತ. ಈಗ ಮಕ್ಕಳು ಇನ್ನು ಅಗಲಿಲ್ಲ ಅಂಥ ಏನೂನೋ ಮಾಡುತ್ತಾರೆ ಸ್ಥಾಮಿ ದೇಹ ಲಯವಾಗಿ ಇರಬೇಕು. ಹೆಣ್ಣು-ಗಂಡು ನಾದ-ಲಯವಾಗಿ ಇರಬೇಕು. ಆಗ ಎಲ್ಲ ಸಲೀಸು. ಹಂಗೇ ಚಿರಕುರುಳಿಯ ಬಾಯಾಡಲು ಕೊಡುತ್ತಾ ಇದ್ದರು. ಹುಳ್ಳಿ ಜೊತೆಗೆ ಕುಸುಮ ಅನ್ನು ಹೂವಿನ ಮೊಗ್ಗ ಬೆರೆಸಿ ಕೊಟ್ಟರೆ ಒಂದು ಹಿಡಿ ತಿನ್ನೋ ಬದಲು ನಾಕು ಹಿಡಿ ತಿಂತಾರೆ. ಅಷ್ಟು ಘಮಲು ಅ ಹೂವಿನ ಮೊಗ್ಗು, ಸುಮ್ಮನೆಯಾ ಕೂಸು ಬಿಸಲಗಾಲ ಕಳೆದು ಮಳೆಗಾಲದ ನಾಕು ಹನಿಗೆ ಈ ಗಾಳಿಕಾಲಕ್ಕೆ ಸಕಲೆಂಟು ಸೊಪ್ಪುಗಳು ಹುಟ್ಟಿ ಈ ದೇಹದ ನಾದವಾ ಸರಿಮಾಡತ್ತಾವೆ. ಈಗಲೇ ಅದು-ಇದು ತಿಂದು ನಾವೇ ಇಲ್ಲದ ಕಾಯಿಲೆ ತಂದುಕೊಳ್ಳವುದು. ಇವತ್ತು ಕುಂಬಳದ ಕುಡಿ ಬೆರೆಸಿ ಕೊಡ್ತೀನಿ ಒಣಮೆಣಸಿನ ಕಾಯಿ ಹಾಕಿ ವಗ್ಗರಣೆ ಮಾಡಿಸಿ ತಿನ್ನು ಚೆನ್ನಾಗಿರುತ್ತದೆ ಎಂದು ಹಲವು ಸೊಪ್ಪುಗಳ ಕೈಗಿತ್ತು ಕಳಿಸುತ್ತಾಳೆ.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago