ಹಾಡು ಪಾಡು

ಕಾಸು ಕೊಟ್ಟಿದ್ದರೆ ನಾನೂ ‘ಕವಿರತ್ನ’ನಾಗಬಹುದಿತ್ತು

• ಸ್ವಾಮಿ ಪೊನ್ನಾಚಿ

ಪತ್ರಿಕೆಗಳಲ್ಲಿ ಅಲ್ಲೊಂದು ಇಲ್ಲೊಂದು ಕವನ, ಕಥೆ ಪ್ರಕಟವಾಗಿ ನಾನು ಕೂಡ ಕನ್ನಡದ ಪ್ರಮುಖ ಸಾಹಿತಿ ಈಗ ಎಂದು ಆಗಾಗ್ಗೆ ಅನಿಸುತ್ತಿತ್ತು. ಅಷ್ಟೊತ್ತಿಗಾಗಲೇ ಕನ್ನಡ ಪುಸ್ತಕ ಪ್ರಾಧಿಕಾರದ ಧನ ಸಹಾಯ ಪಡೆದುಕೊಂಡು ಕವನ ಸಂಕಲನದ ಪುಸ್ತಕವು ಕೂಡ ಹೊರ ಬಂದಿತ್ತು. ಆಗಂತೂ ನನ್ನ ಪುಸ್ತಕವನ್ನು ಕನ್ನಡದ ಖ್ಯಾತ ಲೇಖಕರು ಓದುತ್ತಾರೆ, ಅಲ್ಲಿ ಇಲ್ಲಿ ನನ್ನ ಪುಸ್ತಕದ ಕುರಿತು ಮಾತನಾಡುತ್ತಾರೆ ಎಂದುಕೊಂಡು ಕೆಲ ಹಿರಿಯ ಸಾಹಿತಿಗಳ ವಿಳಾಸವನ್ನು ಹುಡುಕಿ ಪುಸ್ತಕವನ್ನು ಪೋಸ್ಟ್ ಮಾಡಿದ್ದಾಯಿತು. ಪತ್ರಿಕೆಗಳಿಗೆ ಪುಸ್ತಕ ಕಳಿಸಿದರೆ ವಿಮರ್ಶೆ ಪ್ರಕಟಿಸುತ್ತಾರೆ ಎಂದು ಯಾರೋ ಹೇಳಲಾಗಿ ಎಲ್ಲಾ ಪ್ರಮುಖ ಪತ್ರಿಕೆಗಳ ವಿಳಾಸಕ್ಕೆ ಎರಡೆರಡು ಕಾಪಿ ಪುಸ್ತಕಗಳನ್ನು ಕಳಿಸಿ ಆಯಿತು. ಪುಸ್ತಕ ಕಳಿಸಿದ ಮೇಲೆ ಎಲ್ಲಾ ಪತ್ರಿಕೆಗಳ ಭಾನುವಾರದ ಪುರವಣಿಗಳನ್ನು ದಬ್ಬಾಕುವುದೇ ಆಯಿತು. ಈ ವಾರ ಬರದಿದ್ದರೆ ಮುಂದಿನ ವಾರ ಬಂದೇ ಬರುತ್ತದೆ ಎಂದು, ಆ ವಾರವು ಇಲ್ಲದಿದ್ದರೆ ಮುಂದಿನ ವಾರ, ಹೀಗೆ ಕಾದು ಕಾದು ಆರು ತಿಂಗಳು, ವರ್ಷವಾದರೂ ಪುಸ್ತಕದ ವಿಮರ್ಶೆ ಮನೆ ಹಾಳಾಗಲಿ, ಆ ಪುಸ್ತಕದ ಕುರಿತು ಒಂದೇ ಒಂದು ಪರಿಚಯವು ಕೂಡ ಬರಲಿಲ್ಲ.

ಹೋಗಲಿ ಬಿಡು ಅತ್ತಾಗೆ, ನಮ್ಮ ಹಿರಿಯ ಸಾಹಿತಿಗಳಾದರೂ ಓದಿ ವಿಮರ್ಶೆ ಮಾಡುತ್ತಾರೆಂದು ಖುಷಿಯಾಗಿ ಕಾಲ ದೂಡುತ್ತಾ ಇರುವಾಗ; ನಾನು ಕಂಡು ಕೇಳಿರದ ಹಿರಿಯ ಸಾಹಿತಿಯೊಬ್ಬರು ಫೋನ್ಹಾಯಿಸಿ ನಿಮ್ಮ ಕವಿತೆಗಳನ್ನು ಓದಿದೆ ಅದ್ಭುತವಾಗಿವೆ. ನಿಮ್ಮಂಥ ಯುವಕರು ನಾಲ್ಕು ಜನಕ್ಕೆ ಗೊತ್ತಾಗಬೇಕು. ಒಂದು ಸಲ ಬೆಂಗಳೂರಿಗೆ ನಮ್ಮ ಸಂಘಕ್ಕೆ ಬನ್ನಿ ಮಾತನಾಡುವ ಎಂದು ಆಹ್ವಾನ ಇತ್ತರು. ನನ್ನನ್ನು ತಮ್ಮ ಸಂಘಕ್ಕೆ ಕರೆಯುತ್ತಿದ್ದಾರಲ್ಲ, ಒಮ್ಮೆ ಹೋಗಿ ಮಾತಾಡಿಸಿಕೊಂಡು ಬರಬೇಕು ಎಂದುಕೊಳ್ಳುತ್ತಿರುವಾಗಲೇ ಅದೇ ವ್ಯಕ್ತಿ ಮತ್ತೊಮ್ಮೆ ಫೋನಾಯಿಸಿ, ಈ ನವೆಂಬರ್‌ನಲ್ಲಿ ನಾವು ಒಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ನಿಮಗೆ ‘ಕವಿರತ್ನ’ ಎನ್ನುವ ಬಿರುದು ನೀಡಿ ಪ್ರಶಸ್ತಿ ನೀಡಬೇಕೆಂದಿದ್ದೇವೆ ಎಂದಾಗ ನಾನು ಖುಷಿಯಾಗಿ ಹೌದಾ! ಧನ್ಯವಾದಗಳು ಸರ್, ಬರುವೆ ಎಂದು ಹೇಳಿ ನನ್ನದೊಂದು ಫೋಟೋ, ವಿವರ ಎಲ್ಲವನ್ನು ಕಳುಹಿಸಿ
ಖುಷಿಯಾದೆ.

ವಿವರ ಕಳುಹಿಸಿದ ಮೂರು ದಿನಕ್ಕೆ ಮತ್ತೊಮ್ಮೆ ಕರೆ ಬಂದಿತು. ಏನಿಲ್ಲ ಕಾರ್ಯಕ್ರಮದ ಸಿದ್ಧತೆ ಮಾಡಿಕೊಳ್ಳಬೇಕಲ್ಲ, ಸದ್ಯಕ್ಕೆ ಐದು ಸಾವಿರ ಹಣ ಹಾಕಿಬಿಡಿ, ಉಳಿದದ್ದು ಆಮೇಲೆ ನೋಡಿಕೊಳ್ಳುವ’ ಎಂದು ತಮ್ಮ ಅಕೌಂಟ್ ಡೀಟೇಲ್‌ ಕಳಿಸಿದ್ದರು. ಅದಾಗಲೇ ಪುಸ್ತಕ ಮಾಡಿಸುವುದಕ್ಕಾಗಿ ಅಡ್ಡಕಸುಬಿ ಪ್ರಕಾಶಕನ ಬಳಿ ಸಿಕ್ಕಿಹಾಕಿಕೊಂಡು ದಿಕ್ಕಾಪಾಲಾಗಿ ಖರ್ಚು ಮಾಡಿದ್ದ ನನಗೆ ಈ ಪುಣ್ಯಾತ್ಮನಿಗೆ ಐದು ಸಾವಿರ ಕೊಡುವುದಕ್ಕೆ ಆ ಸಮಯದಲ್ಲಿ ಹಣ ಎಲ್ಲಿಂದ ಬರಬೇಕು!? ‘ಸದ್ಯಕ್ಕೆ ನನ್ನ ಬಳಿ ಹಣ ಇಲ್ಲ, ಈಗ ನೀವು ಕಾರ್ಯಕ್ರಮ ಮಾಡಿ, ಕಾರ್ಯಕ್ರಮ ಮುಗಿದ ಮೇಲೆ ಸಂಬಳ ಆದಾಗ ನೀಡುತ್ತೇನೆ ಎಂದು ನೆಪ ಹೇಳಿ ತಪ್ಪಿಸಿಕೊಂಡೆ. ಅವರೂ ಅಷ್ಟೇ ಸಂತೋಷದಿಂದ ಆಗಲಿ, ಪರವಾಗಿಲ್ಲ. ನಿಧಾನಕ್ಕೆ ಕೊಡುವಿರಂತೆ, ಆದರೆ ತಾವು ಮಾತ್ರ ಖಂಡಿತವಾಗಿಯೂ ಕಾರ್ಯಕ್ರಮಕ್ಕೆ ಬರಬೇಕು. ನಮ್ಮ ಪ್ರಶಸ್ತಿಯನ್ನು ಸ್ವೀಕರಿಸಬೇಕು. ನಮ್ಮ ಸಾಹಿತ್ಯ ಲೋಕದ ಹೆಮ್ಮೆ ನೀವು ಎನ್ನುತ್ತಾ, ಕಾರ್ಯಕ್ರಮಕ್ಕೆ ಬರಬೇಕು ಎಂದು ಪದೇಪದೇ ಒತ್ತಾಯಿಸುತ್ತಾ ಫೋನ್ ಇಟ್ಟರು.

ನವೆಂಬರ್ ತಿಂಗಳಿನಲ್ಲಿ ನನಗೊಂದು ‘ಕವಿರತ್ನ ಪ್ರಶಸ್ತಿ ಕೊಡುತ್ತಾರೆ ಜೊತೆಯಲ್ಲಿ ನೀವು ಬರಬೇಕು ಎಂದು ಆತ್ಮೀಯ ಸ್ನೇಹಿತರಿಗೆಲ್ಲ ಜಂಭದಿಂದ ಹೇಳಿಕೊಂಡು ಕಾರ್ಯಕ್ರಮದ ದಿನಕ್ಕಾಗಿ ಕಾಯುತ್ತಲೇ ಇದ್ದೆ. ಒಂದು ದಿನ ಪೋಸ್ಟಿನಲ್ಲಿ ಬೆಂಗಳೂರಿನ ಸಾಂಸ್ಕೃತಿಕ ಕಲಾ ಸಂಘದಿಂದ ಆಹ್ವಾನ ಪತ್ರಿಕೆ ಬಂದಿತು. ಸಂತೋಷಗೊಂಡ ನಾನು ಅದರಲ್ಲಿ ನನ್ನ ಹೆಸರು ನೋಡುವ ಎಂದು ಅವಸರವಸರವಾಗಿ ತೆಗೆದು ನೋಡಿದರೆ ‘ಕವಿರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಎಂದು ಹತ್ತು ಜನ ಕವಿಗಳ ಹೆಸರನ್ನು ದಪ್ಪ ಅಕ್ಷರದಲ್ಲಿ ಅವರ ಫೋಟೋ ಕೆಳಗೆ ಹಾಕಿದ್ದರು. ಅದರಲ್ಲಿ ನನಗೆ ಗೊತ್ತಿರುವ ಬಹುತೇಕ ಕವಿ ಮಿತ್ರರೇ ಇದ್ದರು. ನನ್ನದು ಮಾತ್ರ ಇರಲಿಲ್ಲ!

ನಾನು ದುಡ್ಡು ಕೊಡದಿದ್ದುದಕ್ಕೆ ನನಗೆ ಪ್ರಶಸ್ತಿ ಬರಲಿಲ್ಲ ಎಂದು ಸುಮ್ಮನಾದೆ. ಅದೇ ಪುಸ್ತಕಕ್ಕೆ ಬೇಂದ್ರೆ ಗ್ರಂಥ ಬಹುಮಾನ ಬಂದು, ಅಲ್ಲಿಂದ ಕರೆ ಬಂದಾಗ ನಾನು ಎಷ್ಟು ದುಡ್ಡು ಕೊಡಬೇಕು ಇದಕ್ಕೆ ಹೇಳಿ’ ಎಂದಿದ್ದೆ. ಅವರು ನಗುತ್ತಾ, ‘ನೀವೇನು ಕೊಡುವುದು ಬೇಡ, ನಾವೇ ಕೊಡುತ್ತೇವೆ ಬನ್ನಿ’ ಎಂದಿದ್ದರು!.

swamyponnachi123@gmail.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

9 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

10 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

10 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

10 hours ago